AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಾಬ್​ ಮಲಿಕ್​ ಬಗ್ಗೆ ಸ್ಫೋಟಕ ವಿಷಯ ಬಹಿರಂಗ ಮಾಡ್ತೇನೆ; ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಎಚ್ಚರಿಕೆ

ಜೈದೀಪ್​ ರಾಣಾನೊಂದಿಗೆ ಫೋಟೋ ತೆಗೆಸಿಕೊಂಡಾಕ್ಷಣ ಅವನೊಂದಿಗೆ ಸಂಬಂಧ ಇದೆ ಎಂದು ಭಾವಿಸಬೇಕಾಗಿಲ್ಲ. ನದಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ತಂಡವೊಂದು ನಮ್ಮನ್ನು ಭೇಟಿಯಾಗಿತ್ತು. ಆಗ ತೆಗೆಸಿಕೊಂಡ ಫೋಟೋ ಇದಾಗಿದೆ ಎಂದು ಫಡ್ನವೀಸ್​ ಸ್ಪಷ್ಟನೆ ನೀಡಿದ್ದಾರೆ.

ನವಾಬ್​ ಮಲಿಕ್​ ಬಗ್ಗೆ ಸ್ಫೋಟಕ ವಿಷಯ ಬಹಿರಂಗ ಮಾಡ್ತೇನೆ; ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಎಚ್ಚರಿಕೆ
ದೇವೇಂದ್ರ ಫಡ್ನವೀಸ್​ ಮತ್ತು ನವಾಬ್​ ಮಲಿಕ್
TV9 Web
| Updated By: Lakshmi Hegde|

Updated on:Nov 01, 2021 | 3:32 PM

Share

ಮುಂಬೈ ಡ್ರಗ್ಸ್​ ಕೇಸ್​​ಗೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಎನ್​ಸಿಪಿ ಸಚಿವ ನವಾಬ್​ ಮಲಿಕ್​ ಇಂದು ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೆಸರನ್ನು ಎಳೆದುತಂದಿದ್ದಾರೆ. ಮಾದಕ ದ್ರವ್ಯ ಸಾಗಣೆ ಪ್ರಕರಣದಲ್ಲಿ ಈಗಾಗಲೇ ಜೈಲುಪಾಲಾಗಿರುವ ಡ್ರಗ್​ ಪೆಡ್ಲರ್​ ಜೈದೀಪ್​ ರಾಣಾ ಅವರೊಂದಿಗೆ ದೇವೇಂದ್ರ ಫಡ್ನವೀಸ್​ ಮತ್ತು ಅವರ ಪತ್ನಿ ಅಮೃತಾ ಫಡ್ನವೀಸ್​ ನಿಂತಿರುವ ಒಂದೆರಡು ಫೋಟೋಗಳನ್ನು ಸೋಷಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದು ಇದೀಗ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಆದರೆ ಅದರ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್​​ ನವಾಬ್​​ ಮಲಿಕ್​ಗೆ ತಿರುಗೇಟು ನೀಡಿದ್ದು, ನವಾಬ್​ ಮಲಿಕ್​​ಗೂ, ಭೂಗತ ಜಗತ್ತಿಗೂ ಇರುವ ಸಂಪರ್ಕವನ್ನು ದೀಪಾವಳಿ ನಂತರ ನಾವು ಬಹಿರಂಗಪಡಿಸುತ್ತೇವೆ ಎಂದು ಹೇಳಿದ್ದಾರೆ. 

ನವಾಬ್​ ಮಲಿಕ್​ ಅನಗತ್ಯವಾಗಿ ಡ್ರಗ್ಸ್​ ಕೇಸ್​​ನಲ್ಲಿ ನನ್ನ ಮತ್ತು ಪತ್ನಿ ಅಮೃತಾಳ ಹೆಸರನ್ನು ಎಳೆದುತಂದಿದ್ದಾರೆ. ಇದು ಆಧಾರ ರಹಿತವಾದ ಆರೋಪ. ಆದರೇನು ಈಗ ನವಾಬ್​ ಮಲಿಕ್​ ಆಟ ಶುರು ಮಾಡಿದ್ದಾರೆ..ಪಟಾಕಿ ಹಚ್ಚಿದ್ದಾರೆ. ಇದಕ್ಕೊಂದು ಲಾಜಿಕಲ್​ ಅಂತ್ಯವನ್ನು ನಾನು ಕೊಡುತ್ತೇನೆ. ದೀಪಾವಳಿಯ ನಂತರ ನಾನು ಬಾಂಬ್​ ಸ್ಫೋಟಿಸುತ್ತೇನೆ ಎಂದು ಹೇಳಿದ್ದಾರೆ.  ಮುಂಬೈ ಭೂಗತ ಜಗತ್ತಿಗೂ, ನವಾಬ್​ ಮಲಿಕ್​ಗೂ ಇರುವ ಸಂಪರ್ಕವನ್ನು ನಾನು ಸಾರ್ವಜನಿಕರ ಎದುರು, ದಾಖಲೆ ಸಮೇತ ಪ್ರಸ್ತುತ ಪಡಿಸುತ್ತೇನೆ ಎಂದು ಹೇಳಿದ್ದಾರೆ.

ಈ ಜೈದೀಪ್​ ರಾಣಾನೊಂದಿಗೆ ಫೋಟೋ ತೆಗೆಸಿಕೊಂಡಾಕ್ಷಣ ಅವನೊಂದಿಗೆ ಸಂಬಂಧ ಇದೆ ಎಂದು ಭಾವಿಸಬೇಕಾಗಿಲ್ಲ. ನದಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ತಂಡವೊಂದು ನಮ್ಮನ್ನು ಭೇಟಿಯಾಗಿತ್ತು. ಆಗ ತೆಗೆಸಿಕೊಂಡ ಫೋಟೋ ಇದಾಗಿದೆ. ಆ ತಂಡದೊಂದಿಗೆ ಇರುವವರೆಲ್ಲರೊಂದಿಗೂ ಫೋಟೋ ಇದೆ. ಆದರೆ ಈ ಫೋಟೋವನ್ನಷ್ಟೇ ಹಾಕುವ ಮೂಲಕ ನವಾಬ್​ ಮಲಿಕ್​ ಬೇರೇನೋ ಹೇಳಲು ಹೊರಟಿದ್ದಾರೆ ಎಂದು ಫಡ್ನವೀಸ್​ ಹೇಳಿದ್ದಾರೆ.  ಮುಂಬೈ ಡ್ರಗ್​ ಕೇಸ್​ಗೆ ಸಂಬಂಧಪಟ್ಂತೆ ನವಾಬ್​ ಮಲಿಕ್​ ಫಡ್ನವೀಸ್​ ವಿರುದ್ಧ ಆರೋಪ ಮಾಡಿದ್ದಲ್ಲದೆ, ಅವರ ಆಡಳಿತ ಅವಧಿಯಲ್ಲೇ ಅಂದರೆ, 2014-2018ರ ಅವಧಿಯಲ್ಲೇ ಮುಂಬೈನಲ್ಲಿ ಮಾದಕ ದ್ರವ್ಯದ ಪ್ರಮಾಣ ಹೆಚ್ಚಾಗಿದೆ ಎಂದೂ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪ್ರಕಾಶ್ ಝಾರ ವೆಬ್ ಸರಣಿಯಿಂದ ಡಾಬರ್ ಮತ್ತು ಸಬ್ಯಸಾಚಿ ಮಂಗಳಸೂತ್ರವರೆಗೆ: ಮಧ್ಯಪ್ರದೇಶದ ಗೃಹ ಸಚಿವರ ಆಕ್ಷೇಪ, ನಿಲುವುಗಳು ಹೀಗಿತ್ತು

Published On - 3:31 pm, Mon, 1 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ