Farm Laws Repeal ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ: ಮೂರು ಕೃಷಿ ಕಾನೂನುಗಳ ರದ್ದತಿಗೆ ಆದ್ಯತೆ, ಎಂಎಸ್​ಪಿ ಕಾಯ್ದೆಗೆ ವಿಪಕ್ಷ ಆಗ್ರಹ

| Updated By: ರಶ್ಮಿ ಕಲ್ಲಕಟ್ಟ

Updated on: Nov 29, 2021 | 10:43 AM

Parliament Winter Session ಸಂಸತ್​​ನ 25 ದಿನಗಳ ಚಳಿಗಾಲದ ಅಧಿವೇಶನದಲ್ಲಿ, ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆ  ಸೇರಿದಂತೆ 36 ಮಸೂದೆಗಳನ್ನು ಅಂಗೀಕರಿಸುವ ನಿರೀಕ್ಷೆಯಿದೆ. ಪೆಗಾಸಸ್ ವಿವಾದ ಮತ್ತು ಬೆಲೆ ಏರಿಕೆ ಸೇರಿದಂತೆ ಇತರ ವಿಷಯಗಳಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಮೂಲೆಗುಂಪು ಮಾಡುವ ಸಾಧ್ಯತೆಯಿದೆ.

Farm Laws Repeal ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ: ಮೂರು ಕೃಷಿ ಕಾನೂನುಗಳ ರದ್ದತಿಗೆ ಆದ್ಯತೆ, ಎಂಎಸ್​ಪಿ ಕಾಯ್ದೆಗೆ ವಿಪಕ್ಷ ಆಗ್ರಹ
ಸಂಸತ್ ಭವನ
Follow us on

ದೆಹಲಿ: ಸಂಸತ್​​ನ ಚಳಿಗಾಲದ (Winter Session) ಅಧಿವೇಶನ ಇಂದು (ಸೋಮವಾರ) ಆರಂಭವಾಗಲಿದ್ದು ಮೊದಲ ದಿನವೇ ಕೃಷಿ ಕಾನೂನುಗಳನ್ನು(farm laws) ರದ್ದುಗೊಳಿಸುವ ಮಸೂದೆಗೆ ಕೇಂದ್ರ ಆದ್ಯತೆ ನೀಡಲಿದೆ. ವಿರೋಧ ಪಕ್ಷಗಳು ಮತ್ತು ಬಿಜೆಪಿಯ ಕೆಲವು ಮೈತ್ರಿ ಪಕ್ಷಗಳು ಭಾನುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ರೈತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ (MSP) ಶಾಸನಬದ್ಧ ಬೆಂಬಲವನ್ನು ನೀಡುವಂತೆ ಒತ್ತಾಯಿಸಿವೆ.ತೃಣಮೂಲ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ, ವೈಎಸ್‌ಆರ್ ಕಾಂಗ್ರೆಸ್ ಪಕ್ಷ, ಬಿಜು ಜನತಾ ದಳ, ತೆಲಂಗಾಣ ರಾಷ್ಟ್ರ ಸಮಿತಿ, ಆಮ್ ಆದ್ಮಿ ಪಕ್ಷ, ಬಹುಜನ ಸಮಾಜ ಪಕ್ಷ ಮತ್ತು ಎಡಪಕ್ಷಗಳು ಎಂಎಸ್‌ಪಿ ಮೇಲೆ ಕಾನೂನು ಭರವಸೆಗಳನ್ನು ಪಡೆಯುವಲ್ಲಿ ಕಾಂಗ್ರೆಸ್‌ ಜತೆ ದನಿಗೂಡಿಸಿವೆ. ಮೂಲಗಳ ಪ್ರಕಾರ ವಿಧೇಯಕವನ್ನು ಲೋಕಸಭೆಯು ಅಂಗೀಕರಿಸಿದ ಪರಿಗಣನೆಗೆ ಶುಕ್ರವಾರ ರಾಜ್ಯಸಭಾ ಸದಸ್ಯರಿಗೆ ರವಾನಿಸಲಾಗಿದೆ. ಲೋಕಸಭೆಯಲ್ಲಿ ಅಂಗೀಕಾರವಾದ ಬಳಿಕ ಸೋಮವಾರವೇ ರಾಜ್ಯಸಭೆಯಲ್ಲೂ ಸರ್ಕಾರ ಮಂಡಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ರದ್ದತಿ ಮಸೂದೆಯಲ್ಲಿನ ಕೃಷಿ ಕಾನೂನುಗಳ ಹಿಂತೆಗೆದುಕೊಳ್ಳುವಿಕೆಯನ್ನು ವಿವರಿಸಿದ ಸರ್ಕಾರವು “ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆ ಮತ್ತು ಅಭಿವೃದ್ಧಿಯ ಹಾದಿಯಲ್ಲಿ ಒಗ್ಗೂಡಿಸುವುದು” ಈ ಹೊತ್ತಿನ ತುರ್ತು ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಸಂಸತ್​​ನ 25 ದಿನಗಳ ಚಳಿಗಾಲದ ಅಧಿವೇಶನದಲ್ಲಿ, ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆ  ಸೇರಿದಂತೆ 36 ಮಸೂದೆಗಳನ್ನು ಅಂಗೀಕರಿಸುವ ನಿರೀಕ್ಷೆಯಿದೆ. ಪೆಗಾಸಸ್ ವಿವಾದ ಮತ್ತು ಬೆಲೆ ಏರಿಕೆ ಸೇರಿದಂತೆ ಇತರ ವಿಷಯಗಳಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಮೂಲೆಗುಂಪು ಮಾಡುವ ಸಾಧ್ಯತೆಯಿದೆ.

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರು, ರೈತರ ಸಮಸ್ಯೆಗಳು ಬಹಳ ಮುಖ್ಯವಾದ ಕಾರಣ ವಿವರವಾದ ಚರ್ಚೆಯ ಅಗತ್ಯವಿದೆ ಎಂದು ಸೂಚಿಸಿದರು. ಕೃಷಿ ಕಾನೂನುಗಳನ್ನು ಹಿಂಪಡೆಯುವುದನ್ನು ಮೊದಲು ಚರ್ಚೆಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ ತೃಣಮೂಲ ಕಾಂಗ್ರೆಸ್, ಹಾಗೆ ಮಾಡದಿದ್ದರೆ ಖಜಾನೆ ಪೀಠಗಳು ಮತ್ತು ಪ್ರತಿಪಕ್ಷಗಳ ನಡುವೆ ಘರ್ಷಣೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ.

ಚಳಿಗಾಲದ ಅಧಿವೇಶನ: ಯಾವೆಲ್ಲ ಮಸೂದೆ ಮಂಡನೆಯಾಗಲಿದೆ?

ಚಳಿಗಾಲದ ಅಧಿವೇಶನದ 19 ಅಧಿವೇಶನಗಳಲ್ಲಿ ಸರ್ಕಾರವು 36 ಶಾಸಕಾಂಗ ಮಸೂದೆಗಳು ಮತ್ತು ಒಂದು ಹಣಕಾಸು ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ.

ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಮೊದಲ ದಿನ ಲೋಕಸಭೆಯಲ್ಲಿ ಪರಿಚಯಿಸಲು ಮತ್ತು ಅಂಗೀಕರಿಸಲು ಪಟ್ಟಿ ಮಾಡಲಾಗಿದೆ. ಇದನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪರಿಚಯಿಸಲಿದ್ದಾರೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ತಮ್ಮ ಸಂಸದರಿಗೆ ದಿನದಂದು ಹಾಜರಾಗುವಂತೆ ವಿಪ್ ಜಾರಿಗೊಳಿಸಿವೆ.

ಅಧಿವೇಶನದಲ್ಲಿ ಅಂಗೀಕರಿಸಬೇಕಾದ ಇತರ ಮಸೂದೆಗಳಲ್ಲಿ ನಿರ್ಣಾಯಕ ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿಯ ನಿಯಂತ್ರಣ ಮಸೂದೆ, ಹಣಕಾಸು ಮತ್ತು ದಿವಾಳಿ (ಎರಡನೇ ತಿದ್ದುಪಡಿ) ಮಸೂದೆ, 2021 ಮತ್ತು ವಿದ್ಯುತ್ (ತಿದ್ದುಪಡಿ) ಮಸೂದೆ ಸೇರಿವೆ.

ನಿನ್ನೆ ನಡೆದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಾಗಿದ್ದರು. ಇದು ಸಂಪ್ರದಾಯದ ಉಲ್ಲಂಘನೆ ಎಂದು ನಿರಾಕರಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, “ಪ್ರಧಾನಿ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವ ಯಾವುದೇ ಸಂಪ್ರದಾಯ ಇರಲಿಲ್ಲ, ಇದನ್ನು ಮೋದಿಜಿ ಪ್ರಾರಂಭಿಸಿದರು” ಎಂದು ಹೇಳಿದರು.

ಪ್ರಧಾನಿ ಪಾಲ್ಗೊಳ್ಳುವ ನಿರೀಕ್ಷೆಯಲ್ಲಿದ್ದೇವೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. “ಈ ಮೂರು ಕಾನೂನುಗಳು ಮತ್ತೆ ಬೇರೆ ರೂಪದಲ್ಲಿ ಬರಬಹುದು ಎಂಬ ಕೆಲವು ಆತಂಕಗಳು ಇರುವುದರಿಂದ ನಾವು ಕೃಷಿ ಕಾನೂನುಗಳ ಬಗ್ಗೆ ಇನ್ನಷ್ಟು ಕೇಳಲು ಬಯಸಿದ್ದೇವೆ” ಎಂದು ಅವರು ಹೇಳಿದರು.
ಭಾನುವಾರ 31 ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು. ಆದರೆ ಆಮ್ ಆದ್ಮಿ ಪಕ್ಷವು ಅದರ ಮಧ್ಯದಲ್ಲಿ ಹೊರನಡೆದಿದೆ. ಪಕ್ಷವನ್ನು ಪ್ರತಿನಿಧಿಸುತ್ತಿದ್ದ ಸಂಜಯ್ ಸಿಂಗ್ ಅವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ.

ಭಾನುವಾರ 31 ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು. ಆದರೆ ಆಮ್ ಆದ್ಮಿ ಪಕ್ಷವು ಅದರ ಮಧ್ಯದಲ್ಲಿ ಹೊರನಡೆದಿದೆ. ಪಕ್ಷವನ್ನು ಪ್ರತಿನಿಧಿಸುತ್ತಿದ್ದ ಸಂಜಯ್ ಸಿಂಗ್ ಅವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ.
ಕಾರ್ಯವಿಧಾನದ ನಿಯಮಗಳ ಅಡಿಯಲ್ಲಿ ಅನುಮತಿಸಲಾದ ಯಾವುದೇ ವಿಷಯವನ್ನು ಸದನದ ನೆಲದ ಮೇಲೆ ಚರ್ಚಿಸಲು ಸರ್ಕಾರ ಯಾವಾಗಲೂ ಸಿದ್ಧವಾಗಿದೆ ಎಂದು ಜೋಶಿ ಹೇಳಿದರು. ಸದನ ಸುಗಮವಾಗಿ ನಡೆಯಲು ಎಲ್ಲಾ ಪಕ್ಷಗಳು ಸಹಕಾರ ನೀಡುವಂತೆ ಜೋಶಿ ಅವರು ಮನವಿ ಮಾಡಿದರು.

ಮೇಘಾಲಯದ ಲೋಕಸಭಾ ಸಂಸದರಾಗಿರುವ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಅಗಾಥ ಸಂಗ್ಮಾ ಅವರು ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ತೃಣಮೂಲ ಕಾಂಗ್ರೆಸ್ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಭಿನ್ನಾಭಿಪ್ರಾಯದ ಕಳವಳವನ್ನು ನಿವಾರಿಸುವ ಮೂಲಕ ಸಂಯುಕ್ತ ವಿರೋಧ ಪಕ್ಷದ ಭಾಗವಾಗಿ ಉಳಿಯುತ್ತದೆ ಎಂದು ಭಾನುವಾರ ಭರವಸೆ ನೀಡಿದೆ. ಆದಾಗ್ಯೂ, ಪಕ್ಷದ ಹಿರಿಯ ನಾಯಕ ಡೆರೆಕ್ ಒ’ಬ್ರೇನ್, ಆರ್​​ಜೆಡಿ, ಡಿಎಂಕೆ, ಆರ್​ಜೆ ಡಿ ಮತ್ತು ಸಿಪಿಎಂ ನಡುವೆ ವ್ಯತ್ಯಾಸವಿದೆ. ಅವೆಲ್ಲವೂ ಕಾಂಗ್ರೆಸ್ ಚುನಾವಣಾ ಮಿತ್ರಪಕ್ಷಗಳಾಗಿವೆ. ಎನ್ ಸಿಪಿ, ಶಿವಸೇನೆ ಮತ್ತು ಜೆಎಂಎಂ ಕಾಂಗ್ರೆಸ್ ಜೊತೆ ಸರ್ಕಾರವನ್ನು ನಡೆಸುತ್ತವೆ. ಕಾಂಗ್ರೆಸ್ ನಮ್ಮ ಚುನಾವಣಾ ಮಿತ್ರ ಪಕ್ಷವಲ್ಲ ಅಥವಾ ನಾವು ಅವರೊಂದಿಗೆ ಸರ್ಕಾರವನ್ನು ನಡೆಸುತ್ತಿಲ್ಲ. ಅದೇ ವ್ಯತ್ಯಾಸ” ಎಂದಿದ್ದಾರೆ.

ಇದನ್ನೂ ಓದಿ: ಚಳಿಗಾಲದ ಅಧಿವೇಶನಕ್ಕೂ ಮುನ್ನ ನಡೆದ  ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳಿಂದ ವಾಗ್ದಾಳಿ

Published On - 10:24 am, Mon, 29 November 21