AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಸೇನೆಯ ಮಿಗ್-21 ವಿಮಾನ ಪತನ; ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ದುರಂತ ಸಾವು

ರಾಜಸ್ಥಾನದ ಜೈಸಲ್ಮೇರ್ ಬಳಿ ಇಂದು ಸಂಜೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದರು. ವಿಮಾನದ ಪೈಲೆಟ್​ಗಾಗಿ ಶೋಧಕಾರ್ಯ ನಡೆಸಲಾಗಿತ್ತು. ವಿಮಾನ ಪತನಗೊಂಡಿರುವ ಖಚಿತ ಸ್ಥಳದ ಬಗ್ಗೆ ಮಾಹಿತಿ ಬಹಿರಂಗಪಡಿಸಿರಲಿಲ್ಲ.

ಭಾರತೀಯ ವಾಯುಸೇನೆಯ ಮಿಗ್-21 ವಿಮಾನ ಪತನ; ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ದುರಂತ ಸಾವು
Mig-21 (ಸಾಂದರ್ಭಿಕ ಚಿತ್ರ)
Follow us
TV9 Web
| Updated By: ganapathi bhat

Updated on:Dec 24, 2021 | 11:16 PM

ದೆಹಲಿ: ಭಾರತೀಯ ವಾಯುಸೇನೆಯ ಮಿಗ್-21 ಯುದ್ಧ ವಿಮಾನ ಇಂದು (ಡಿಸೆಂಬರ್ 24) ಪತನಗೊಂಡಿದ್ದು ಘಟನೆಯಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿದ್ದಾರೆ. ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ರಾಜಸ್ಥಾನದ ಜೈಸಲ್ಮೇರ್ ಬಳಿ ಇಂದು ಸಂಜೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದರು. ವಿಮಾನದ ಪೈಲೆಟ್​ಗಾಗಿ ಶೋಧಕಾರ್ಯ ನಡೆಸಲಾಗಿತ್ತು. ವಿಮಾನ ಪತನಗೊಂಡಿರುವ ಖಚಿತ ಸ್ಥಳದ ಬಗ್ಗೆ ಮಾಹಿತಿ ಬಹಿರಂಗಪಡಿಸಿರಲಿಲ್ಲ.

ಸ್ಯಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ನೇಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್​ಪಿ ಅಜಯ್ ಸಿಂಗ್ ತಿಳಿಸಿದ್ದರು. ಸ್ಥಳೀಯ ಪೊಲೀಸರು ಈಗಾಗಲೇ ವಿಮಾನ ಅಪಘಾತ ಪ್ರದೇಶಕ್ಕೆ ಭೇಟಿ ನೀಡಿದ್ದರು.

ವಿಮಾನ ಅಪಘಾತ ಆಗಿರುವ ಬಗ್ಗೆ ಭಾರತೀಯ ವಾಯುಸೇನೆಯ ಟ್ವಿಟರ್ ಹ್ಯಾಂಡಲ್ ಕೂಡ ದೃಢಪಡಿಸಿತ್ತು. ಇಂದು ರಾತ್ರಿ ಸುಮಾರು 8.30 ರ ವೇಳೆಗೆ ಮಿಗ್-21 ಏರ್ ಕ್ರಾಫ್ಟ್ ಪತನವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಟ್ವೀಟ್ ಮಾಡಲಾಗಿದೆ ಎಂದು ಈ ಮೊದಲು ಟ್ವೀಟ್ ಮಾಡಿತ್ತು. ಇದೀಗ ಘಟನೆಯಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Varun Singh: ಹೆಲಿಕಾಪ್ಟರ್​ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್ ಸಿಂಗ್​ ನಿಧನ

ಇದನ್ನೂ ಓದಿ: ಪಾಕ್ ಫೈಟರ್ ಜೆಟ್ ಹೊಡೆದುರುಳಿಸಿದ ಬಾಲಕೋಟ್ ಹೀರೊ ಅಭಿನಂದನ್ ವರ್ಧಮಾನ್​​ಗೆ ವೀರ ಚಕ್ರ ಪ್ರಶಸ್ತಿ ಪ್ರದಾನ

Published On - 11:10 pm, Fri, 24 December 21

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್