AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farm Laws Repeal Bill 2021 ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ಅಂಗೀಕಾರ

ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಲೋಕಸಭೆಯಲ್ಲಿ ಮಂಡಿಸಿದ ನಂತರ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಅಂಗೀಕರಿಸಲಾಗಿದೆ.

Farm Laws Repeal Bill 2021 ಲೋಕಸಭೆಯಲ್ಲಿ ವಿಪಕ್ಷಗಳ  ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ಅಂಗೀಕಾರ
ನರೇಂದ್ರ ಸಿಂಗ್ ತೋಮರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 29, 2021 | 12:49 PM

Share

ದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (Narendra Singh Tomar) ಅವರು ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ( Farm Laws Repeal Bill 2021) ಮಂಡಿಸಿದರು. ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಲೋಕಸಭೆಯಲ್ಲಿ ಮಂಡಿಸಿದ ನಂತರ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಅಂಗೀಕರಿಸಲಾಗಿದೆ. ಏತನ್ಮಧ್ಯೆ, ಸದನದಲ್ಲಿ ಮಸೂದೆಯನ್ನು ಚರ್ಚಿಸಲು ಕಾಂಗ್ರೆಸ್ ಒತ್ತಾಯಿಸಿದೆ. ಲೋಕಸಭೆ ಕಲಾಪಗಳನ್ನು ಮಧ್ಯಾಹ್ನ 2 ಗಂಟೆವರೆಗೆ ಮುಂದೂಡಲಾಗಿದೆ. 2021 ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸುವ ಮೊದಲು ಯಾವುದೇ ಚರ್ಚೆಗೆ ಅವಕಾಶ ಮಾಡಿಕೊಡಲು ಸ್ಪೀಕರ್ ಓಂ ಬಿರ್ಲಾ ಅವರು ವಿರೋಧ ಪಕ್ಷದ ಸಂಸದರಿಗೆ ಮನವಿ ಮಾಡಿದ್ದರು. 2021 ರ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಚರ್ಚಿಸಲು ಒತ್ತಾಯಿಸಿ ತೃಣಮೂಲ ಕಾಂಗ್ರೆಸ್ ಸಂಸದರು ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದರು. ಟಿಎಂಸಿ ಕೃಷಿ ಕಾನೂನುಗಳ ರದ್ದತಿ ಮಸೂದೆಯ ಮೇಲೆ ಚರ್ಚೆ ಮಾಡಬೇಕೆಂದು ಬಯಸಿದೆ. ಆದರೆ ಸರ್ಕಾರವು ರೈತರ ಪರಿಸ್ಥಿತಿಗಳನ್ನು ಚರ್ಚಿಸಲು ಹೆದರುತ್ತಿದೆ. ರೈತರ ಪರವಾಗಿ ಮಾತನಾಡಲು ಪ್ರತಿಪಕ್ಷಗಳಿಗೆ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಸಂಸತ್ತಿನಲ್ಲಿ ಹೇಳಿದರು. ರಾಜ್ಯಸಭೆಯನ್ನು ಮಧ್ಯಾಹ್ನ 12:20ಕ್ಕೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಸೂದೆಯನ್ನು ಸದನದಲ್ಲಿ ಚರ್ಚಿಸಬೇಕೆಂದು ಒತ್ತಾಯಿಸಿದರು. ಕೃಷಿ ಕಾನೂನುಗಳ ರದ್ದತಿ ಮಸೂದೆ, 2021 ಅನ್ನು ಇಂದು ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆಯಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕೃಷಿ ಕಾನೂನು  ರದ್ದತಿ ಮಸೂದೆ, 2021 ಲೋಕಸಭೆಯಿಂದ ಅಂಗೀಕರಿಸಲ್ಪಟ್ಟಿದ್ದು ಇದು  ಆಂದೋಲನದ ಸಮಯದಲ್ಲಿ ಪ್ರಾಣ ಕಳೆದುಕೊಂಡ ಎಲ್ಲಾ 750 ರೈತರಿಗೆ ಗೌರವವಾಗಿದೆ. ಎಂಎಸ್‌ಪಿ ಸೇರಿದಂತೆ ಇತರೆ ಸಮಸ್ಯೆಗಳು ಬಾಕಿ ಉಳಿದಿರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ ಎಂದು  ಉತ್ತರ ಪ್ರದೇಶದ  ಕೌಶಂಬಿಯಲ್ಲಿ ಮಾತನಾಡಿದ ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: Farm Laws Repeal ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ: ಮೂರು ಕೃಷಿ ಕಾನೂನುಗಳ ರದ್ದತಿಗೆ ಆದ್ಯತೆ, ಎಂಎಸ್​ಪಿ ಕಾಯ್ದೆಗೆ ವಿಪಕ್ಷ ಆಗ್ರಹ

Published On - 12:22 pm, Mon, 29 November 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!