AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವೂದ್ ಇಬ್ರಾಹಿಂನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ?; ಉತ್ತರಿಸದೆ ಜಾರಿಕೊಂಡ ಪಾಕ್ ಅಧಿಕಾರಿ

ಪ್ರಧಾನಿ ಮೋದಿಯವರ ಭಾಷಣ ಮುಗಿದ ನಂತರ, ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕ ಎಂದು ಗುರುತಿಸಲ್ಪಟ್ಟ 1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂನ ಸ್ಥಳದ ಬಗ್ಗೆ ತಿಳಿಯಲು ಬಯಸಿದ ವರದಿಗಾರರು...

ದಾವೂದ್ ಇಬ್ರಾಹಿಂನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ?; ಉತ್ತರಿಸದೆ ಜಾರಿಕೊಂಡ ಪಾಕ್ ಅಧಿಕಾರಿ
ಮೊಹ್ಸಿನ್ ಬಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 19, 2022 | 8:32 PM

Share

ದಾವೂದ್ ಇಬ್ರಾಹಿಂ (Dawood Ibrahim) ಮತ್ತು ಪರಾರಿಯಾಗಿರುವ ಇತರ ಉಗ್ರರು ಪಾಕಿಸ್ತಾನದಲ್ಲಿ ಸುರಕ್ಷಿತವಾಗಿ ನೆಲೆಗೊಂಡಿದ್ದು, ಅವರನ್ನು ಭಾರತಕ್ಕೆ  ಹಸ್ತಾಂತರಿಸುತ್ತೀರಾ ಎಂದು ಪಾಕಿಸ್ತಾನದ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿಯ ಮುಖ್ಯಸ್ಥ ಮೊಹ್ಸಿನ್ ಬಟ್ (Mohsin Butt) ಅವರಲ್ಲಿ ಮಾಧ್ಯಮದವರು ಕೇಳಿದ್ದಾರೆ. ಈ ಪ್ರಶ್ನೆಗೆ ಬಟ್ ಉತ್ತರಿಸಿದೆ ಮೌನ ಪಾಲಿಸಿದ್ದಾರೆ. ಇಂಟರ್‌ಪೋಲ್‌ನ 90ನೇ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವ ಬಟ್, ಕೊನೆಯ ಕ್ಷಣದವರೆಗೂ ಪ್ರಗತಿ ಮೈದಾನದ ಹಾಲ್‌ಗೆ ಪ್ರವೇಶಿಸುವುದನ್ನು ತಪ್ಪಿಸಿಕೊಂಡರು. ಮೋಸ್ಟ್ ವಾಂಟೆಂಡ್ ಉಗ್ರರು ಎಲ್ಲಿದ್ದಾರೆ ಎಂಬುದನ್ನು ಕೇಳಲು ಮಾಧ್ಯಮದವರು ಕಾಯುತ್ತಿದ್ದರು. ಇಬ್ಬರು ಸದಸ್ಯರ ಪಾಕಿಸ್ತಾನದ ನಿಯೋಗದ ನೇತೃತ್ವದ ಅಧಿಕಾರಿ, ಊಟದ ವ್ಯವಸ್ಥೆ ಮಾಡಲಾದ ಡೈನಿಂಗ್ ಹಾಲ್‌ನಲ್ಲೇ ಕುಳಿತಿದ್ದು ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತಿದ್ದಾರೆ ಎಂದಾಗಲಷ್ಟೇ ವೇದಿಕೆಗೆ ಬಂದಿದ್ದಾರೆ.

ಪ್ರಧಾನಿ ಮೋದಿಯವರ ಭಾಷಣ ಮುಗಿದ ನಂತರ, ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕ ಎಂದು ಗುರುತಿಸಲ್ಪಟ್ಟ 1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂನ ಸ್ಥಳದ ಬಗ್ಗೆ ತಿಳಿಯಲು ಬಯಸಿದ ವರದಿಗಾರರು ಬಟ್ ಅವರನ್ನು ಸುತ್ತುವರಿದರು. ಪಾಕಿಸ್ತಾನದಲ್ಲಿ ನೆಲೆಸಿರುವ ಇತರ ಭಯೋತ್ಪಾದಕರಾದ -ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಮತ್ತು 9/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನ್ನು ಯಾವಾಗ ಹಸ್ತಾಂತರಿಸುತ್ತೀರಿ ಎಂದು ಮಾಧ್ಯಮದವರು ಬಟ್ ಅವರಲ್ಲಿ ಕೇಳಿದರು.  ಇದಕ್ಕೆ ಏನೂ ಉತ್ತರಿಸದೆ ಮೌನವಾಗಿ ಹೊರಟು ಹೋಗಿದ್ದಾರೆ ಬಟ್.

ಈ ವರ್ಷ ಜುಲೈನಲ್ಲಿ ಇಂಟರ್‌ಪೋಲ್‌ನೊಂದಿಗೆ ಸಮನ್ವಯಗೊಳಿಸಲು ಪಾಕಿಸ್ತಾನದ ರಾಷ್ಟ್ರೀಯ ಕೇಂದ್ರ ಬ್ಯೂರೋ ಆಗಿರುವ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿಯ (ಎಫ್‌ಐಎ) ಮಹಾನಿರ್ದೇಶಕರಾಗಿ ಬಟ್ ಅವರನ್ನು ನೇಮಿಸಲಾಗಿತ್ತು.

ಭಯೋತ್ಪಾದಕರು, ಅಪರಾಧಿಗಳು ಮತ್ತು ಭ್ರಷ್ಟರಿಗೆ ಸುರಕ್ಷಿತ ಸ್ವರ್ಗಗಳನ್ನು ತೊಡೆದುಹಾಕುವುದಕ್ಕಾಗಿ ಕೆಲಸ ಮಾಡಲು ಜಾಗತಿಕ ಸಮುದಾಯಕ್ಕೆ ಕರೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಒಳ್ಳೆಯ ಶಕ್ತಿಗಳು ಸಹಕರಿಸಿದಾಗ, ಅಪರಾಧದ ಶಕ್ತಿಗಳು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ

Published On - 7:26 pm, Wed, 19 October 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ