AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿನ ಚಳಿಗಾಲದ ಅಧಿವೇಶನ ಯಶಸ್ವಿಯಾಗಿ ಪೂರ್ಣಗೊಂಡಿದೆ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Winter session of Parliament: ಡಿ 29 ರವರೆಗೆ 17 ಸಭೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ಆದರೆ ಅಧಿವೇಶನ ಅಗತ್ಯ ಸರ್ಕಾರಿ ವ್ಯವಹಾರಗಳನ್ನು ಪೂರ್ಣಗೊಳಿಸಿದ ಕಾರಣ ಮತ್ತು ಶಿಫಾರಸುಗಳ ಮೇರೆಗೆ ಮೊಟಕುಗೊಳಿಸಲಾಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು.

ಸಂಸತ್ತಿನ ಚಳಿಗಾಲದ ಅಧಿವೇಶನ ಯಶಸ್ವಿಯಾಗಿ ಪೂರ್ಣಗೊಂಡಿದೆ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಸಂಸತ್ತಿನ ಚಳಿಗಾಲದ ಅಧಿವೇಶನ ತನ್ನ ಉದ್ದೇಶವನ್ನ ಪೂರ್ಣಗೊಳಿಸಿದೆ : ಪ್ರಲ್ಹಾದ್ ಜೋಶಿ
TV9 Web
| Edited By: |

Updated on: Dec 23, 2022 | 5:15 PM

Share

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವನ್ನ (Winter session of Parliament) ಇಂದು ಶುಕ್ರವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದು, ಈ ಅಧಿವೇಶನದಲ್ಲಿ 13 ದಿನಗಳ ಕಾಲ ಕಲಾಪಗಳು ನಡೆದಿದೆ. ಅಧಿವೇಶನದ ಉದ್ದೇಶ ಪೂರ್ಣಗೊಂಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಅಧಿವೇಶನ ಮುಂದೂಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು, ಡಿಸೆಂಬರ್ 7 ರಿಂದ ಆರಂಭವಾಗಿದ್ದ ಚಳಿಗಾಲದ ಅಧಿವೇಶನದಲ್ಲಿ 13 ದಿನಗಳು ಲೋಕಸಭೆ ಹಾಗೂ ರಾಜ್ಯಸಭೆ ಕಲಾಪ ನಡೆದವು. ಈ ಅವಧಿಯಲ್ಲಿ ಸಂಸತ್ತಿನ ಉಭಯ ಸದನಗಳಿಂದ ಒಂಬತ್ತು ಮಸೂದೆಗಳು (Bills) ಅಂಗೀಕರಿಸಲ್ಪಟ್ಟಿದ್ದು, ಅಷ್ಟೇ ಅಲ್ಲದೇ ಒಂಬತ್ತು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ ಎಂದರು.

ಲೋಕಸಭೆಯಲ್ಲಿ 7 ಮಸೂದೆಗಳು ಮತ್ತು ರಾಜ್ಯಸಭೆಯಲ್ಲಿ 9 ಮಸೂದೆಗಳು ಅಂಗೀಕರಿಸಲ್ಪಟ್ಟಿವೆ. ಡಿಸೆಂಬರ್ 7ರ ಬುಧವಾರ ಆರಂಭವಾದ ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 23, 2022 ರ ಶುಕ್ರವಾರದಂದು ಮುಂದೂಡಲಾಗಿದೆ. 17 ದಿನಗಳ ಅವಧಿಯಲ್ಲಿ 13 ಸಭೆಗಳನ್ನು ನಡೆಸಲಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಡಿಸೆಂಬರ್ 29 ರವರೆಗೆ 17 ಸಭೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ಆದರೆ ಅಧಿವೇಶನ ಅಗತ್ಯ ಸರ್ಕಾರಿ ವ್ಯವಹಾರಗಳನ್ನು ಪೂರ್ಣಗೊಳಿಸಿದ ಕಾರಣ ಮತ್ತು ಶಿಫಾರಸುಗಳ ಮೇರೆಗೆ ಮೊಟಕುಗೊಳಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು.

ಸಂಸತ್ತಿನ ಉಭಯ ಸದನಗಳ ವ್ಯವಹಾರಗಳ ಸಲಹಾ ಸಮಿತಿ (BAC) ಕ್ರಿಸ್‌ಮಸ್ ಮತ್ತು ವರ್ಷಾಂತ್ಯದ ಆಚರಣೆಗಳ ಹಿನ್ನೆಲೆಯಲ್ಲಿ ಅಧಿವೇಶನ ಮೊಟಕುಗೊಳಿಸುವ ಚರ್ಚಿಸಿತ್ತು. ಸಂಸತ್ತಿನ ಸದಸ್ಯರ ಬೇಡಿಕೆ ಮತ್ತು ಭಾವನೆಗಳನ್ನು ಅರಿತುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಲ್ಹಾದ ಜೋಶಿ ಹೇಳಿದರು.

ಲೋಕಸಭೆ ಶೇ 97%ರಷ್ಟು ಪ್ರತಿಶತ ತನ್ನ ಕಾರ್ಯಕ್ರಮವನ್ನ ಪೂರ್ಣಗೊಳಿಸಿದ್ದು, ರಾಜ್ಯಸಭೆಯಲ್ಲಿ ನೂರಕ್ಕೆ ನೂರರಷ್ಟು ಕಾರ್ಯಕಲಾಪಗಳು ಸಂಪೂರ್ಣಗೊಂಡಿವೆ. ಇದಕ್ಕಾಗಿ ಅಧಿವೇಶದಲ್ಲಿ ಭಾಗಿಯಾಗಿ ಸಹಕರಿಸಿದ ಉಭಯ ಸದನಗಳ ಎಲ್ಲಾ ಸದಸ್ಯರಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ಇದೇ ವೇಳೆ ಧನ್ಯವಾದ ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ