AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಹೈಡ್ರೋಜನ್​ ಬಾಂಬ್ ಸ್ಫೋಟಿಸುತ್ತೇನೆ‘-ಫಡ್ನವೀಸ್​ಗೆ ನವಾಬ್​ ಮಲ್ಲಿಕ್​ ತಿರುಗೇಟು !

ಮಹಾರಾಷ್ಟ್ರ ಪ್ರತಿಪಕ್ಷ ನಾಯಕರಾಗಿರುವ ದೇವೇಂದ್ರ ಫಡ್ನವೀಸ್​ಗೆ ಕೂಡ ಭೂಗತ ಜಗತ್ತಿನ ನಂಟು ಇದೆ ಎಂಬುದನ್ನು ನಾನು ಸಾಬೀತು ಪಡಿಸುತ್ತೇನೆ ಎಂದು ನವಾಬ್​ ಮಲ್ಲಿಕ್​ ಹೇಳಿದ್ದಾರೆ.

‘ನಾನು ಹೈಡ್ರೋಜನ್​ ಬಾಂಬ್ ಸ್ಫೋಟಿಸುತ್ತೇನೆ‘-ಫಡ್ನವೀಸ್​ಗೆ ನವಾಬ್​ ಮಲ್ಲಿಕ್​ ತಿರುಗೇಟು !
ನವಾಬ್​ ಮಲ್ಲಿಕ್​
TV9 Web
| Edited By: |

Updated on: Nov 09, 2021 | 5:09 PM

Share

ಮಹಾರಾಷ್ಟ್ರ ರಾಜಕೀಯದಲ್ಲೀಗ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಮತ್ತು ಸಚಿವ ನವಾಬ್​ ಮಲ್ಲಿಕ್​ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ದೇವೇಂದ್ರ ಫಡ್ನವೀಸ್​​ಗೆ ಮಾದಕ ದ್ರವ್ಯ ಪೆಡ್ಲರ್​​ಗಳ ಜತೆ ಲಿಂಕ್​ ಇದೆ ಎಂದು ಆರೋಪ ಮಾಡಿದ್ದ ನವಾಬ್​ ಮಲ್ಲಿಕ್​ಗೆ ಇಂದು ಫಡ್ನವೀಸ್​ ಶಾಕ್​ ಕೊಟ್ಟಿದ್ದಾರೆ. ದೇವೇಂದ್ರ ಫಡ್ನವೀಸ್​ಗೆ ಭೂಗತ ಲೋಕದ ನಂಟಿದೆ ಎಂದು ಹೇಳಿ, ಅವರು ಮುಂಬೈ ಸ್ಫೋಟದ ಆರೋಪಿಗಳೊಟ್ಟಿಗೆ ಆಸ್ತಿ ವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಕೆಲವು ಸಾಕ್ಷಿಗಳನ್ನೂ ಪ್ರಸ್ತುತಪಡಿಸಿದ್ದಾರೆ. 

ಅದಕ್ಕೆ ಪ್ರತಿಕ್ರಿಯೆ ನೀಡಿರುವ ನವಾಬ್​ ಮಲ್ಲಿಕ್​, ಮಹಾರಾಷ್ಟ್ರ ಪ್ರತಿಪಕ್ಷ ನಾಯಕರಾಗಿರುವ ದೇವೇಂದ್ರ ಫಡ್ನವೀಸ್​ಗೆ ಕೂಡ ಭೂಗತ ಜಗತ್ತಿನ ನಂಟು ಇದೆ ಎಂಬುದನ್ನು ನಾನು ಸಾಬೀತು ಪಡಿಸುತ್ತೇನೆ. ಈ ಸಂಬಂಧ ಹೈಡ್ರೋಜನ್​ ಬಾಂಬ್​ ಸ್ಫೋಟಿಸುತ್ತೇನೆ ಎಂದು ಹೇಳಿದ್ದಾರೆ.  ಫಡ್ನವೀಸ್​ ಸುದ್ದಿಗೋಷ್ಠಿ ಬಳಿಕ ಮಾತನಾಡಿದ ಅವರು, ಫಡ್ನವೀಸ್​ಗೆ ಅಂಡರ್​ವರ್ಲ್ಡ್​​ ಲಿಂಕ್​ ಇರುವುದನ್ನು ನಾನೂ ಸಾಕ್ಷಿ ಸಮೇತ ಬಹಿರಂಗಪಡಿಸುತ್ತೇನೆ ಎಂದಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ್ದ ದೇವೇಂದ್ರ ಫಡ್ನವೀಸ್​, ನವಾಬ್​ ಮಲ್ಲಿಕ್​ಗೆ ಭೂಗತ ಪಾತಕಿಗಳ ಸಂಪರ್ಕವಿದೆ. 1993ರಲ್ಲಿ ನಡೆದ ಮುಂಬೈ ಸ್ಫೋಟದ ಆರೋಪಿಗಳಾದ ಸಲೀಂ ಪಟೇಲ್​ ಮತ್ತು ಸರ್ದಾರ್​ ಖಾನ್​​ ಎಂಬುವರಿಂದ ಅವರು ಕುರ್ಲಾದಲ್ಲಿ ಆಸ್ತಿ ಖರೀದಿ ಮಾಡಿದ್ದಾರೆ. ಅದಕ್ಕೆ ಗೌವಾಲಾ ಕಾಂಪೌಂಡ್​ ಎಂದು ಹೆಸರಿಡಲಾಗಿದೆ. 30 ಲಕ್ಷ ರೂಪಾಯಿ ಆಸ್ತಿಗೆ 20 ಲಕ್ಷ ರೂಪಾಯಿ ಪಾವತಿಸಲಾಗಿದೆ. ಈ ಒಪ್ಪಂದಕ್ಕೆ ಸಹಿ ಹಾಕಿದವರಲ್ಲಿ ಒಬ್ಬರು ನವಾಬ್​ ಮಲ್ಲಿಕ್ ಪುತ್ರ ಎಂದು ಆರೋಪಿಸಿದ್ದರು. ಈ ಸಲೀಂ ಪಟೇಲ್​ ಗ್ಯಾಂಗ್​ಸ್ಟರ್​ ದಾವೂದ್ ಇಬ್ರಾಹಿಂನ ಸಹಾಯಕನೇ ಆಗಿದ್ದಾನೆ. ದಾವೂಬ್​ ಇಬ್ರಾಹಿಂನ ಸಹೋದರಿ ಹಸೀನಾ ಪಾರ್ಕಾರ್​​ ಕಾರಿನ ಡ್ರೈವರ್ ಆಗಿದ್ದ. 1993ರ ಮುಂಬೈ ಸ್ಫೋಟದ ಮಾಸ್ಟರ್​ ಮೈಂಡ್​ ಆಗಿರುವ ದಾವೂದ್​ ಇಬ್ರಾಹಿಂ ಆಪ್ತ ಸಲೀಂ ಪಟೇಲ್​ ಕೂಡ ಭೂಗತ ಜಗತ್ತಿನಲ್ಲಿ ಇದ್ದವನೇ ಆಗಿದ್ದಾನೆ.  ಈ ಸಲೀಂ ಪಟೇಲ್​ ಮತ್ತು ಹಸೀನಾ ಇಬ್ಬರೂ ಸೇರಿ ಭೂ ಮಾಫಿಯಾ ನಡೆಸುತ್ತಿದ್ದರು. ಭೂಮಿ ಕಬಳಿಸುವುದೇ ಅವರ ಕಾಯಕವಾಗಿತ್ತು ಎಂದೂ ಹೇಳಿದ್ದರು.

ಇದನ್ನೂ ಓದಿ: ಹೇಳಿದಂತೆ ನಡೆದ ದೇವೇಂದ್ರ ಫಡ್ನವೀಸ್​; ಮುಂಬೈ ಸ್ಫೋಟದ ಆರೋಪಿಗಳೊಂದಿಗೆ ನವಾಬ್​ ಮಲ್ಲಿಕ್​ ಆಸ್ತಿ ವ್ಯವಹಾರದ ಬಗ್ಗೆ ಮಾಹಿತಿ ಬಹಿರಂಗ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?