AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವೂದ್ ಇಬ್ರಾಹಿಂನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ?; ಉತ್ತರಿಸದೆ ಜಾರಿಕೊಂಡ ಪಾಕ್ ಅಧಿಕಾರಿ

ಪ್ರಧಾನಿ ಮೋದಿಯವರ ಭಾಷಣ ಮುಗಿದ ನಂತರ, ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕ ಎಂದು ಗುರುತಿಸಲ್ಪಟ್ಟ 1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂನ ಸ್ಥಳದ ಬಗ್ಗೆ ತಿಳಿಯಲು ಬಯಸಿದ ವರದಿಗಾರರು...

ದಾವೂದ್ ಇಬ್ರಾಹಿಂನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ?; ಉತ್ತರಿಸದೆ ಜಾರಿಕೊಂಡ ಪಾಕ್ ಅಧಿಕಾರಿ
ಮೊಹ್ಸಿನ್ ಬಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 19, 2022 | 8:32 PM

Share

ದಾವೂದ್ ಇಬ್ರಾಹಿಂ (Dawood Ibrahim) ಮತ್ತು ಪರಾರಿಯಾಗಿರುವ ಇತರ ಉಗ್ರರು ಪಾಕಿಸ್ತಾನದಲ್ಲಿ ಸುರಕ್ಷಿತವಾಗಿ ನೆಲೆಗೊಂಡಿದ್ದು, ಅವರನ್ನು ಭಾರತಕ್ಕೆ  ಹಸ್ತಾಂತರಿಸುತ್ತೀರಾ ಎಂದು ಪಾಕಿಸ್ತಾನದ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿಯ ಮುಖ್ಯಸ್ಥ ಮೊಹ್ಸಿನ್ ಬಟ್ (Mohsin Butt) ಅವರಲ್ಲಿ ಮಾಧ್ಯಮದವರು ಕೇಳಿದ್ದಾರೆ. ಈ ಪ್ರಶ್ನೆಗೆ ಬಟ್ ಉತ್ತರಿಸಿದೆ ಮೌನ ಪಾಲಿಸಿದ್ದಾರೆ. ಇಂಟರ್‌ಪೋಲ್‌ನ 90ನೇ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವ ಬಟ್, ಕೊನೆಯ ಕ್ಷಣದವರೆಗೂ ಪ್ರಗತಿ ಮೈದಾನದ ಹಾಲ್‌ಗೆ ಪ್ರವೇಶಿಸುವುದನ್ನು ತಪ್ಪಿಸಿಕೊಂಡರು. ಮೋಸ್ಟ್ ವಾಂಟೆಂಡ್ ಉಗ್ರರು ಎಲ್ಲಿದ್ದಾರೆ ಎಂಬುದನ್ನು ಕೇಳಲು ಮಾಧ್ಯಮದವರು ಕಾಯುತ್ತಿದ್ದರು. ಇಬ್ಬರು ಸದಸ್ಯರ ಪಾಕಿಸ್ತಾನದ ನಿಯೋಗದ ನೇತೃತ್ವದ ಅಧಿಕಾರಿ, ಊಟದ ವ್ಯವಸ್ಥೆ ಮಾಡಲಾದ ಡೈನಿಂಗ್ ಹಾಲ್‌ನಲ್ಲೇ ಕುಳಿತಿದ್ದು ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತಿದ್ದಾರೆ ಎಂದಾಗಲಷ್ಟೇ ವೇದಿಕೆಗೆ ಬಂದಿದ್ದಾರೆ.

ಪ್ರಧಾನಿ ಮೋದಿಯವರ ಭಾಷಣ ಮುಗಿದ ನಂತರ, ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕ ಎಂದು ಗುರುತಿಸಲ್ಪಟ್ಟ 1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂನ ಸ್ಥಳದ ಬಗ್ಗೆ ತಿಳಿಯಲು ಬಯಸಿದ ವರದಿಗಾರರು ಬಟ್ ಅವರನ್ನು ಸುತ್ತುವರಿದರು. ಪಾಕಿಸ್ತಾನದಲ್ಲಿ ನೆಲೆಸಿರುವ ಇತರ ಭಯೋತ್ಪಾದಕರಾದ -ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಮತ್ತು 9/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನ್ನು ಯಾವಾಗ ಹಸ್ತಾಂತರಿಸುತ್ತೀರಿ ಎಂದು ಮಾಧ್ಯಮದವರು ಬಟ್ ಅವರಲ್ಲಿ ಕೇಳಿದರು.  ಇದಕ್ಕೆ ಏನೂ ಉತ್ತರಿಸದೆ ಮೌನವಾಗಿ ಹೊರಟು ಹೋಗಿದ್ದಾರೆ ಬಟ್.

ಈ ವರ್ಷ ಜುಲೈನಲ್ಲಿ ಇಂಟರ್‌ಪೋಲ್‌ನೊಂದಿಗೆ ಸಮನ್ವಯಗೊಳಿಸಲು ಪಾಕಿಸ್ತಾನದ ರಾಷ್ಟ್ರೀಯ ಕೇಂದ್ರ ಬ್ಯೂರೋ ಆಗಿರುವ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿಯ (ಎಫ್‌ಐಎ) ಮಹಾನಿರ್ದೇಶಕರಾಗಿ ಬಟ್ ಅವರನ್ನು ನೇಮಿಸಲಾಗಿತ್ತು.

ಭಯೋತ್ಪಾದಕರು, ಅಪರಾಧಿಗಳು ಮತ್ತು ಭ್ರಷ್ಟರಿಗೆ ಸುರಕ್ಷಿತ ಸ್ವರ್ಗಗಳನ್ನು ತೊಡೆದುಹಾಕುವುದಕ್ಕಾಗಿ ಕೆಲಸ ಮಾಡಲು ಜಾಗತಿಕ ಸಮುದಾಯಕ್ಕೆ ಕರೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಒಳ್ಳೆಯ ಶಕ್ತಿಗಳು ಸಹಕರಿಸಿದಾಗ, ಅಪರಾಧದ ಶಕ್ತಿಗಳು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ

Published On - 7:26 pm, Wed, 19 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ