AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಡಲು ಬೆಚ್ಚನೆಯ ಬಟ್ಟೆ ಇಲ್ಲದೆ ಬಿಹಾರ ಶಾಲೆಯ ವಿದ್ಯಾರ್ಥಿ ಸಾವು

ತೊಡಲು ಬೆಚ್ಚನೆಯ ಬಟ್ಟೆ ಇಲ್ಲದೆ 10 ವರ್ಷದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬಿಹಾರ ಶಾಲೆಯಲ್ಲಿ ನಡೆದಿದೆ. ಬಿಹಾರದಲ್ಲಿ ಶೀತ ಅಲೆ ಮುಂದುವರೆದಿದೆ, ಪೂರ್ವ ಚಂಪಾರಣ್ ಜಿಲ್ಲೆಯ ಶಾಲಾ ವಿದ್ಯಾರ್ಥಿಯೊಬ್ಬ ಬುಧವಾರ ಸಾವನ್ನಪ್ಪಿದ್ದಾನೆ.

ತೊಡಲು ಬೆಚ್ಚನೆಯ ಬಟ್ಟೆ ಇಲ್ಲದೆ ಬಿಹಾರ ಶಾಲೆಯ ವಿದ್ಯಾರ್ಥಿ ಸಾವು
ಶಾಲೆImage Credit source: NDTV
ನಯನಾ ರಾಜೀವ್
|

Updated on: Jan 11, 2024 | 2:45 PM

Share

ತೊಡಲು ಬೆಚ್ಚನೆಯ ಬಟ್ಟೆ ಇಲ್ಲದೆ 10 ವರ್ಷದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬಿಹಾರ ಶಾಲೆಯಲ್ಲಿ ನಡೆದಿದೆ. ಬಿಹಾರದಲ್ಲಿ ಶೀತ ಅಲೆ ಮುಂದುವರೆದಿದೆ, ಪೂರ್ವ ಚಂಪಾರಣ್ ಜಿಲ್ಲೆಯ ಶಾಲಾ ವಿದ್ಯಾರ್ಥಿಯೊಬ್ಬ ಬುಧವಾರ ಸಾವನ್ನಪ್ಪಿದ್ದಾನೆ.

ಚಾಕಿಯಾದ ಆದರ್ಶ್ ಸರ್ಕಾರಿ ಮಧ್ಯಮ ಶಾಲೆಯಲ್ಲಿ ಈ ಪ್ರಕರಣ ನಡೆದಿದ್ದು, ಆರನೇ ತರಗತಿಯ ವಿದ್ಯಾರ್ಥಿ ಮನೀಶ್ ಕುಮಾರ್ ಪ್ರಾರ್ಥನೆಯ ವೇಳೆ ಪ್ರಜ್ಞಾಹೀನನಾಗಿ ಕುಸಿದುಬಿದ್ದಿದ್ದ. ಶಿಕ್ಷಕರು ಅವರನ್ನು ಸ್ಥಳೀಯ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದರು.

ಬಾಲಕ ಬೆಚ್ಚನೆಯ ಬಟ್ಟೆ ಧರಿಸದೇ ಇರುವುದು, ಬೆಳಗ್ಗೆ ತಿಂಡಿ ತಿನ್ನದ ಕಾರಣ ಪ್ರಜ್ಞೆ ತಪ್ಪಿದ್ದ ಎಂದು ವೈದ್ಯರು ತಿಳಿಸಿದ್ದಾರೆ. ಮನೆಯವರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಪಟ್ಟಿದ್ದ. ಬಳಿಕ ಆಸ್ಪತ್ರೆಯಲ್ಲಿಯೇ ಆಕ್ರೋಶ ವ್ಯಕ್ತವಾಗಿತ್ತು.  ಶಾಲೆಗೆ ಬಂದ ಬಳಿಕ ಚಳಿ ಮತ್ತಷ್ಟು ಹೆಚ್ಚಾಗಿತ್ತು, ತೊಡಲು ಬಟ್ಟೆ ಇರಲಿಲ್ಲ.

ಮತ್ತಷ್ಟು ಓದಿ: ಕ್ರಿಕೆಟ್ ಪಂದ್ಯದ ವೇಳೆ ತಲೆಗೆ ಚೆಂಡು ಬಡಿದು ವ್ಯಕ್ತಿ ಸಾವು..!

ಮೃತರ ಹಿರಿಯ ಸಹೋದರ ಚಂದನ್ ಕುಮಾರ್ ಮಾತನಾಡಿ, ಇಂದು ಬೆಳಗ್ಗೆ ಮನೀಷ್​ ಶಾಲೆಗೆ ಹೋಗಿದ್ದ, ಸ್ವಲ್ಪ ಸಮಯದ ನಂತರ ಶಿಕ್ಷಕರು ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಹೇಳಿದರು, ಆಸ್ಪತ್ರೆಗೆ ಬಂದ ಬಳಿಕ ಮೃತಪಟ್ಟಿರುವುದಾಗಿ ಹೇಳಿದ್ದಾರೆ ಎಂದು ವೈದ್ಯರು ಹೇಳಿರುವುದಾಗಿ ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆಹಾಕಿದ್ದಾರೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಆದರೆ ಜಿಲ್ಲಾ ಶಿಕ್ಷಣಾಧಿಕಾರಿ ಸಂಜಯ್‌ಕುಮಾರ್ ಮಾತನಾಡಿ, ಮಗುವಿನ ಕುಟುಂಬಸ್ಥರು ಥಳಿಸಿದ್ದಾರೆ ಬಾಲಕನ್ನು ಥಳಿಸಿದ್ದರು, ಇದರಿಂದ ಕೋಪಗೊಂಡು ಊಟ ಸೇವಿಸದೆ, ಬೆಚ್ಚನೆಯ ಬಟ್ಟೆ ಧರಿಸದೆ ಶಾಲೆಗೆ ಬಂದಿದ್ದ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್