AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚಿನ ಅಬ್ಬರ; ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಹರಸಾಹಸ

ಮಾರ್ಚ್​ನಿಂದಲೂ ಬೆಂಕಿ ಆವರಿಸಿದ್ದು ಅದನ್ನು ನಿಯಂತ್ರಣಕ್ಕೆ ತರಲು ಸ್ಥಳೀಯ ಅರಣ್ಯ ಇಲಾಖೆ ಪ್ರಯತ್ನ ಮಾಡುತ್ತಲೇ ಇದೆ. ಸುತ್ತಲಿನ ಹಳ್ಳಿಗಳ ಜನರ ಸಹಾಯವನ್ನೂ ತೆಗೆದುಕೊಂಡು ಬೆಂಕಿ ಆರಿಸುವ ಕೆಲಸದಲ್ಲಿ ನಿರತವಾಗಿದೆ.

ಜಾರ್ಖಂಡ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚಿನ ಅಬ್ಬರ; ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಹರಸಾಹಸ
ಕಾಡ್ಗಿಚ್ಚು
TV9 Web
| Edited By: |

Updated on: Apr 07, 2022 | 6:13 PM

Share

ಜಾರ್ಖಂಡ್​​ನ ಲತೇಹಾರ್​ನಲ್ಲಿರುವ ಪಲಮು ಹುಲಿ ಸಂರಕ್ಷಿತ ಪ್ರದೇಶದ ಮಧ್ಯ ಭಾಗದಲ್ಲಿ ಭಯಂಕರ ಕಾಡ್ಗಿಚ್ಚು ಆವರಿಸಿದ್ದು, ಅತಿ ವೇಗವಾಗಿ ಬೆಂಕಿ ಪಸರಿಸುತ್ತಿದೆ. ಬೆಂಕಿಯನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ. ಬರೇಸಂಧ್, ಗಾರು ಪೂರ್ವ, ಗಾರು ಪಶ್ಚಿಮ ಮತ್ತು ಮಹುವದಂಡ್ ಅರಣ್ಯ ಪ್ರದೇಶಗಳಲ್ಲಿ ಮಾರ್ಚ್​ ತಿಂಗಳಿಂದಲೂ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸುವ ಪ್ರಯತ್ನಗಳ ನಡುವೆಯೂ ವೇಗವಾಗಿ ಪಸರಿಸುತ್ತಿದೆ.

ಈ ಭಾಗದ ಕಾಡುಗಳಲ್ಲಿ ಈಗ ಮಹುವಾ ಎಂಬ ಒಂದು ಬಗೆಯ ಹಣ್ಣು ಆಗುತ್ತದೆ. ಹಲವು ಔಷಧೀಯ ಗುಣಗಳನ್ನು ಹೊಂದಿರುವ ಮಹುವಾ ಹಣ್ಣುಗಳನ್ನು ಕೊಯ್ಯಲು ಸ್ಥಳೀಯರು ಅರಣ್ಯದೊಳಗೆ ಹೋಗುತ್ತಾರೆ. ಅಲ್ಲಿ ಸೊಳ್ಳೆ ಮತ್ತಿತರ ಕೀಟಗಳಿಂದ ಪಾರಾಗಲು ಒಣಗಿದ ಎಲೆಗಳಿಗೆ ಬೆಂಕಿ ಹಾಕಿಕೊಳ್ಳುತ್ತಾರೆ. ಅವರು ಸರಿಯಾಗಿ ಅದನ್ನು ಆರಿಸದೆ ಬರದೆ ಇದ್ದರೆ ಹೀಗೆ ಕಾಡ್ಗಿಚ್ಚು ಉಂಟಾಗುತ್ತದೆ.  ಇನ್ನು ಕೆಲವು ಬಾರಿ ಅರಣ್ಯದಲ್ಲಿಯೇ ವಾಸವಾಗಿರುವ ಜನರು ದಟ್ಟಾರಣ್ಯದಲ್ಲಿ ದಾರಿ ಮಾಡಿಕೊಳ್ಳಲು ಪೊದೆಗಳನ್ನು ಸುಡುತ್ತಾರೆ. ಅದೂ ಕೂಡ ಕಾಡ್ಗಿಚ್ಚಿಗೆ ಕಾರಣವಾಗುತ್ತದೆ. ಇಂಥದ್ದೇ ಕಾರಣಕ್ಕೆ ಬೆಂಕಿ ಹೊತ್ತಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಹೊತ್ತಿದ ಬೆಂಕಿ ಬೇಗ ಆರುವುದೂ ಇಲ್ಲ.

ಮಾರ್ಚ್​ನಿಂದಲೂ ಬೆಂಕಿ ಆವರಿಸಿದ್ದು ಅದನ್ನು ನಿಯಂತ್ರಣಕ್ಕೆ ತರಲು ಸ್ಥಳೀಯ ಅರಣ್ಯ ಇಲಾಖೆ ಪ್ರಯತ್ನ ಮಾಡುತ್ತಲೇ ಇದೆ. ಸುತ್ತಲಿನ ಹಳ್ಳಿಗಳ ಜನರ ಸಹಾಯವನ್ನೂ ತೆಗೆದುಕೊಂಡು ಬೆಂಕಿ ಆರಿಸುವ ಕೆಲಸದಲ್ಲಿ ನಿರತವಾಗಿದೆ. ಅರಣ್ಯಕ್ಕೆ ಹಬ್ಬಿದ ಕಾಡ್ಗಿಚ್ಚಿನಿಂದ ಈಗಾಗಲೇ ಭಾರಿ ಪ್ರಮಾಣದಲ್ಲಿ ನಷ್ಟವಾಗಿದ್ದಾಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಪ್ರಾಣಿಗಳನ್ನು ಕಾಪಾಡಲೂ ಕೂಡ ಕ್ರಮ ಕೈಗೊಂಡಿದ್ದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮನೆ ಮೇಲಿನ ದಾಳಿ ಬಿಜೆಪಿ ಗೂಂಡಾಗಿರಿ; ಕಾಶ್ಮೀರದಲ್ಲಿ ಹತ್ಯಾಕಾಂಡ ನಡೆದಾಗ ಬಿಜೆಪಿ ಸರ್ಕಾರವಿತ್ತು, ಯಾಕೆ ಪುನರ್ವಸತಿ ಕಲ್ಪಿಸಿಲ್ಲ?: ಕೇಜ್ರಿವಾಲ್

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!