AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಕಂಡುಬಂದರೆ ಬಿಹಾರದ SIR ಪ್ರಕ್ರಿಯೆ ರದ್ದು; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಎಚ್ಚರಿಕೆ

ಬಿಹಾರದ SIR ಬಗ್ಗೆ ಸುಪ್ರೀಂ ಕೋರ್ಟ್‌ ಚುನಾವಣಾ ಆಯೋಗಕ್ಕೆ ಇಂದು ಎಚ್ಚರಿಕೆ ನೀಡಿದೆ. ಈ ಪ್ರಕ್ರಿಯೆಯಲ್ಲಿ ಯಾವುದಾದರೂ ಅಕ್ರಮ ಪತ್ತೆಯಾದರೆ ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆಯನ್ನು ರದ್ದುಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಆದರೆ ಚುನಾವಣಾ ಆಯೋಗದ ವಿವಾದಿತ ವಿಧಾನದ ಕುರಿತು ಅಂತಿಮ ವಾದಗಳಿಗಾಗಿ ಅಕ್ಟೋಬರ್ 7ರಂದು ದಿನವನ್ನು ನಿಗದಿಪಡಿಸಿದೆ.

ಅಕ್ರಮ ಕಂಡುಬಂದರೆ ಬಿಹಾರದ SIR ಪ್ರಕ್ರಿಯೆ ರದ್ದು; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಎಚ್ಚರಿಕೆ
Supreme Court
ಸುಷ್ಮಾ ಚಕ್ರೆ
|

Updated on: Sep 15, 2025 | 4:56 PM

Share

ನವದೆಹಲಿ, ಸೆಪ್ಟೆಂಬರ್ 15: ಭಾರತೀಯ ಚುನಾವಣಾ ಆಯೋಗ (ECI) ಅಳವಡಿಸಿಕೊಂಡ ಯಾವುದೇ ವಿಧಾನದಲ್ಲಿ ಅಕ್ರಮ ಕಂಡುಬಂದರೆ ಚುನಾವಣೆಗೆ ಸಜ್ಜಾಗಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಚಾಲನೆಯನ್ನು ರದ್ದುಗೊಳಿಸಲಾಗುವುದು ಎಂದು ಸುಪ್ರೀಂ ಕೋರ್ಟ್ (Supreme Court) ಇಂದು ಹೇಳಿದೆ. ಅಕ್ಟೋಬರ್ 7ರಂದು ಈ ವಿಚಾರವಾಗಿ ಅಂತಿಮ ವಿಚಾರಣೆಯನ್ನು ನಿಗದಿಪಡಿಸಲಾಗಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ ವಿಷಯವನ್ನು ವಿಚಾರಣೆ ನಡೆಸುತ್ತಿದೆ.

SIR ಪ್ರಕ್ರಿಯೆಯು ಸಾಕಷ್ಟು ಸುರಕ್ಷತೆಗಳಿಲ್ಲದೆ ಮತದಾರರನ್ನು ಅನಿಯಂತ್ರಿತವಾಗಿ ಡಿಲೀಟ್ ಮಾಡಲು ಅನುಮತಿಸುತ್ತದೆ. ಇದು ಲಕ್ಷಾಂತರ ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳುವ, ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ದುರ್ಬಲಗೊಳಿಸುವ ಸಾಧ್ಯತೆಯಿದೆ ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರದ SIR ಕುರಿತು ಸೆ. 30ರ ನಂತರ ಸಲ್ಲಿಕೆಯಾದ ಆಕ್ಷೇಪಣೆಗಳನ್ನೂ ಪರಿಗಣಿಸುತ್ತೇವೆ; ಸುಪ್ರೀಂ ಕೋರ್ಟ್​ಗೆ ಚುನಾವಣಾ ಆಯೋಗ ಮಾಹಿತಿ

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಸಾಂವಿಧಾನಿಕ ಪ್ರಾಧಿಕಾರವಾಗಿರುವ ಚುನಾವಣಾ ಸಂಸ್ಥೆಯು ಬಿಹಾರ SIR ಪ್ರಕ್ರಿಯೆಯಲ್ಲಿ ಕಾನೂನು ಮತ್ತು ಕಡ್ಡಾಯ ನಿಯಮಗಳನ್ನು ಅನುಸರಿಸುತ್ತದೆ ಎಂದು ಭಾವಿಸುತ್ತದೆ ಎಂದು ಹೇಳಿದೆ. ಬಿಹಾರದ SIRನಲ್ಲಿ ಆಧಾರ್ ಕಾರ್ಡ್ ಅನ್ನು 12ನೇ ನಿಗದಿತ ದಾಖಲೆಯಾಗಿ ಸೇರಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದ ಸೆಪ್ಟೆಂಬರ್ 8ರ ಆದೇಶವನ್ನು ಮಾರ್ಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

“ಚಾಲನಾ ಪರವಾನಗಿಗಳನ್ನು ನಕಲಿ ಮಾಡಬಹುದು, ಪಡಿತರ ಚೀಟಿಗಳನ್ನು ನಕಲಿ ಮಾಡಬಹುದು, ಹಲವಾರು ದಾಖಲೆಗಳನ್ನು ನಕಲಿ ಮಾಡಬಹುದು, ಕಾನೂನು ಅನುಮತಿಸುವ ಮಟ್ಟಿಗೆ ಆಧಾರ್ ಅನ್ನು ಬಳಸಿಕೊಳ್ಳಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ. “ನಾವು ಅಕ್ಟೋಬರ್ 7ರಂದು ಈ ವಿಷಯವನ್ನು ಕೈಗೆತ್ತಿಕೊಳ್ಳುತ್ತೇವೆ. ಈ ಮಧ್ಯೆ ನೀವು ಪ್ರತಿಯೊಬ್ಬರೂ ವಾದಗಳ ಸಂಕ್ಷಿಪ್ತ ಟಿಪ್ಪಣಿಯನ್ನು ಸಿದ್ಧಪಡಿಸಿಕೊಳ್ಳಿ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ಆಧಾರ್ ಪೌರತ್ವದ ದಾಖಲೆಯಲ್ಲ, ಆದರೆ ಗುರುತಿನ ಚೀಟಿಯಾಗಿ ಬಳಸಬಹುದು; ಸುಪ್ರೀಂ ಕೋರ್ಟ್

ಸೆಪ್ಟೆಂಬರ್ 8ರಂದು ಸುಪ್ರೀಂ ಕೋರ್ಟ್ ಬಿಹಾರ SIR ಡ್ರೈವ್‌ನಲ್ಲಿ ಮತದಾರರ ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್ ಅನ್ನು ಸೇರಿಸಲು ಚುನಾವಣಾ ಸಂಸ್ಥೆಗೆ ನಿರ್ದೇಶನ ನೀಡಿತು. ಮತದಾರರಿಂದ ಆಧಾರ್ ಕಾರ್ಡ್ ಅನ್ನು ಸ್ವೀಕರಿಸದಿದ್ದಕ್ಕಾಗಿ ಚುನಾವಣಾ ಅಧಿಕಾರಿಗಳಿಗೆ ನೀಡಿದ ಶೋಕಾಸ್ ನೋಟಿಸ್‌ಗಳ ಕುರಿತು ಚುನಾವಣಾ ಆಯೋಗದ ವಿವರಣೆಯನ್ನು ಸಹ ಕೋರಿತು. ಈ ವಿಚಾರಣೆಯ ಸಮಯದಲ್ಲಿ ಆಧಾರ್ ಕಾರ್ಡ್ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಕಾಯ್ದೆಯ ಸೆಕ್ಷನ್ 23 (4)ಗೆ ಹೊರತಾಗಿಲ್ಲ ಎಂದು ನ್ಯಾಯಾಲಯ ಹೇಳಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!