AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷ ಸೇರಲು ಪ್ರಶಾಂತ್ ಕಿಶೋರ್​ ಪ್ಲ್ಯಾನ್​?-ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಹೊರಬಿತ್ತು ಅಚ್ಚರಿಯ ವಿಚಾರ

ಇತ್ತೀಚೆಗಷ್ಟೇ ಪ್ರಶಾಂತ್​ ಕಿಶೋರ್ ಅವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿದ್ದಾರೆ. 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದುಕೊಂಡಿತ್ತು.

ಕಾಂಗ್ರೆಸ್ ಪಕ್ಷ ಸೇರಲು ಪ್ರಶಾಂತ್ ಕಿಶೋರ್​ ಪ್ಲ್ಯಾನ್​?-ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಹೊರಬಿತ್ತು ಅಚ್ಚರಿಯ ವಿಚಾರ
ಪ್ರಶಾಂತ್​ ಕಿಶೋರ್​
TV9 Web
| Updated By: Lakshmi Hegde|

Updated on: Jul 29, 2021 | 4:49 PM

Share

ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್​ ಕಿಶೋರ್ (Prashant Kishor)​ ಅವರು ಕಾಂಗ್ರೆಸ್ ಸೇರಲಿದ್ದಾರೆ..ಹೀಗೊಂದು ಸುದ್ದಿ ಈಗ ಭರ್ಜರಿ ಹರಿದಾಡುತ್ತಿದೆ. ಇನ್ನು ಮೂಲಗಳು ಹೇಳುವ ಪ್ರಕಾರ ಪ್ರಶಾಂತ್​ ಕಿಶೋರ್​ ಅವರು ಕಾಂಗ್ರೆಸ್(Congress)​ನ ಸಿದ್ಧಾಂತದ ಯೋಜನೆಗಳಿಗೆ ಹೊಂದಿಕೊಳ್ಳುತ್ತಾರಾ ಎಂಬ ಬಗ್ಗೆ ಚರ್ಚಿಸಲು ವಾರದ ಹಿಂದೆ ರಾಹುಲ್​ ಗಾಂಧಿ (Rahul Gandhi) ಕಾಂಗ್ರೆಸ್​ ನಾಯಕರ ಸಭೆ ಕರೆದಿದ್ದರು. ಜುಲೈ 22ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಈ ಸಭೆಯಲ್ಲಿ ಕಾಂಗ್ರೆಸ್​ನ ಹಿರಿಯ ನಾಯಕರಾದ ಕಮಲನಾಥ್​, ಮಲ್ಲಿಕಾರ್ಜುನ ಖರ್ಗೆ, ಎ.ಕೆ.ಅಂಥೋನಿ, ಅಜಯ್ ಮೇಕನ್​, ಆನಂದ್​ ಶರ್ಮಾ, ಹರೀಶ್​ ರಾವತ್, ಅಂಬಿಕಾ ಸೋನಿ, ಕೆ.ಸಿ.ವೇಣುಗೋಪಾಲ್​ ಇತರರು ಪಾಲ್ಗೊಂಡಿದ್ದರು. ಅದರಲ್ಲಿ ರಾಹುಲ್​ ಗಾಂಧಿ ತಮ್ಮ ಮತ್ತು ಪ್ರಶಾಂತ್ ಕಿಶೋರ್ ಭೇಟಿಯ ಬಗ್ಗೆ ವಿವರಿಸಿದ್ದಾರೆ. ಅಲ್ಲದೆ ಪ್ರಶಾಂತ್​ ಕಿಶೋರ್​ ಕಾಂಗ್ರೆಸ್​ ಬರುವ ಯೋಜನೆ ಹಾಕಿದ್ದಾರೆ ಎಂಬುದನ್ನೂ ಚರ್ಚಿಸಿದ್ದಾರೆ ಎನ್ನಲಾಗಿದೆ.

ಪ್ರಶಾಂತ್​ ಕಿಶೋರ್​ ಪಕ್ಷದಿಂದ ಹೊರಗೆ ಇದ್ದು, ಕಾಂಗ್ರೆಸ್​ಗೆ ಸಲಹೆ ನೀಡುವ ಬದಲು, ಕಾಂಗ್ರೆಸ್​ಗೆ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಸಭೆಯಲ್ಲಿ ರಾಹುಲ್ ಗಾಂಧಿ ತಿಳಿಸಿದರು. ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಯಿತು. ಪ್ರಶಾಂತ್ ಕಿಶೋರ್​ ಕಾಂಗ್ರೆಸ್​ ಸೇರುವುದರಿಂದ ಉಂಟಾಗುವ ಸಾಧಕ-ಬಾಧಕಗಳ ಕುರಿತು ಸಮಗ್ರವಾಗಿ ಸಭೆಯಲ್ಲಿ ಮಾತನಾಡಲಾಗಿದೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಇತ್ತೀಚೆಗಷ್ಟೇ ಪ್ರಶಾಂತ್​ ಕಿಶೋರ್ ಅವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿದ್ದಾರೆ. 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದುಕೊಂಡಿತ್ತು. ಲೋಕಸಭಾ ಚುನಾವಣೆ ಹೊತ್ತಿಗೆ ಕಾಂಗ್ರೆಸ್​ನ್ನು ಪುನರುಜ್ಜೀವನಗೊಳಿಸಲು ಕಾರ್ಯತಂತ್ರ ಹೆಣೆಯುವ ಸಲುವಾಗಿ ಈ ಭೇಟಿ ನಡೆದಿತ್ತು ಎಂದೇ ಹೇಳಲಾಗಿತ್ತು. ಆದರೆ ಪ್ರಶಾಂತ್ ಕಿಶೋರ್ ಒಂದು ಹೆಜ್ಜೆ ಮುಂದೆ ಹೋಗಿ, ಕಾಂಗ್ರೆಸ್​ಗೇ ಸೇರುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸ್ವತಂತ್ರ, ಪ್ರಜಾಪ್ರಭುತ್ವ ಮತ್ತು ಸ್ಥಿರ ಆಡಳಿತದಿಂದ ಕೂಡಿದ ಅಫ್ಘಾನಿಸ್ತಾನವನ್ನು ನೋಡಲು ಜಗತ್ತು ಬಯಸುತ್ತಿದೆ: ಜೈಶಂಕರ್

Will Prashant Kishor Join to Congress says Source

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ