AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕುಂದುಕೊರತೆ ಪರಿಹಾರ ಅಧಿಕಾರಿ ನೇಮಕ ಮಾಡಲು 8 ವಾರಗಳ ಸಮಯ ಬೇಕು; ದೆಹಲಿ ಹೈಕೋರ್ಟ್​ಗೆ ಟ್ವಿಟರ್​​ನಿಂದ ಮಾಹಿತಿ

Twitter: ಭಾರತದ ಹೊಸ ಐಟಿ ನಿಯಮಗಳನ್ನು ಪಾಲಿಸಲು ಟ್ವಿಟರ್​ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್​ಗೆ ಅಫಿಡವಿಟ್​ ಸಲ್ಲಿಸಿತ್ತು. ಅದರ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ಕೂಡ ಟ್ವಿಟರ್​ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು.

ಭಾರತದಲ್ಲಿ ಕುಂದುಕೊರತೆ ಪರಿಹಾರ ಅಧಿಕಾರಿ ನೇಮಕ ಮಾಡಲು 8 ವಾರಗಳ ಸಮಯ ಬೇಕು; ದೆಹಲಿ ಹೈಕೋರ್ಟ್​ಗೆ ಟ್ವಿಟರ್​​ನಿಂದ ಮಾಹಿತಿ
ದೆಹಲಿ ಹೈಕೋರ್ಟ್
TV9 Web
| Edited By: |

Updated on: Jul 08, 2021 | 2:03 PM

Share

ಭಾರತ ಸರ್ಕಾರ ಹೊಸ ಐಟಿ ರೂಲ್ಸ್​ಗಳನ್ನು ಪಾಲಿಸುವಲ್ಲಿ ಒಂದಲ್ಲ ಒಂದು ಕ್ಯಾತೆ ತೆಗೆಯುತ್ತಲೇ ಬಂದಿರುವ ಟ್ವಿಟರ್​, ಇದೀಗ ಇನ್ನು 8 ವಾರಗಳಲ್ಲಿ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡುವುದಾಗಿ ದೆಹಲಿ ಹೈಕೋರ್ಟ್​ಗೆ ತಿಳಿಸಿದೆ. ಭಾರತದ ಹೊಸ ಐಟಿ ನಿಯಮಗಳನ್ನು ಪಾಲಿಸಲು ಟ್ವಿಟರ್​ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್​ಗೆ ಅಫಿಡವಿಟ್​ ಸಲ್ಲಿಸಿತ್ತು. ಅದರ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ಕೂಡ ಟ್ವಿಟರ್​ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು. ಸರಿಯಾದ ಮಾಹಿತಿ ನೀಡದೆ, ನೀವು ನಮ್ಮನ್ನೇ ತಪ್ಪುದಾರಿಗೆ ಎಳೆಯುತ್ತಿದ್ದೀರಿ ಎಂದು ಹೈಕೋರ್ಟ್ ಹೇಳಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಟ್ವಿಟರ್​, ನಮಗೆ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡಲು ಇನ್ನು 8ವಾರಗಳು ಬೇಕು ಎಂದು ಹೇಳಿದೆ.

ಕೇಂದ್ರದ ನೂತನ ಐಟಿ ನಿಯಮಗಳ ಪಾಲನೆ ಸಂಬಂಧ ಭಾರತದಲ್ಲಿ ಸಂಪರ್ಕ ಕಚೇರಿ ಸ್ಥಾಪಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಈ ಕಚೇರಿ ಶಾಶ್ವತವಾಗಿ ಇರಲಿದ್ದು, ಇಲ್ಲಿಗೆ ನಮ್ಮ ಗ್ರಾಹಕರು ಬಂದು ದೂರು ನೀಡಬಹುದು. ಕುಂದುಕೊರತೆ, ಸಮಸ್ಯೆಗಳನ್ನು ಹೇಳಿಕೊಳ್ಳಬಹುದು ಎಂದು ಟ್ವಿಟರ್​ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ಮಧ್ಯಂತರವಾಗಿ ನೇಮಕ ಮಾಡಲಾಗವುದು ಎಂದು ಟ್ವಿಟರ್ ಮಾಹಿತಿ ನೀಡಿರಲಿಲ್ಲ. ಭಾರತದಿಂದ ಬಂದ ಕುಂದುಕೊರತೆಯನ್ನು ಯುಎಸ್​ನಲ್ಲಿ ಅಲ್ಲಿನ ಅಧಿಕಾರಿ ಪರಿಶೀಲನೆ ಮಾಡುವಂತೆ ಯೋಜನೆ ರೂಪಿಸಲಾಗಿದೆ. ಆದರೆ ಇದು ಭಾರತದ 2021ರ ಹೊಸ ಐಟಿ ನಿಯಮಗಳ ಅನುಸರಣೆ ಆದಂತೆ ಆಗಲಿಲ್ಲ. ಹೊಸದಾದ ಐಟಿ ನಿಯಮಗಳು ಈ ನೆಲದ ಕಾನೂನುಗಳಾಗಿದ್ದು ಅದನ್ನು ಪಾಲನೆ ಮಾಡುವುದು ಟ್ವಿಟರ್​ ಸೇರಿ ಎಲ್ಲ ಸಾಮಾಜಿಕ ಮಾಧ್ಯಮಗಳಿಗೆ ಕಡ್ಡಾಯ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಅಫಿಡವಿಟ್​ ಸಲ್ಲಿಸಿತ್ತು. ಅದಾದ ಬಳಿಕ ಹೈಕೋರ್ಟ್ ಕೂಡ ಟ್ವಿಟರ್​ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಕನಕದಾಸ ವೃತ್ತ ನಿರ್ಮಾಣ ವಿರೋಧಿಸಿ ಸಂಸದ ಕರಡಿ ಸಂಗಣ್ಣ ಪತ್ರ; ಸಂಗಣ್ಣ ಕ್ಷಮೆ ಯಾಚನೆಗೆ ಪಟ್ಟು ಹಿಡಿದ ಕುರುಬ ಸಮುದಾಯ

Will Appoint Grievance redressal Officer in 8 Weeks Twitter told to Delhi Highcourt

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ