AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi on Farm Laws: ಮೂರೂ ಕೃಷಿ ಮಸೂದೆಗಳು ವಾಪಸ್​ ತೆಗೆದುಕೊಂಡು, ರೈತರ ಕ್ಷಮೆ ಕೋರಿದ ಪ್ರಧಾನಿ ನರೇಂದ್ರ ಮೋದಿ

farm laws repealed: ದೆಹಲಿ: ಇತ್ತೀಚೆಗೆ ಭಾರೀ ಚರ್ಚೆ, ವಿವಾದಕ್ಕೆ ತುತ್ತಾಗಿದ್ದ ಕೃಷಿ ಸಂಬಂಧಿತ (farm laws) ಮೂರೂ ಮಸೂದೆಗಳನ್ನು ವಾಪಸ್​ ತೆಗೆದುಕೊಳ್ಳುತ್ತೇವೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 9 ಗಂಟೆಗೆ (ನವೆಂಬರ್ 19) ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.

PM Modi on Farm Laws: ಮೂರೂ ಕೃಷಿ  ಮಸೂದೆಗಳು ವಾಪಸ್​ ತೆಗೆದುಕೊಂಡು, ರೈತರ ಕ್ಷಮೆ ಕೋರಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on:Nov 19, 2021 | 10:34 AM

Share

PM Modi on Farm Laws: ದೆಹಲಿ: ಇತ್ತೀಚೆಗೆ ಭಾರೀ ಚರ್ಚೆ, ವಿವಾದಕ್ಕೆ ತುತ್ತಾಗಿದ್ದ ಕೃಷಿ ಸಂಬಂಧಿತ (farm laws) ಮೂರೂ ಮಸೂದೆಗಳನ್ನು ವಾಪಸ್​ ತೆಗೆದುಕೊಳ್ಳುತ್ತೇವೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ನಮ್ಮ ನಿರ್ಣಯದಲ್ಲಿಯೇ ಎಲ್ಲೋ ತಪ್ಪು ಆಗಿರಬಹುದು. ಹಾಗಾಗಿ ನಾನು ದೇಶವಾಸಿಗಳಲ್ಲಿ ಕ್ಷಮೆ ಕೋರುವೆ. ತನ್ಮೂಲಕ ಮೂರೂ ಕೃಷಿ ಮಸೂದೆಗಳನ್ನು ಇದೇ ತಿಂಗಳು ಸಂಸತ್ತಿನಲ್ಲಿ ವಾಪಸ್ ತೆಗೆದುಕೊಳ್ಳುವೆ.​ ರೈತ ಬಂಧುಗಳು ತಮ್ಮ ತಮ್ಮ ಹೊಲ, ತೋಟಗಳಿಗೆ ವಾಪಸ್​ ಹೋಗಿ, ಕೃಷಿಯಲ್ಲಿ ತೊಡಗಿರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ರೈತರ ನಿರಂತರ ಹೋರಾಟ ಹಿನ್ನೆಲೆ ಕಾಯ್ದೆಗಳು ವಾಪಸ್ ತೆಗೆದುಕೊಳ್ಳಲಾಗುವುದು. 3 ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುತ್ತಿದ್ದೇವೆ. ಅದಕ್ಕಾಗಿ ಸಮಿತಿ ರಚಿಸುತ್ತೇವೆ. ಇದರಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ರೈತರು ಮತ್ತು ಕೃಷಿ ತಜ್ಞರು ಇರಲಿದ್ದಾರೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.

ಕೃಷಿ ತಿದ್ದುಪಡಿ ಕಾಯ್ದೆಗೆ ವಿರೋಧ: ಪ್ರಧಾನಿ ಮೋದಿ ವಿಷಾದ ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುವುದು. ರೈತರ ಸ್ಥಿತಿ ಸುಧಾರಿಸಲು 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಯ್ದೆ ಜಾರಿ ಮಾಡಲಾಗಿತ್ತು. ಸಣ್ಣ ರೈತರ ಒಳಿತಿಗಾಗಿಯೇ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿವೆ. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿಯಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದ್ರೆ ಕೆಲವು ರೈತರು ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ. ಅವರು ಸಲಹೆ ಒಪ್ಪಿಕೊಂಡರೂ ಕಾಯ್ದೆ ವಿರೋಧಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಇದೇ ವೇಳೆ ವಿಷಾದಿಸಿದರು.

ಕೇಂದ್ರ ದ ನಿರ್ಧಾರ ಸ್ವಾಗತಿಸಿದ ಅಕಾಲಿ ದಳ: ಮೂರೂ ಕೃಷಿ ತಿದ್ದುಪಡಿ ಕಾಯ್ದೆಗಳನ್ನ ಹಿಂಪಡೆದಿರುವ ಕೇಂದ್ರ ಸರ್ಕಾರದ  ನಿರ್ಧಾರವನ್ನು ಅಕಾಲಿ ದಳ ಸ್ವಾಗತಿಸಿದೆ. ಈ ಹೋರಾಟದಲ್ಲಿ ನೂರಾರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇದು ಎಲ್ಲ ರೈತರಿಗೆ ಸಿಕ್ಕ ಗೆಲುವು ಎಂದು ಆಲ್ ಇಂಡಿಯಾ ಕಿಸಾನ್ ಸಭಾ ಸ್ವಾಗತಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 9 ಗಂಟೆಗೆ (ನವೆಂಬರ್ 19) ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ಹಲವು ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ, ನಂತರ ಝಾನ್ಸಿಯಲ್ಲಿ ‘ರಾಷ್ಟ್ರ ರಕ್ಷಾ ಸಮರ್ಪಣ್ ಪರ್ವ​’ನಲ್ಲಿ ಭಾಗವಹಿಸಿದ್ದಾರೆ (PM Modi Announcement). ಈ ವೇಳೆ ಅವರು ಭಾರತದಲ್ಲೇ ತಯಾರಿಸಲಾದ ರಕ್ಷಣಾ ಸಾಮಗ್ರಿಗಳನ್ನು ಸೇನೆಗೆ ಹಸ್ತಾಂತರಿಸಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮುನ್ನ ಪ್ರಧಾನಿ ಇಂದು ಬೆಳಗ್ಗೆ 9ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಇದೇ ವೇಳೆ ಗುರು ನಾನಕ್ ಅವರ ಜಯಂತಿ ಆಚರಣೆಯೂ ನಡೆದಿದೆ.

PM Modi withdraws three farm laws | 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆದ ಕೇಂದ್ರ

Published On - 9:19 am, Fri, 19 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್