AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕ್ರಿಮಿಯ ಅಟ್ಟಹಾಸದ ನಡುವೆಯೂ ಲಾಭದತ್ತ ಮುನ್ನುಗ್ಗಿದ ವಿಪ್ರೋ ಸಂಸ್ಥೆ

ಕಳೆದ 2 ತ್ರೈಮಾಸಿಕಗಳಲ್ಲೂ ಸತತವಾಗಿ ಲಾಭದತ್ತ ಮುನ್ನುಗ್ಗುತ್ತಿರುವ ವಿಪ್ರೋ ಸಂಸ್ಥೆಯ ಲಾಭದಲ್ಲಿ ಶೇ.21ರಷ್ಟು ಏರಿಕೆ ಕಂಡಿದೆ. 2019ರ ಇದೇ ಅವಧಿಯಲ್ಲಿ ₹2,456 ಕೋಟಿ ಲಾಭ ಗಳಿಸಿದ್ದ ಸಂಸ್ಥೆಯ ಆದಾಯ ಈ ಬಾರಿ ಶೇ.1.3ರಷ್ಟು ಹೆಚ್ಚಾಗಿದೆ.

ಕೊರೊನಾ ಕ್ರಿಮಿಯ ಅಟ್ಟಹಾಸದ ನಡುವೆಯೂ ಲಾಭದತ್ತ ಮುನ್ನುಗ್ಗಿದ ವಿಪ್ರೋ ಸಂಸ್ಥೆ
ವಿಪ್ರೋ (ಸಾಂದರ್ಭಿಕ ಚಿತ್ರ)
Skanda
|

Updated on:Jan 13, 2021 | 6:13 PM

Share

ದೆಹಲಿ: ಕೊರೊನಾ ಹೊಡೆತಕ್ಕೆ ಸಿಲುಕಿ ಬಹುತೇಕ ಎಲ್ಲಾ ಕ್ಷೇತ್ರಗಳೂ ನಲುಗಿ ಹೋಗಿವೆ. ಕೆಲ ಸಂಸ್ಥೆಗಳು ಕೊವಿಡ್​ನಿಂದ ಶಾಶ್ವತವಾಗಿ ಕಣ್ಣು ಮುಚ್ಚಿದ್ದರೆ, ಕೆಲವು ಈಗೀಗ ಚೇತರಿಕೆ ಕಾಣುತ್ತಿವೆ. ಜಾಗತಿಕ ಮಟ್ಟದಲ್ಲಿ ಉದ್ಯೋಗ ನಷ್ಟ, ಆರ್ಥಿಕ ಸಂಕಷ್ಟ ಎಲ್ಲಾ ಇದ್ದರೂ ಸಾಫ್ಟ್​ವೇರ್​ ದಿಗ್ಗಜ ವಿಪ್ರೋ ಸಂಸ್ಥೆ 3ನೇ ತ್ರೈಮಾಸಿಕದಲ್ಲಿ ₹2,968 ಕೋಟಿ ನಿವ್ವಳ ಲಾಭ ಗಳಿಸಿರುವುದಾಗಿ ತಿಳಿಸಿದೆ.

ಕಳೆದ 2 ತ್ರೈಮಾಸಿಕಗಳಲ್ಲೂ ಸತತವಾಗಿ ಲಾಭದತ್ತ ಮುನ್ನುಗ್ಗುತ್ತಿರುವ ವಿಪ್ರೋ ಸಂಸ್ಥೆಯ ಲಾಭದಲ್ಲಿ ಶೇ.21ರಷ್ಟು ಏರಿಕೆ ಕಂಡಿದೆ. 2019ರ ಇದೇ ಅವಧಿಯಲ್ಲಿ ₹ 2,456 ಕೋಟಿ ಲಾಭ ಗಳಿಸಿದ್ದ ಸಂಸ್ಥೆಯ ಆದಾಯ ಈ ಬಾರಿ ಶೇ. 1.3ರಷ್ಟು ಹೆಚ್ಚಾಗಿದೆ. ಒಟ್ಟು ಆದಾಯ ₹ 15,470.5 ಕೋಟಿಯಿಂದ ₹ 15,670ಕೋಟಿಗೆ ಏರಿಕೆಯಾಗಿದೆ ಎಂದು ವಿಪ್ರೋ ಸಿಇಓ ಮತ್ತು ವ್ಯವಸ್ಥಾಪಕ ನಿರ್ದೇಶಕ ಥಿಯರಿ ಡೆಲಾಪೋರ್ಟ್​ ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ (ಟಿಸಿಎಸ್​) ಮೂರನೇ ತ್ರೈಮಾಸಿಕದ ಅಂತ್ಯದಲ್ಲಿ ಸಂಸ್ಥೆಯ ನಿವ್ವಳ ಲಾಭ ಶೇ.7ರಷ್ಟು ಹೆಚ್ಚಾಗಿದೆ ಎಂದು ತಿಳಿಸಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಐಟಿ ಸಂಸ್ಥೆಗಳ ಷೇರಿಗೆ ಉತ್ತಮ ಬೇಡಿಕೆ ವ್ಯಕ್ತವಾಗಿತ್ತು.

ದಿನವೂ 20 ಕೋಟಿ ದಾನ ಮಾಡ್ತಾರೆ ಈ ಕುಬೇರ.. ಆದರೂ ಆ ಸಂಪತ್ತು ತನ್ನದಲ್ಲ ಅಂತಾರೆ!

Published On - 6:10 pm, Wed, 13 January 21

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ