AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಾಬ್​ ಮಲಿಕ್​ ಬಗ್ಗೆ ಸ್ಫೋಟಕ ವಿಷಯ ಬಹಿರಂಗ ಮಾಡ್ತೇನೆ; ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಎಚ್ಚರಿಕೆ

ಜೈದೀಪ್​ ರಾಣಾನೊಂದಿಗೆ ಫೋಟೋ ತೆಗೆಸಿಕೊಂಡಾಕ್ಷಣ ಅವನೊಂದಿಗೆ ಸಂಬಂಧ ಇದೆ ಎಂದು ಭಾವಿಸಬೇಕಾಗಿಲ್ಲ. ನದಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ತಂಡವೊಂದು ನಮ್ಮನ್ನು ಭೇಟಿಯಾಗಿತ್ತು. ಆಗ ತೆಗೆಸಿಕೊಂಡ ಫೋಟೋ ಇದಾಗಿದೆ ಎಂದು ಫಡ್ನವೀಸ್​ ಸ್ಪಷ್ಟನೆ ನೀಡಿದ್ದಾರೆ.

ನವಾಬ್​ ಮಲಿಕ್​ ಬಗ್ಗೆ ಸ್ಫೋಟಕ ವಿಷಯ ಬಹಿರಂಗ ಮಾಡ್ತೇನೆ; ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಎಚ್ಚರಿಕೆ
ದೇವೇಂದ್ರ ಫಡ್ನವೀಸ್​ ಮತ್ತು ನವಾಬ್​ ಮಲಿಕ್
TV9 Web
| Edited By: |

Updated on:Nov 01, 2021 | 3:32 PM

Share

ಮುಂಬೈ ಡ್ರಗ್ಸ್​ ಕೇಸ್​​ಗೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಎನ್​ಸಿಪಿ ಸಚಿವ ನವಾಬ್​ ಮಲಿಕ್​ ಇಂದು ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೆಸರನ್ನು ಎಳೆದುತಂದಿದ್ದಾರೆ. ಮಾದಕ ದ್ರವ್ಯ ಸಾಗಣೆ ಪ್ರಕರಣದಲ್ಲಿ ಈಗಾಗಲೇ ಜೈಲುಪಾಲಾಗಿರುವ ಡ್ರಗ್​ ಪೆಡ್ಲರ್​ ಜೈದೀಪ್​ ರಾಣಾ ಅವರೊಂದಿಗೆ ದೇವೇಂದ್ರ ಫಡ್ನವೀಸ್​ ಮತ್ತು ಅವರ ಪತ್ನಿ ಅಮೃತಾ ಫಡ್ನವೀಸ್​ ನಿಂತಿರುವ ಒಂದೆರಡು ಫೋಟೋಗಳನ್ನು ಸೋಷಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದು ಇದೀಗ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಆದರೆ ಅದರ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್​​ ನವಾಬ್​​ ಮಲಿಕ್​ಗೆ ತಿರುಗೇಟು ನೀಡಿದ್ದು, ನವಾಬ್​ ಮಲಿಕ್​​ಗೂ, ಭೂಗತ ಜಗತ್ತಿಗೂ ಇರುವ ಸಂಪರ್ಕವನ್ನು ದೀಪಾವಳಿ ನಂತರ ನಾವು ಬಹಿರಂಗಪಡಿಸುತ್ತೇವೆ ಎಂದು ಹೇಳಿದ್ದಾರೆ. 

ನವಾಬ್​ ಮಲಿಕ್​ ಅನಗತ್ಯವಾಗಿ ಡ್ರಗ್ಸ್​ ಕೇಸ್​​ನಲ್ಲಿ ನನ್ನ ಮತ್ತು ಪತ್ನಿ ಅಮೃತಾಳ ಹೆಸರನ್ನು ಎಳೆದುತಂದಿದ್ದಾರೆ. ಇದು ಆಧಾರ ರಹಿತವಾದ ಆರೋಪ. ಆದರೇನು ಈಗ ನವಾಬ್​ ಮಲಿಕ್​ ಆಟ ಶುರು ಮಾಡಿದ್ದಾರೆ..ಪಟಾಕಿ ಹಚ್ಚಿದ್ದಾರೆ. ಇದಕ್ಕೊಂದು ಲಾಜಿಕಲ್​ ಅಂತ್ಯವನ್ನು ನಾನು ಕೊಡುತ್ತೇನೆ. ದೀಪಾವಳಿಯ ನಂತರ ನಾನು ಬಾಂಬ್​ ಸ್ಫೋಟಿಸುತ್ತೇನೆ ಎಂದು ಹೇಳಿದ್ದಾರೆ.  ಮುಂಬೈ ಭೂಗತ ಜಗತ್ತಿಗೂ, ನವಾಬ್​ ಮಲಿಕ್​ಗೂ ಇರುವ ಸಂಪರ್ಕವನ್ನು ನಾನು ಸಾರ್ವಜನಿಕರ ಎದುರು, ದಾಖಲೆ ಸಮೇತ ಪ್ರಸ್ತುತ ಪಡಿಸುತ್ತೇನೆ ಎಂದು ಹೇಳಿದ್ದಾರೆ.

ಈ ಜೈದೀಪ್​ ರಾಣಾನೊಂದಿಗೆ ಫೋಟೋ ತೆಗೆಸಿಕೊಂಡಾಕ್ಷಣ ಅವನೊಂದಿಗೆ ಸಂಬಂಧ ಇದೆ ಎಂದು ಭಾವಿಸಬೇಕಾಗಿಲ್ಲ. ನದಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ತಂಡವೊಂದು ನಮ್ಮನ್ನು ಭೇಟಿಯಾಗಿತ್ತು. ಆಗ ತೆಗೆಸಿಕೊಂಡ ಫೋಟೋ ಇದಾಗಿದೆ. ಆ ತಂಡದೊಂದಿಗೆ ಇರುವವರೆಲ್ಲರೊಂದಿಗೂ ಫೋಟೋ ಇದೆ. ಆದರೆ ಈ ಫೋಟೋವನ್ನಷ್ಟೇ ಹಾಕುವ ಮೂಲಕ ನವಾಬ್​ ಮಲಿಕ್​ ಬೇರೇನೋ ಹೇಳಲು ಹೊರಟಿದ್ದಾರೆ ಎಂದು ಫಡ್ನವೀಸ್​ ಹೇಳಿದ್ದಾರೆ.  ಮುಂಬೈ ಡ್ರಗ್​ ಕೇಸ್​ಗೆ ಸಂಬಂಧಪಟ್ಂತೆ ನವಾಬ್​ ಮಲಿಕ್​ ಫಡ್ನವೀಸ್​ ವಿರುದ್ಧ ಆರೋಪ ಮಾಡಿದ್ದಲ್ಲದೆ, ಅವರ ಆಡಳಿತ ಅವಧಿಯಲ್ಲೇ ಅಂದರೆ, 2014-2018ರ ಅವಧಿಯಲ್ಲೇ ಮುಂಬೈನಲ್ಲಿ ಮಾದಕ ದ್ರವ್ಯದ ಪ್ರಮಾಣ ಹೆಚ್ಚಾಗಿದೆ ಎಂದೂ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪ್ರಕಾಶ್ ಝಾರ ವೆಬ್ ಸರಣಿಯಿಂದ ಡಾಬರ್ ಮತ್ತು ಸಬ್ಯಸಾಚಿ ಮಂಗಳಸೂತ್ರವರೆಗೆ: ಮಧ್ಯಪ್ರದೇಶದ ಗೃಹ ಸಚಿವರ ಆಕ್ಷೇಪ, ನಿಲುವುಗಳು ಹೀಗಿತ್ತು

Published On - 3:31 pm, Mon, 1 November 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ