AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಅಲೆ ಮುಗಿದ ಕೂಡಲೇ ಸಿಎಎ ಅನುಷ್ಠಾನಕ್ಕೆ ತರುತ್ತೇವೆ: ಬಂಗಾಳದಲ್ಲಿ ಅಮಿತ್ ಶಾ

ಎರಡು ದಿನಗಳ ಬಂಗಾಳ ಪ್ರವಾಸದಲ್ಲಿರುವ ಗೃಹ ಸಚಿವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ರಾಜ್ಯಕ್ಕೆ ಬಂದ ನಿರಾಶ್ರಿತರು ಪೌರತ್ವವನ್ನು ಪಡೆಯಬಾರದು ಎಂದು ಬಯಸುತ್ತಾರೆ ಎಂದು ಹೇಳಿದರು

ಕೊವಿಡ್ ಅಲೆ ಮುಗಿದ ಕೂಡಲೇ ಸಿಎಎ ಅನುಷ್ಠಾನಕ್ಕೆ ತರುತ್ತೇವೆ: ಬಂಗಾಳದಲ್ಲಿ ಅಮಿತ್ ಶಾ
ಅಮಿತ್ ಶಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:May 05, 2022 | 9:18 PM

Share

ಕೊಲ್ಕತ್ತಾ: ಕೊರೊನಾವೈರಸ್ ಸಾಂಕ್ರಾಮಿಕದ ಅಲೆ ಕೊನೆಗೊಂಡ ತಕ್ಷಣ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೆ ತರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Sha) ಗುರುವಾರ ಹೇಳಿದ್ದಾರೆ.  ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ಪೂರ್ವ ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಸರ್ಕಾರವು ಸಿಎಎ ಜಾರಿಗೆ ತರುವುದಿಲ್ಲ ಎಂದು ವದಂತಿಗಳನ್ನು ಹರಡುತ್ತಿದೆ ಎಂದು ಹೇಳಿದರು. ಎರಡು ದಿನಗಳ ಬಂಗಾಳ ಪ್ರವಾಸದಲ್ಲಿರುವ ಗೃಹ ಸಚಿವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ರಾಜ್ಯಕ್ಕೆ ಬಂದ ನಿರಾಶ್ರಿತರು ಪೌರತ್ವವನ್ನು ಪಡೆಯಬಾರದು ಎಂದು ಬಯಸುತ್ತಾರೆ ಎಂದು ಹೇಳಿದರು. “ಮಮತಾ ದೀದಿಯವರು ಒಳನುಸುಳುವಿಕೆಯನ್ನು ಮುಂದುವರಿಸಬೇಕೆಂದು ಬಯಸುತ್ತಾರೆ. ಆದರೆ ಟಿಎಂಸಿ ಜನರು ಸಿಎಎ ಇತ್ತು, ಇದೆ ಮತ್ತು ಅದು ನಿಜವಾಗಲಿದೆ ಎಂದು ನಾನು ಹೇಳಿದಾಗ ಸೂಕ್ಷ್ಮವಾಗಿ ಆಲಿಸಬೇಕು” ಎಂದು ಶಾ ಹೇಳಿದ್ದಾರೆ. ಮಾರ್ಚ್ 2020 ರಲ್ಲಿ ಕೊವಿಡ್ -19 ರ ಹೊರಹೊಮ್ಮುವಿಕೆಯಿಂದಾಗಿ ದೇಶವು ಲಾಕ್‌ಡೌನ್‌ ಆಗುವುದಕ್ಕಿಂತ ಮುನ್ನ 2019 ರ ಕೊನೆಯಲ್ಲಿ ಸಿಎಎ ಅಂಗೀಕಾರವು ದೆಹಲಿ ಗಲಭೆ ಸೇರಿದಂತೆ ದೇಶಾದ್ಯಂತ ಬೃಹತ್ ಪ್ರತಿಭಟನೆಗಳಿಗೆ ಕಾರಣವಾಯಿತು. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ನೆರೆಯ ರಾಷ್ಟ್ರಗಳಿಂದ ಹಿಂದೂ, ಸಿಖ್, ಕ್ರಿಶ್ಚಿಯನ್, ಪಾರ್ಸಿ ಮತ್ತು ಬೌದ್ಧ ಸಮುದಾಯಗಳಿಂದ ಬಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರು ಭಾರತೀಯ ಪೌರತ್ವವನ್ನು ಪಡೆಯಲು ಕಾನೂನು ಅನುಮತಿಸುತ್ತದೆ. 2021 ರ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ರಾಜ್ಯ ಅಸೆಂಬ್ಲಿಯಲ್ಲಿ ತನ್ನ ಸ್ಥಾನಗಳನ್ನು ಮೂರರಿಂದ 77 ಕ್ಕೆ ಹೆಚ್ಚಿಸಲು ಸಹಾಯ ಮಾಡಿದ್ದಕ್ಕಾಗಿ ಶಾ ಅವರು ತಮ್ಮ ಭಾಷಣದಲ್ಲಿ ಬಂಗಾಳದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಟಿಎಂಸಿಯ ಮೇಲೆ ವಾಗ್ದಾಳಿ ನಡೆಸಿದ ಶಾ ಕಳೆದ ವರ್ಷ ಬಂಗಾಳದಲ್ಲಿ ಮೂರನೇ ಬಾರಿಗೆ ತಮ್ಮ ಪಕ್ಷವು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ ಕೇಸರಿ ಪಾಳಯವು “ದೀದಿ ಉತ್ತಮವಾಗುತ್ತಾರೆ” ಎಂದು ಭಾವಿಸಿದೆ ಎಂದು ಹೇಳಿದರು. ಆದರೆ ಭ್ರಷ್ಟಾಚಾರ, ಸಿಂಡಿಕೇಟ್ ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆಗಳು ಇನ್ನೂ ನಿಂತಿಲ್ಲ. ಬಿಜೆಪಿ ಮತ್ತೆ ಹೋರಾಡುವುದಿಲ್ಲ ಎಂದು ಮಮತಾ ದೀದಿ ಭಾವಿಸಬಾರದು ಎಂದಿದ್ದಾರೆ ಶಾ.

ಇದನ್ನೂ ಓದಿ
Image
ಅಮಿತ್ ಶಾ ದೆಹಲಿ ಹೋದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತಾಡುತ್ತೇವೆ ಎಂದಿದ್ದಾರೆ -ಸಿಎಂ ಬಸವರಾಜ ಬೊಮ್ಮಾಯಿ

2021 ರ ಚುನಾವಣೆಯ ನಂತರ ಗೃಹ ಸಚಿವರು ಪೂರ್ವ ರಾಜ್ಯಕ್ಕೆ ಇದೇ ಮೊದಲ ಬಾರಿ ಭೇಟಿ ನೀಡಿದ್ದಾರೆ. ಹಿಂದಿನ ದಿನ ಉತ್ತರ 24 ಪರಗಣ ಜಿಲ್ಲೆಯ ಸುಂದರ್‌ಬನ್ಸ್ ಪ್ರದೇಶದ ಹಿಂಗಲ್‌ಗಂಜ್‌ನಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗಡಿ ಔಟ್ ಪೋಸ್ಟ್‌ಗಳನ್ನು ಶಾ ಉದ್ಘಾಟಿಸಿದರು. ಬೋಟ್ ಆಂಬ್ಯುಲೆನ್ಸ್‌ಗೆ ಚಾಲನೆ ನೀಡಿದ ಶಾ ಮೈತ್ರಿ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿದ್ದಾರೆ.

ಪ್ರಹರಿ ಸಮ್ಮೇಳನದಲ್ಲಿ ಬಿಎಸ್‌ಎಫ್ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಬಂಗಾಳದ ಗಡಿಗಳನ್ನು ಕಳ್ಳಸಾಗಣೆ ಮತ್ತು ಒಳನುಸುಳುವಿಕೆಯಿಂದ ಮುಕ್ತವಾಗಿರಿಸುವ ಬಗ್ಗೆ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಂಗಾಳ ಮುಖ್ಯಮಂತ್ರಿ ಎಲ್ಲರನ್ನೂ ನಿಂದಿಸುವುದು ಸರಿಯಲ್ಲ. 110 ಮಿಲಿಯನ್ ಜನಸಂಖ್ಯೆಯಿರುವ ರಾಜ್ಯದಲ್ಲಿ ಐದು ಘಟನೆಗಳು ನಡೆದರೆ, ಆ ಐದು ಘಟನೆಗಳನ್ನು ಖಂಡಿಸಿ ತಪ್ಪಿತಸ್ಥರನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿದರೆ ನನಗೆ ಸಂತೋಷವಾಗುತ್ತದೆ. ಆದರೆ ಎಲ್ಲರನ್ನೂ ಕಟಕಟೆಯಲ್ಲಿ ನಿಲ್ಲಿಸುವುದು ಸರಿಯಲ್ಲ…ಪಶ್ಚಿಮ ಬಂಗಾಳವು ಯಾವುದೇ ರಾಜ್ಯಕ್ಕಿಂತ ಉತ್ತಮವಾಗಿದೆ ಎಂದು ಹೇಳಿದರು.

ಏತನ್ಮಧ್ಯೆ, ಶಾ ಅವರ ಬಂಗಾಳದ ಪ್ರವಾಸ ಕಾರ್ಯಕ್ರಮದಲ್ಲಿ ಶುಕ್ರವಾರ ಅವರು ಕೂಚ್ ಬೆಹಾರ್ ಜಿಲ್ಲೆಯ ಬಿಎಸ್‌ಎಫ್ ಸಿಬ್ಬಂದಿಯೊಂದಿಗೆ ತೀನ್ ಬಿಘಾಗೆ ಭೇಟಿ ನೀಡಲಿದ್ದು ಬಿಎಸ್‌ಎಫ್ ಸಿಬ್ಬಂದಿಯೊಂದಿಗೆ ಸಂವಾದ ನಡೆಸಲಿದ್ದಾರೆ.

Published On - 8:50 pm, Thu, 5 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ