AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಸ್ವೀಕರಿಸಿದ ದಿನವೇ ಕುಮಾರಸ್ವಾಮಿಗೆ ಪಂಚ ಪ್ರಶ್ನೆಗಳ ಪಂಚ್ ಕೊಟ್ಟ ಜೈರಾಮ್ ರಮೇಶ್

ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಅವರು ಈ ಬಾರಿ ಮಂಡ್ಯದಿಂದ ಗೆದ್ದು ಕೇಂದ್ರ ಸಚಿವರಾಗಿದ್ದು, ಇಂದು (ಜೂನ್ 11) ಉಕ್ಕು ಮತ್ತು ಬೃಹತ್ ಕೈಗಾರಿಕೆ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇನ್ನು ಅಧಿಕಾರ ಸ್ವೀಕರಿಸಿದ ದಿನವೇ ಇತ್ತ ಕಾಂಗ್ರೆಸ್​ ನಾಯಕ ಜೈರಾಮ್ ರಮೇಶ್ ಅವರು ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದಿದ್ದಾರೆ.

ಅಧಿಕಾರ ಸ್ವೀಕರಿಸಿದ ದಿನವೇ ಕುಮಾರಸ್ವಾಮಿಗೆ ಪಂಚ ಪ್ರಶ್ನೆಗಳ ಪಂಚ್ ಕೊಟ್ಟ ಜೈರಾಮ್ ರಮೇಶ್
ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ
ರಮೇಶ್ ಬಿ. ಜವಳಗೇರಾ
|

Updated on: Jun 11, 2024 | 10:14 PM

Share

ನವದೆಹಲಿ, (ಜೂನ್ 11): ಪ್ರಧಾನಿ ನರೇಂದ್ರ ಮೋದಿ (Narendra Modi) ಸಂಪುಟದಲ್ಲಿ  ಸಂಪುಟ ದರ್ಜೆ ಸಚಿವರಾದ ಎಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು. ನವದೆಹಲಿಯ ಉದ್ಯೋಗ ಭವನದಲ್ಲಿರುವ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ (Union Minister for Steel and Heavy Industry)  ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದರು. ಪೂಜೆ ಸಲ್ಲಿಸಿ ಬಳಿಕ ಕಡತಕ್ಕೆ ಸಹಿ ಹಾಕುವ ಮೂಲಕ ಹೆಚ್‌ಡಿಕೆ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಇತ್ತ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ತುಕ್ಕು ಹಿಡಿದ ಸರ್ಕಾರದಲ್ಲಿ ಕುಮಾರಸ್ವಾಮಿ ಉಕ್ಕು ಖಾತೆ ಸಚಿವರಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ 5 ಪ್ರಶ್ನೆಗಳನ್ನು ಕೇಳಿದ್ದಾರೆ.

  1. ತುಕ್ಕು ಹಿಡಿದ ಸರ್ಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಉಕ್ಕು ಖಾತೆ ಸಚಿವರಾಗಿದ್ದಾರೆ. ವೈಜಾಗ್ ಸ್ಟೀಲ್ ಪ್ಲಾಂಟ್ ಅನ್ನು ಮಾರಾಟ ಮಾಡುವುದಿಲ್ಲ ಎಂಬ ಭರವಸೆ ನೀಡುವಿರಾ..?
  2. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಸ್ಥಾವರವನ್ನು ಸ್ಥಗಿತಗೊಳಿಸಲು ಸರಕಾರ ಮುಂದಾಗಿದೆ. ಪುನರುಜ್ಜೀವನಗೊಳಿಸಲು ಕುಮಾರಸ್ವಾಮಿ ಅವರು ತುರ್ತು ಕ್ರಮಗಳನ್ನು ತೆಗೆದುಕೊಳ್ಳುತ್ತಾರೆಯೇ?
  3. ಸೇಲಂ‌ ಸ್ಟೀಲ್ ಪ್ಲಾಂಟ್ ನ ಕಾರ್ಮಿಕರ ರಕ್ಷಣಗೆ ಮುಂದಾಗಿರಾ..?
  4. ನಾಗರ್ನಾರ್ ಸ್ಟೀಲ್ ಪ್ಲಾಂಟ್ ಮೋದಿ ತಮ್ಮ ಸ್ನೇಹಿತರಿಗೆ ಮಾರುವುದಿಲ್ಲ ಎಂಬ ಭರವಸೆ ನೀಡುವಿರಾ..?
  5. ಪಶ್ಚಿಮ ಬಂಗಾಳದ ದುರ್ಗಾಪುರದ ಅಲಾಯ್ ಸ್ಟೀಲ್ ಪ್ಲಾಂಟ್ ಅನ್ನು ಮಾರಾಟ ಮಾಡುವುದಿಲ್ಲ ಎಂಬ ಭರವಸೆ ನೀಡುವಿರಾ?

ಇದನ್ನೂ ಓದಿ ಕೇಂದ್ರ ಉಕ್ಕು ಸಚಿವರಾದ ಕುಮಾರಸ್ವಾಮಿ; ಭದ್ರಾವತಿಯ ವಿಐಎಸ್​ಎಲ್​ ಕಾರ್ಖಾನೆಗೆ ಹಿಡಿದ ಗ್ರಹಣ ಬಿಡುತ್ತಾ?

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ ಸರಕಾರವು ವೈಜಾಗ್ ಸ್ಟೀಲ್ ಪ್ಲಾಂಟ್ ಎಂದೇ ಖ್ಯಾತಿ ಪಡೆದಿರುವ ರಾಷ್ಟ್ರೀಯ ಇಸ್ಪತ್ ನಿಗಮ ಲಿಮಿಟೆಡ್(ಆರ್‍ಐಎನ್‍ಎಲ್) ಅನ್ನು ಪ್ರಧಾನಿಯ ಸ್ನೇಹಿತರಿಗೆ ಮಾರಾಟ ಮಾಡಲು ಪ್ರಸ್ತಾವನೆ ಸಲ್ಲಿಸಿತ್ತು. ಸುಮಾರು 1 ಲಕ್ಷ ಜನ ಜೀವನೋಪಾಯಕ್ಕೆ ಈ ಕಾರ್ಖಾನೆ ಮೇಲೆ ಅವಲಂಬಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.

2021ರ ಜನವರಿಯಲ್ಲಿ ಆರ್ಥಿಕ ವ್ಯವಹಾರಗಳ ಮೇಲೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರ್‌ಐಎನ್‍ಎಲ್ ಶೇ.100ರಷ್ಟು ಖಾಸಗಿಕರಣದ ಪ್ರಸ್ತಾವನೆಗೆ ಅಂಕಿತ ನೀಡಿದ್ದು, ಕಳೆದ ಮೂರು ವರ್ಷಗಳಿಂದ ಕಾರ್ಖಾನೆಯ ಕಾರ್ಮಿಕರು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಕೇಂದ್ರ ಸರಕಾರದ ಉದ್ದೇಶಪೂರ್ವಕ ನಿರ್ಲಕ್ಷ್ಯದ ಪರಿಣಾಮವಾಗಿ ಈ ಕಾರ್ಖಾನೆ ನಷ್ಟ ಅನುಭವಿಸುತ್ತಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಈ ವೈಜಾಗ್ ಉಕ್ಕಿನ ಕಾರ್ಖಾನೆಯನ್ನು ಪ್ರಧಾನಿಯ ಸ್ನೇಹಿತರಿಗೆ ಮಾರುವುದಿಲ್ಲ ಎಂದು ಲಿಖಿತ ಭರವಸೆ ನೀಡಬಲ್ಲರೇ? ಎಂದು ಅವರು ಪ್ರಶ್ನಿಸಿದ್ದಾರೆ.

2019ರಲ್ಲಿ ಮೋದಿ ಸರಕಾರವು ಸೇಲಂ ಉಕ್ಕಿನ ಕಾರ್ಖಾನೆಯಲ್ಲಿ ಬಂಡಾವಾಳ ಹೂಡಿಕೆ ಸ್ಥಗಿತಗೊಳಿಸಲು ತೀರ್ಮಾನಿಸಿತ್ತು. ನಂತರ 2000 ಕಾರ್ಮಿಕರು, ಕಾರ್ಮಿಕರ ಕುಟುಂಬದವರು, ಕಾರ್ಖಾನೆಗೆ ಜಾಗ ನೀಡಿದ್ದ ರೈತರು ಈ ಕಾರ್ಖಾನೆಯ ಖಾಸಗೀಕರಣ ವಿರೋಧಿಸಿ ಹೋರಾಟ ಮಾಡಿದರು. ಈ ಕಾರ್ಖಾನೆ ಸುಮಾರು 25 ಹಳ್ಳಿಗಳಷ್ಟು ವಿಸ್ತೀರ್ಣ ಹೊಂದಿದ್ದು, ಉದ್ದೇಶಪೂರ್ವಕವಾಗಿ ಈ ಕಾರ್ಖಾನೆಯನ್ನು ನಷ್ಟದಲ್ಲಿ ನಡೆಸಲಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ ಎಂದು ಜೈರಾಮ್ ತಿಳಿಸಿದ್ದಾರೆ

ಭಾರತೀಯ ಉಕ್ಕು ಪ್ರಾಧಿಕಾರದ ಮುಖ್ಯಸ್ಥರು ಆಡಳಿತ ಪಕ್ಷದ ವಕ್ತಾರರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಕೇಂದ್ರ ಸರಕಾರ ಈವರೆಗೂ ಈ ಕಾರ್ಖಾನೆ ಮಾರಲು ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಈ ಕಾರ್ಖಾನೆಯ ಖಾಸಗೀಕರಣ ಪ್ರಕ್ರಿಯೆ ಮುಂದುವರಿಸುವರೇ? ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಡಾ.ಮನಮೋಹನ್ ಸಿಂಗ್ ಪರಿಕಲ್ಪನೆಯಲ್ಲಿ ನಗರ್ನಾರ್ ಉಕ್ಕು ಕಾರ್ಖಾನೆಯು ಬಸ್ತರ್ ಪ್ರದೇಶದ ಜನರಿಗೆ ಸಾವಿರಾರು ಉದ್ಯೋಗ ಸಿಗುವ ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಆದರೆ ಮೋದಿ 2020ರಿಂದ ಈ ಕಾರ್ಖಾನೆಯನ್ನು ಖಾಸಗೀಕರಣ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದರಲ್ಲಿ ಬಹುಪಾಲು ಒಡೆತನ ಪ್ರಧಾನಿಯ ಉದ್ಯಮಿ ಸ್ನೇಹಿತರ ಪಾಲಾಗಲು ಸಿದ್ಧತೆ ನಡೆಸಿತ್ತು. ಆದರೆ, ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಅಮಿತ್ ಶಾ ಬಸ್ತ ಪ್ರದೇಶಕ್ಕೆ ಭೇಟಿ ನೀಡಿ ಈ ಕಾರ್ಖಾನೆಯನ್ನು ಖಾಸಗಿಕರಣ ಮಾಡುವುದಿಲ್ಲ ಎಂದು ಮಾತು ಕೊಟ್ಟಿದ್ದರು ಎಂದು ಅವರು ಸ್ಮರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು