AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷ ಸೇರಲು ಪ್ರಶಾಂತ್ ಕಿಶೋರ್​ ಪ್ಲ್ಯಾನ್​?-ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಹೊರಬಿತ್ತು ಅಚ್ಚರಿಯ ವಿಚಾರ

ಇತ್ತೀಚೆಗಷ್ಟೇ ಪ್ರಶಾಂತ್​ ಕಿಶೋರ್ ಅವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿದ್ದಾರೆ. 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದುಕೊಂಡಿತ್ತು.

ಕಾಂಗ್ರೆಸ್ ಪಕ್ಷ ಸೇರಲು ಪ್ರಶಾಂತ್ ಕಿಶೋರ್​ ಪ್ಲ್ಯಾನ್​?-ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಹೊರಬಿತ್ತು ಅಚ್ಚರಿಯ ವಿಚಾರ
ಪ್ರಶಾಂತ್​ ಕಿಶೋರ್​
TV9 Web
| Edited By: |

Updated on: Jul 29, 2021 | 4:49 PM

Share

ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್​ ಕಿಶೋರ್ (Prashant Kishor)​ ಅವರು ಕಾಂಗ್ರೆಸ್ ಸೇರಲಿದ್ದಾರೆ..ಹೀಗೊಂದು ಸುದ್ದಿ ಈಗ ಭರ್ಜರಿ ಹರಿದಾಡುತ್ತಿದೆ. ಇನ್ನು ಮೂಲಗಳು ಹೇಳುವ ಪ್ರಕಾರ ಪ್ರಶಾಂತ್​ ಕಿಶೋರ್​ ಅವರು ಕಾಂಗ್ರೆಸ್(Congress)​ನ ಸಿದ್ಧಾಂತದ ಯೋಜನೆಗಳಿಗೆ ಹೊಂದಿಕೊಳ್ಳುತ್ತಾರಾ ಎಂಬ ಬಗ್ಗೆ ಚರ್ಚಿಸಲು ವಾರದ ಹಿಂದೆ ರಾಹುಲ್​ ಗಾಂಧಿ (Rahul Gandhi) ಕಾಂಗ್ರೆಸ್​ ನಾಯಕರ ಸಭೆ ಕರೆದಿದ್ದರು. ಜುಲೈ 22ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಈ ಸಭೆಯಲ್ಲಿ ಕಾಂಗ್ರೆಸ್​ನ ಹಿರಿಯ ನಾಯಕರಾದ ಕಮಲನಾಥ್​, ಮಲ್ಲಿಕಾರ್ಜುನ ಖರ್ಗೆ, ಎ.ಕೆ.ಅಂಥೋನಿ, ಅಜಯ್ ಮೇಕನ್​, ಆನಂದ್​ ಶರ್ಮಾ, ಹರೀಶ್​ ರಾವತ್, ಅಂಬಿಕಾ ಸೋನಿ, ಕೆ.ಸಿ.ವೇಣುಗೋಪಾಲ್​ ಇತರರು ಪಾಲ್ಗೊಂಡಿದ್ದರು. ಅದರಲ್ಲಿ ರಾಹುಲ್​ ಗಾಂಧಿ ತಮ್ಮ ಮತ್ತು ಪ್ರಶಾಂತ್ ಕಿಶೋರ್ ಭೇಟಿಯ ಬಗ್ಗೆ ವಿವರಿಸಿದ್ದಾರೆ. ಅಲ್ಲದೆ ಪ್ರಶಾಂತ್​ ಕಿಶೋರ್​ ಕಾಂಗ್ರೆಸ್​ ಬರುವ ಯೋಜನೆ ಹಾಕಿದ್ದಾರೆ ಎಂಬುದನ್ನೂ ಚರ್ಚಿಸಿದ್ದಾರೆ ಎನ್ನಲಾಗಿದೆ.

ಪ್ರಶಾಂತ್​ ಕಿಶೋರ್​ ಪಕ್ಷದಿಂದ ಹೊರಗೆ ಇದ್ದು, ಕಾಂಗ್ರೆಸ್​ಗೆ ಸಲಹೆ ನೀಡುವ ಬದಲು, ಕಾಂಗ್ರೆಸ್​ಗೆ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಸಭೆಯಲ್ಲಿ ರಾಹುಲ್ ಗಾಂಧಿ ತಿಳಿಸಿದರು. ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಯಿತು. ಪ್ರಶಾಂತ್ ಕಿಶೋರ್​ ಕಾಂಗ್ರೆಸ್​ ಸೇರುವುದರಿಂದ ಉಂಟಾಗುವ ಸಾಧಕ-ಬಾಧಕಗಳ ಕುರಿತು ಸಮಗ್ರವಾಗಿ ಸಭೆಯಲ್ಲಿ ಮಾತನಾಡಲಾಗಿದೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಇತ್ತೀಚೆಗಷ್ಟೇ ಪ್ರಶಾಂತ್​ ಕಿಶೋರ್ ಅವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿದ್ದಾರೆ. 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದುಕೊಂಡಿತ್ತು. ಲೋಕಸಭಾ ಚುನಾವಣೆ ಹೊತ್ತಿಗೆ ಕಾಂಗ್ರೆಸ್​ನ್ನು ಪುನರುಜ್ಜೀವನಗೊಳಿಸಲು ಕಾರ್ಯತಂತ್ರ ಹೆಣೆಯುವ ಸಲುವಾಗಿ ಈ ಭೇಟಿ ನಡೆದಿತ್ತು ಎಂದೇ ಹೇಳಲಾಗಿತ್ತು. ಆದರೆ ಪ್ರಶಾಂತ್ ಕಿಶೋರ್ ಒಂದು ಹೆಜ್ಜೆ ಮುಂದೆ ಹೋಗಿ, ಕಾಂಗ್ರೆಸ್​ಗೇ ಸೇರುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸ್ವತಂತ್ರ, ಪ್ರಜಾಪ್ರಭುತ್ವ ಮತ್ತು ಸ್ಥಿರ ಆಡಳಿತದಿಂದ ಕೂಡಿದ ಅಫ್ಘಾನಿಸ್ತಾನವನ್ನು ನೋಡಲು ಜಗತ್ತು ಬಯಸುತ್ತಿದೆ: ಜೈಶಂಕರ್

Will Prashant Kishor Join to Congress says Source

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್