AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕ್ರಿಮಿಯ ಅಟ್ಟಹಾಸದ ನಡುವೆಯೂ ಲಾಭದತ್ತ ಮುನ್ನುಗ್ಗಿದ ವಿಪ್ರೋ ಸಂಸ್ಥೆ

ಕಳೆದ 2 ತ್ರೈಮಾಸಿಕಗಳಲ್ಲೂ ಸತತವಾಗಿ ಲಾಭದತ್ತ ಮುನ್ನುಗ್ಗುತ್ತಿರುವ ವಿಪ್ರೋ ಸಂಸ್ಥೆಯ ಲಾಭದಲ್ಲಿ ಶೇ.21ರಷ್ಟು ಏರಿಕೆ ಕಂಡಿದೆ. 2019ರ ಇದೇ ಅವಧಿಯಲ್ಲಿ ₹2,456 ಕೋಟಿ ಲಾಭ ಗಳಿಸಿದ್ದ ಸಂಸ್ಥೆಯ ಆದಾಯ ಈ ಬಾರಿ ಶೇ.1.3ರಷ್ಟು ಹೆಚ್ಚಾಗಿದೆ.

ಕೊರೊನಾ ಕ್ರಿಮಿಯ ಅಟ್ಟಹಾಸದ ನಡುವೆಯೂ ಲಾಭದತ್ತ ಮುನ್ನುಗ್ಗಿದ ವಿಪ್ರೋ ಸಂಸ್ಥೆ
ವಿಪ್ರೋ (ಸಾಂದರ್ಭಿಕ ಚಿತ್ರ)
Skanda
|

Updated on:Jan 13, 2021 | 6:13 PM

Share

ದೆಹಲಿ: ಕೊರೊನಾ ಹೊಡೆತಕ್ಕೆ ಸಿಲುಕಿ ಬಹುತೇಕ ಎಲ್ಲಾ ಕ್ಷೇತ್ರಗಳೂ ನಲುಗಿ ಹೋಗಿವೆ. ಕೆಲ ಸಂಸ್ಥೆಗಳು ಕೊವಿಡ್​ನಿಂದ ಶಾಶ್ವತವಾಗಿ ಕಣ್ಣು ಮುಚ್ಚಿದ್ದರೆ, ಕೆಲವು ಈಗೀಗ ಚೇತರಿಕೆ ಕಾಣುತ್ತಿವೆ. ಜಾಗತಿಕ ಮಟ್ಟದಲ್ಲಿ ಉದ್ಯೋಗ ನಷ್ಟ, ಆರ್ಥಿಕ ಸಂಕಷ್ಟ ಎಲ್ಲಾ ಇದ್ದರೂ ಸಾಫ್ಟ್​ವೇರ್​ ದಿಗ್ಗಜ ವಿಪ್ರೋ ಸಂಸ್ಥೆ 3ನೇ ತ್ರೈಮಾಸಿಕದಲ್ಲಿ ₹2,968 ಕೋಟಿ ನಿವ್ವಳ ಲಾಭ ಗಳಿಸಿರುವುದಾಗಿ ತಿಳಿಸಿದೆ.

ಕಳೆದ 2 ತ್ರೈಮಾಸಿಕಗಳಲ್ಲೂ ಸತತವಾಗಿ ಲಾಭದತ್ತ ಮುನ್ನುಗ್ಗುತ್ತಿರುವ ವಿಪ್ರೋ ಸಂಸ್ಥೆಯ ಲಾಭದಲ್ಲಿ ಶೇ.21ರಷ್ಟು ಏರಿಕೆ ಕಂಡಿದೆ. 2019ರ ಇದೇ ಅವಧಿಯಲ್ಲಿ ₹ 2,456 ಕೋಟಿ ಲಾಭ ಗಳಿಸಿದ್ದ ಸಂಸ್ಥೆಯ ಆದಾಯ ಈ ಬಾರಿ ಶೇ. 1.3ರಷ್ಟು ಹೆಚ್ಚಾಗಿದೆ. ಒಟ್ಟು ಆದಾಯ ₹ 15,470.5 ಕೋಟಿಯಿಂದ ₹ 15,670ಕೋಟಿಗೆ ಏರಿಕೆಯಾಗಿದೆ ಎಂದು ವಿಪ್ರೋ ಸಿಇಓ ಮತ್ತು ವ್ಯವಸ್ಥಾಪಕ ನಿರ್ದೇಶಕ ಥಿಯರಿ ಡೆಲಾಪೋರ್ಟ್​ ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ (ಟಿಸಿಎಸ್​) ಮೂರನೇ ತ್ರೈಮಾಸಿಕದ ಅಂತ್ಯದಲ್ಲಿ ಸಂಸ್ಥೆಯ ನಿವ್ವಳ ಲಾಭ ಶೇ.7ರಷ್ಟು ಹೆಚ್ಚಾಗಿದೆ ಎಂದು ತಿಳಿಸಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಐಟಿ ಸಂಸ್ಥೆಗಳ ಷೇರಿಗೆ ಉತ್ತಮ ಬೇಡಿಕೆ ವ್ಯಕ್ತವಾಗಿತ್ತು.

ದಿನವೂ 20 ಕೋಟಿ ದಾನ ಮಾಡ್ತಾರೆ ಈ ಕುಬೇರ.. ಆದರೂ ಆ ಸಂಪತ್ತು ತನ್ನದಲ್ಲ ಅಂತಾರೆ!

Published On - 6:10 pm, Wed, 13 January 21

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು