AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Winter Session 2022: ಡಿ. 7ರಿಂದ ಸಂಸತ್ ಚಳಿಗಾಲದ ಅಧಿವೇಶನ; ಬೆಲೆ ಏರಿಕೆ, ಹಣದುಬ್ಬರ ಚರ್ಚೆ ಕಾವೇರುವ ಸಾಧ್ಯತೆ

ಬೆಲೆ ಏರಿಕೆ, ಹಣದುಬ್ಬರ ನಿಯಂತ್ರಿಸುವಲ್ಲಿ ವಿಫಲವಾಗಿರುವುದು, ನಿರುದ್ಯೋಗ ಇತ್ಯಾದಿ ವಿಚಾರಗಳ ಬಗ್ಗೆ ಪ್ತತಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸುವ ಸಾಧ್ಯತೆ ಇದೆ.

Parliament Winter Session 2022: ಡಿ. 7ರಿಂದ ಸಂಸತ್ ಚಳಿಗಾಲದ ಅಧಿವೇಶನ; ಬೆಲೆ ಏರಿಕೆ, ಹಣದುಬ್ಬರ ಚರ್ಚೆ ಕಾವೇರುವ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 19, 2022 | 1:24 PM

Share

ನವದೆಹಲಿ: ಸಂಸತ್​ನ ಚಳಿಗಾಲದ ಅಧಿವೇಶನ (Parliament Winter Session) ಡಿಸೆಂಬರ್ 7ರಿಂದ 29ರ ವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಮಾಹಿತಿ ನೀಡಿದ್ದಾರೆ. ಒಟ್ಟು 17 ದಿನಗಳ ಕಾಲ ಕಲಾಪ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. 2022ರ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರ ವರೆಗೆ ನಡೆಯಲಿದ್ದು, ಈ 23 ದಿನಗಳ ಅವಧಿಯಲ್ಲಿ 17 ಕಲಾಪಗಳು ನಡೆಯಲಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಕುರಿತಾದ ಚರ್ಚೆಗಳನ್ನು ಅಮೃತ ಕಾಲವು ಎದುರು ನೋಡುತ್ತಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಜಗದೀಪ್ ಧನ್​ಕರ್ ಅವರು ಉಪ ರಾಷ್ಟ್ರಪತಿಯಾದ ಬಳಿಕ ನಡೆಯುತ್ತಿರುವ ಮೊದಲ ಸಂಸತ್ ಅಧಿವೇಶನ ಇದಾಗಿದೆ. ಅವರು ಮೊದಲ ಬಾರಿಗೆ ರಾಜ್ಯಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಅಧಿವೇಶನದ ಮೊದಲ ದಿನ ಸಂತಾಪ ಸೂಚಕ ಸಭೆ ನಡೆಯಲಿದ್ದು, ದಿನದ ಮಟ್ಟಿಗೆ ಕಲಾಪ ಮುಂದೂಡಿಕೆಯಾಗಲಿದೆ. ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಸೇರಿದಂತೆ ಕೆಲವು ಸಂಸದರು ಇತ್ತೀಚೆಗೆ ಅಸುನೀಗಿದ್ದಾರೆ.

ಪ್ರತಿಪಕ್ಷಗಳ ಚರ್ಚೆ ಕಾವೇರುವ ನಿರೀಕ್ಷೆ

ಅಧಿವೇಶನದಲ್ಲಿ ಮಂಡಿಸಬೇಕಾದ ಮಸೂದೆಗಳ ಪಟ್ಟಿಯನ್ನು ಸರ್ಕಾರ ಸಿದ್ಧಪಡಿಸಿದೆ. ಆದರೆ, ಪ್ರತಿಪಕ್ಷಗಳು ಮಸೂದೆಗಳ ಬಗ್ಗೆ ಚರ್ಚೆಗೆ ಪಟ್ಟು ಹಿಡಿಯುವ ಸಾಧ್ಯತೆ ಇದೆ. ಇಷ್ಟೇ ಅಲ್ಲದೆ ಬೆಲೆ ಏರಿಕೆ, ಹಣದುಬ್ಬರ ನಿಯಂತ್ರಿಸುವಲ್ಲಿ ವಿಫಲ, ನಿರುದ್ಯೋಗ ಇತ್ಯಾದಿ ವಿಚಾರಗಳ ಬಗ್ಗೆ ಪ್ತತಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಮುಂಗಾರು ಅಧಿವೇಶನ ಜುಲೈ 18ರಿಂದ ಆಗಸ್ಟ್ 8ರ ವರೆಗೆ ನಡೆದಿತ್ತು. 22 ದಿನಗಳ ಅವಧಿಯಲ್ಲಿ 16 ಕಲಾಪಗಳು ನಡೆದಿದ್ದವು. ಅಧಿವೇಶನದಲ್ಲಿ ಆರು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. 7 ಮಸೂದೆಗಳಿಗೆ ಲೋಕಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದರೆ, ರಾಜ್ಯಸಭೆಯಲ್ಲಿ 5 ಮಸೂದೆಗಳಿಗೆ ಅನುಮೋದನೆ ದೊರೆತಿತ್ತು. ಒಂದು ಮಸೂದೆಯನ್ನು ವಾಪಸ್ ಪಡೆಯಲಾಗಿತ್ತು. ಎರಡೂ ಸದನಗಳಲ್ಲಿ 5 ಮಸೂದೆಗಳಿಗೆ ಅನುಮೋದನೆ ದೊರೆತಿತ್ತು.

ಕೋವಿಡ್ ವಿರುದ್ಧ ಮುನ್ನೆಚ್ಚರಿಕೆ

ಕೋವಿಡ್ ಸಾಂಕ್ರಾಮಿಕದ ಸಂಖ್ಯೆ ದೇಶದಲ್ಲಿ ಕಡಿಮೆಯಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲ ಸದಸ್ಯರಿಗೆ ಲಸಿಕೆ ಪಡೆದಿದ್ದಾರೆ. ಯಾವುದೇ ಪ್ರಮುಖ ಕೋವಿಡ್-ಪ್ರೇರಿತ ನಿರ್ಬಂಧಗಳಿಲ್ಲದೆ ಅಧಿವೇಶನವನ್ನು ಕರೆಯುವ ಸಾಧ್ಯತೆಯಿದೆ ಎಂದು ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:36 am, Sat, 19 November 22

Follow Us
TV9 Web
TV9 Web

TV9 Kannada

Read More
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್