AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷ ಸೇರಲು ಪ್ರಶಾಂತ್ ಕಿಶೋರ್​ ಪ್ಲ್ಯಾನ್​?-ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಹೊರಬಿತ್ತು ಅಚ್ಚರಿಯ ವಿಚಾರ

ಇತ್ತೀಚೆಗಷ್ಟೇ ಪ್ರಶಾಂತ್​ ಕಿಶೋರ್ ಅವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿದ್ದಾರೆ. 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದುಕೊಂಡಿತ್ತು.

ಕಾಂಗ್ರೆಸ್ ಪಕ್ಷ ಸೇರಲು ಪ್ರಶಾಂತ್ ಕಿಶೋರ್​ ಪ್ಲ್ಯಾನ್​?-ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಹೊರಬಿತ್ತು ಅಚ್ಚರಿಯ ವಿಚಾರ
ಪ್ರಶಾಂತ್​ ಕಿಶೋರ್​
TV9 Web
| Edited By: |

Updated on: Jul 29, 2021 | 4:49 PM

Share

ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್​ ಕಿಶೋರ್ (Prashant Kishor)​ ಅವರು ಕಾಂಗ್ರೆಸ್ ಸೇರಲಿದ್ದಾರೆ..ಹೀಗೊಂದು ಸುದ್ದಿ ಈಗ ಭರ್ಜರಿ ಹರಿದಾಡುತ್ತಿದೆ. ಇನ್ನು ಮೂಲಗಳು ಹೇಳುವ ಪ್ರಕಾರ ಪ್ರಶಾಂತ್​ ಕಿಶೋರ್​ ಅವರು ಕಾಂಗ್ರೆಸ್(Congress)​ನ ಸಿದ್ಧಾಂತದ ಯೋಜನೆಗಳಿಗೆ ಹೊಂದಿಕೊಳ್ಳುತ್ತಾರಾ ಎಂಬ ಬಗ್ಗೆ ಚರ್ಚಿಸಲು ವಾರದ ಹಿಂದೆ ರಾಹುಲ್​ ಗಾಂಧಿ (Rahul Gandhi) ಕಾಂಗ್ರೆಸ್​ ನಾಯಕರ ಸಭೆ ಕರೆದಿದ್ದರು. ಜುಲೈ 22ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಈ ಸಭೆಯಲ್ಲಿ ಕಾಂಗ್ರೆಸ್​ನ ಹಿರಿಯ ನಾಯಕರಾದ ಕಮಲನಾಥ್​, ಮಲ್ಲಿಕಾರ್ಜುನ ಖರ್ಗೆ, ಎ.ಕೆ.ಅಂಥೋನಿ, ಅಜಯ್ ಮೇಕನ್​, ಆನಂದ್​ ಶರ್ಮಾ, ಹರೀಶ್​ ರಾವತ್, ಅಂಬಿಕಾ ಸೋನಿ, ಕೆ.ಸಿ.ವೇಣುಗೋಪಾಲ್​ ಇತರರು ಪಾಲ್ಗೊಂಡಿದ್ದರು. ಅದರಲ್ಲಿ ರಾಹುಲ್​ ಗಾಂಧಿ ತಮ್ಮ ಮತ್ತು ಪ್ರಶಾಂತ್ ಕಿಶೋರ್ ಭೇಟಿಯ ಬಗ್ಗೆ ವಿವರಿಸಿದ್ದಾರೆ. ಅಲ್ಲದೆ ಪ್ರಶಾಂತ್​ ಕಿಶೋರ್​ ಕಾಂಗ್ರೆಸ್​ ಬರುವ ಯೋಜನೆ ಹಾಕಿದ್ದಾರೆ ಎಂಬುದನ್ನೂ ಚರ್ಚಿಸಿದ್ದಾರೆ ಎನ್ನಲಾಗಿದೆ.

ಪ್ರಶಾಂತ್​ ಕಿಶೋರ್​ ಪಕ್ಷದಿಂದ ಹೊರಗೆ ಇದ್ದು, ಕಾಂಗ್ರೆಸ್​ಗೆ ಸಲಹೆ ನೀಡುವ ಬದಲು, ಕಾಂಗ್ರೆಸ್​ಗೆ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಸಭೆಯಲ್ಲಿ ರಾಹುಲ್ ಗಾಂಧಿ ತಿಳಿಸಿದರು. ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಯಿತು. ಪ್ರಶಾಂತ್ ಕಿಶೋರ್​ ಕಾಂಗ್ರೆಸ್​ ಸೇರುವುದರಿಂದ ಉಂಟಾಗುವ ಸಾಧಕ-ಬಾಧಕಗಳ ಕುರಿತು ಸಮಗ್ರವಾಗಿ ಸಭೆಯಲ್ಲಿ ಮಾತನಾಡಲಾಗಿದೆ ಎಂದು ಕಾಂಗ್ರೆಸ್​ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಇತ್ತೀಚೆಗಷ್ಟೇ ಪ್ರಶಾಂತ್​ ಕಿಶೋರ್ ಅವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿದ್ದಾರೆ. 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದುಕೊಂಡಿತ್ತು. ಲೋಕಸಭಾ ಚುನಾವಣೆ ಹೊತ್ತಿಗೆ ಕಾಂಗ್ರೆಸ್​ನ್ನು ಪುನರುಜ್ಜೀವನಗೊಳಿಸಲು ಕಾರ್ಯತಂತ್ರ ಹೆಣೆಯುವ ಸಲುವಾಗಿ ಈ ಭೇಟಿ ನಡೆದಿತ್ತು ಎಂದೇ ಹೇಳಲಾಗಿತ್ತು. ಆದರೆ ಪ್ರಶಾಂತ್ ಕಿಶೋರ್ ಒಂದು ಹೆಜ್ಜೆ ಮುಂದೆ ಹೋಗಿ, ಕಾಂಗ್ರೆಸ್​ಗೇ ಸೇರುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸ್ವತಂತ್ರ, ಪ್ರಜಾಪ್ರಭುತ್ವ ಮತ್ತು ಸ್ಥಿರ ಆಡಳಿತದಿಂದ ಕೂಡಿದ ಅಫ್ಘಾನಿಸ್ತಾನವನ್ನು ನೋಡಲು ಜಗತ್ತು ಬಯಸುತ್ತಿದೆ: ಜೈಶಂಕರ್

Will Prashant Kishor Join to Congress says Source

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ