AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆ ನಂತರ ಕುಟುಂಬ ಸಮೇತ ರಾಮಮಂದಿರಕ್ಕೆ ಭೇಟಿ ನೀಡುತ್ತೇನೆ: ಕೇಜ್ರಿವಾಲ್

“ನಾನು ಎಲ್ಲರನ್ನೂ ಭೇಟಿಯಾದೆ. ಎಲ್ಲರೂ ಸಂತೋಷವಾಗಿರುವಂತೆ ತೋರುತ್ತಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಂತರ, ಜನರು ಭೇಟಿ ನೀಡಲು ಅಯೋಧ್ಯೆಗೆ ಹೆಚ್ಚಿನ ಯಾತ್ರಿ ರೈಲುಗಳನ್ನು ವ್ಯವಸ್ಥೆ ಮಾಡಲು ನಾವು ಪ್ರಯತ್ನಿಸುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಉದ್ಘಾಟನೆ ನಂತರ ಕುಟುಂಬ ಸಮೇತ ರಾಮಮಂದಿರಕ್ಕೆ ಭೇಟಿ ನೀಡುತ್ತೇನೆ: ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
|

Updated on: Jan 17, 2024 | 7:28 PM

Share

ದೆಹಲಿ ಜನವರಿ 17: ಜನವರಿ 22 ರ ಉದ್ಘಾಟನಾ ಸಮಾರಂಭದ ನಂತರ ತಮ್ಮ ಕುಟುಂಬದೊಂದಿಗೆ (ಹೆಂಡತಿ, ಮಕ್ಕಳು ಮತ್ತು ಪೋಷಕರು) ರಾಮಮಂದಿರಕ್ಕೆ (Ram mandir) ಭೇಟಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind  kejriwal) ಬುಧವಾರ ಹೇಳಿದ್ದಾರೆ. ನಾನು ನನ್ನ ಹೆಂಡತಿ, ಮಕ್ಕಳು ಮತ್ತು ಪೋಷಕರೊಂದಿಗೆ ರಾಮಮಂದಿರಕ್ಕೆ ಹೋಗಲು ಬಯಸುತ್ತೇನೆ.ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ನಾವು ಹೋಗುತ್ತೇವೆ ಎಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್ ಹೇಳಿದರು.

ಆಹ್ವಾನದ ಬಗ್ಗೆ ಕೇಳಿದಾಗ, ಕೇಜ್ರಿವಾಲ್ “ನನಗೆ ಅವರಿಂದ (ಸರ್ಕಾರ) ಪತ್ರ ಬಂದಿದೆ.ನಾವು ಅವರಿಗೆ ಕರೆ ಮಾಡಿದಾಗ, ವೈಯಕ್ತಿಕ ಆಹ್ವಾನ ನೀಡಲು ತಂಡ ಬರಲಿದೆ ಎಂದು ನಮಗೆ ತಿಳಿಸಲಾಯಿತು. ಆ ತಂಡ ಇನ್ನೂ ಬಂದಿಲ್ಲ ಎಂದಿದ್ದಾರೆ. ಆಮಂತ್ರಣ ಪತ್ರಿಕೆಯ ಪ್ರಕಾರ ಒಬ್ಬರಿಗೆ ಮಾತ್ರ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ಇಷ್ಟೊಂದು ವಿವಿಐಪಿಗಳು ಇರುವುದರಿಂದ ಅವರ ಮೇಲೆ ಹೆಚ್ಚಿನ ಭದ್ರತೆಯನ್ನು ಕೇಂದ್ರೀಕರಿಸಲಾಗುವುದು ಎಂದು ಅವರು ಹೇಳಿದರು.

ತ್ಯಾಗರಾಜ್ ಸ್ಟೇಡಿಯಂನಲ್ಲಿ ನಡೆದ ಧಾರ್ಮಿಕ ಸಂಗೀತ ಕಾರ್ಯಕ್ರಮದಲ್ಲಿ ಕೇಜ್ರಿವಾಲ್ ಅವರು ಹಿರಿಯರ ಗುಂಪನ್ನು ಭೇಟಿಯಾದರು. ಈ ಹಿರಿಯರು ದೆಹಲಿ ದ್ವಾರಕಾಧೀಶಕ್ಕೆ ತೀರ್ಥಯಾತ್ರೆಗೆ ತೆರಳಿದರು. ಇವರಿಗೆ ದೆಹಲಿ ಸರ್ಕಾರ ಹಣ ನೀಡುತ್ತದೆ.  ಮುಖ್ಯಮಂತ್ರಿ ತೀರ್ಥ ಯಾತ್ರಾ ಯೋಜನೆ ಅಡಿಯಲ್ಲಿ, ದೆಹಲಿ ಸರ್ಕಾರವು ಪುರಿ, ರಾಮೇಶ್ವರಂ, ಅಯೋಧ್ಯೆ, ಗೋಲ್ಡನ್ ಟೆಂಪಲ್, ಅಜ್ಮೀರ್ ಷರೀಫ್ ದರ್ಗಾ, ಇತ್ಯಾದಿಗಳನ್ನು ಒಳಗೊಂಡಂತೆ ದೇಶದ ವಿವಿಧ ಧಾರ್ಮಿಕ ಸ್ಥಳಗಳಿಗೆ ಸಂಪೂರ್ಣ ಸರ್ಕಾರಿ ಅನುದಾನಿತ ತೀರ್ಥಯಾತ್ರೆಗೆ ಹಿರಿಯ ನಾಗರಿಕರನ್ನು ಕಳುಹಿಸುತ್ತದೆ. ಅಯೋಧ್ಯೆಗೆ ವಿಶೇಷ ರೈಲು ಸೇವೆಗೆ ದೆಹಲಿ ಸರ್ಕಾರ ಪ್ರಯತ್ನಿಸುತ್ತದೆ ಎಂದು ಕೇಜ್ರಿವಾಲ್ ಹೇಳಿದರು.

“ನಾನು ಎಲ್ಲರನ್ನೂ ಭೇಟಿಯಾದೆ. ಎಲ್ಲರೂ ಸಂತೋಷವಾಗಿರುವಂತೆ ತೋರುತ್ತಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಂತರ, ಜನರು ಭೇಟಿ ನೀಡಲು ಅಯೋಧ್ಯೆಗೆ ಹೆಚ್ಚಿನ ಯಾತ್ರಿ ರೈಲುಗಳನ್ನು ವ್ಯವಸ್ಥೆ ಮಾಡಲು ನಾವು ಪ್ರಯತ್ನಿಸುತ್ತೇವೆ ಎಂದು ಕೇಜ್ರಿವಾಲ್ ಹೇಳಿದರು.

ಇದನ್ನೂ ಓದಿ: ಜನವರಿ 23 ರಿಂದ ಭಕ್ತರಿಗೆ ರಾಮದರ್ಶನ ಮಾಡುವ ಅವಕಾಶ: ಗೋಪಾಲ್ ಜೀ, ರಾಮಮಂದಿರ ನಿರ್ಮಾಣ ಜವಾಬ್ದಾರಿ ಹೊತ್ತವರು

ಜನವರಿ 22 ರಂದು ಅಯೋಧ್ಯೆ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಹಲವಾರು ರಾಜಕೀಯ ನಾಯಕರು, ಕ್ರಿಕೆಟಿಗರು, ಚಲನಚಿತ್ರ ತಾರೆಯರು ಮತ್ತು ಉದ್ಯಮಿಗಳನ್ನು ಆಹ್ವಾನಿಸಲಾಗಿದೆ. ಏತನ್ಮಧ್ಯೆ, ಆಮ್ ಆದ್ಮಿ ಪಕ್ಷದ (ಎಎಪಿ) ಗುಜರಾತ್ ಘಟಕವು ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ಮುಂಬರುವ ಪ್ರಾಣ ಪ್ರತಿಷ್ಠೆಯನ್ನು ಗೌರವಿಸಲು ಜನವರಿ 20 ರಿಂದ ಪ್ರಾರಂಭವಾಗುವ ಸಂಭ್ರಮಾಚರಣೆ ಕಾರ್ಯಕ್ರಮಗಳನ್ನು ಬುಧವಾರ ಪ್ರಕಟಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ