AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮೀರ್ ವಾಂಖೆಡೆಯ ಜಾತಿ ಪ್ರಮಾಣ ಪತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರೆ ತನಿಖೆ ನಡೆಸುತ್ತೇವೆ: ಮಹಾರಾಷ್ಟ್ರದ ಸಚಿವ ಧನಂಜಯ್ ಮುಂಡೆ

Dhananjay Munde ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಂಡೆ, "ಸಮೀರ್ ವಾಂಖೆಡೆ ಅವರ ಜಾತಿ ಪ್ರಮಾಣಪತ್ರದ ಸಿಂಧುತ್ವವನ್ನು ಯಾರಾದರೂ ವಿರೋಧಿಸಿದರೆ ಮತ್ತು ಸಾಮಾಜಿಕ ನ್ಯಾಯ ಇಲಾಖೆಗೆ ದೂರು ನೀಡಿದರೆ, ನಾವು ಈ ವಿಷಯವನ್ನು ತನಿಖೆ ಮಾಡುತ್ತೇವೆ" ಎಂದು ಹೇಳಿದರು.

ಸಮೀರ್ ವಾಂಖೆಡೆಯ ಜಾತಿ ಪ್ರಮಾಣ ಪತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರೆ ತನಿಖೆ ನಡೆಸುತ್ತೇವೆ: ಮಹಾರಾಷ್ಟ್ರದ ಸಚಿವ ಧನಂಜಯ್ ಮುಂಡೆ
ಧನಂಜಯ್ ಮುಂಡೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 31, 2021 | 12:15 PM

Share

ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (Narcotics Control Bureau) ಮುಂಬೈ ವಲಯದ ಮುಖ್ಯಸ್ಥ ಸಮೀರ್ ವಾಂಖೆಡೆ (Sameer Wankhede) ಅವರ ಜಾತಿ ಪ್ರಮಾಣಪತ್ರದ ಸಿಂಧುತ್ವವನ್ನು ಯಾರಾದರೂ ಆಕ್ಷೇಪಿಸಿದರೆ ತಮ್ಮ ಇಲಾಖೆ ತನಿಖೆ ನಡೆಸಬಹುದು ಎಂದು ಮಹಾರಾಷ್ಟ್ರ ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡೆ (Dhananjay Munde) ಹೇಳಿದ್ದಾರೆ. ಮುಂಡೆ ಅವರ ಎನ್‌ಸಿಪಿ ಮತ್ತು ಸಚಿವ ಸಹೋದ್ಯೋಗಿ ನವಾಬ್ ಮಲಿಕ್ (Nawab Malik) ಅವರು ವಾಂಖೆಡೆ ಮುಸ್ಲಿಂ ಆಗಿ ಜನಿಸಿದರು ಆದರೆ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಕೋಟಾದಡಿಯಲ್ಲಿ ನೇಮಕಾತಿ ಪಡೆಯಲು ಪರಿಶಿಷ್ಟ ಜಾತಿ (ಎಸ್‌ಸಿ) ವ್ಯಕ್ತಿಯಾಗಿ ಉತ್ತೀರ್ಣರಾಗಲು ಜಾತಿ ಪ್ರಮಾಣಪತ್ರ ಸೇರಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಶುಕ್ರವಾರ ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಂಡೆ, “ಸಮೀರ್ ವಾಂಖೆಡೆ ಅವರ ಜಾತಿ ಪ್ರಮಾಣಪತ್ರದ ಸಿಂಧುತ್ವವನ್ನು ಯಾರಾದರೂ ವಿರೋಧಿಸಿದರೆ ಮತ್ತು ಸಾಮಾಜಿಕ ನ್ಯಾಯ ಇಲಾಖೆಗೆ ದೂರು ನೀಡಿದರೆ, ನಾವು ಈ ವಿಷಯವನ್ನು ತನಿಖೆ ಮಾಡುತ್ತೇವೆ” ಎಂದು ಹೇಳಿದರು.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ನಾಯಕ ಪ್ರವೀಣ್ ದರೇಕರ್ ಅವರು ಎಂವಿಎ ಸರ್ಕಾರದ ಏಕೈಕ ಅಜೆಂಡಾ ವಾಂಖೆಡೆ ಮೇಲೆ ದಾಳಿ ನಡೆಸುವುದಾಗಿದೆ ಎಂದು ಹೇಳಿದ್ದಾರೆ.

“ರಾಜ್ಯ ಸಾಮಾಜಿಕ ನ್ಯಾಯ ಇಲಾಖೆಗೆ ದೂರು ಬಂದರೆ ತನಿಖೆ ನಡೆಸುವ ಹಕ್ಕು ಇದೆ. (ಸಮೀರ್) ವಾಂಖೆಡೆಯನ್ನು ಗುರಿಯಾಗಿಸುವುದು ಸರ್ಕಾರದ ಏಕೈಕ ಅಂಶವಾಗಿದೆ. ವಾಂಖೆಡೆ ನಮ್ಮ ಪಕ್ಷದ ಕಾರ್ಯಕರ್ತ ಅಥವಾ ಯಾವುದೇ ಬಿಜೆಪಿ ನಾಯಕರ ಸಂಬಂಧಿ ಅಲ್ಲ. ಡ್ರಗ್ ಪೆಡ್ಲರ್ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರಿ ಸ್ವೀಕಾರಾರ್ಹವಲ್ಲ” ಎಂದು ದರೇಕರ್ ಹೇಳಿದರು.

ಇದನ್ನೂ ಓದಿ: Aryan Khan Jail: ಜೈಲಿನಿಂದ ಹೊರಬಂದ ಆರ್ಯನ್​ ಖಾನ್​; ಶಾರುಖ್​ ನಿವಾಸ ಮನ್ನತ್​ ಎದುರು ಫ್ಯಾನ್ಸ್​ ಸಂಭ್ರಮ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!