AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯಲ್ಲಿ 2.5 ಕಿ.ಮೀ. ಉದ್ದದ ಚತುಷ್ಪಥ ರಸ್ತೆ ನಿರ್ಮಾಣ; ಭಾರತದ ವಿಶ್ವದಾಖಲೆ ಇದು ಎಂದ ಸಚಿವ ನಿತಿನ್ ಗಡ್ಕರಿ

ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ನಮ್ಮ ದೇಶ ಅಭೂತಪೂರ್ವವಾಗಿ ಪ್ರಗತಿ ಸಾಧಿಸುತ್ತಿದೆ. 2020-21ರ ವರ್ಷದಲ್ಲಿ ಒಂದು ದಿನಕ್ಕೆ 37 ಕಿ.ಮೀ.ಹೆದ್ದಾರಿ ನಿರ್ಮಿಸಲಾಗುತ್ತಿದೆ ಎಂದು ಸ್ವಲ್ಪ ದಿನಗಳ ಹಿಂದೆ ಕೇಂದ್ರ ಸಾರಿಗೆ ಸಚಿವಾಲಯ ಹೇಳಿತ್ತು.

24 ಗಂಟೆಯಲ್ಲಿ 2.5 ಕಿ.ಮೀ. ಉದ್ದದ ಚತುಷ್ಪಥ ರಸ್ತೆ ನಿರ್ಮಾಣ; ಭಾರತದ ವಿಶ್ವದಾಖಲೆ ಇದು ಎಂದ ಸಚಿವ ನಿತಿನ್ ಗಡ್ಕರಿ
ನಿತಿನ್​ ಗಡ್ಕರಿ
Lakshmi Hegde
|

Updated on:Apr 03, 2021 | 2:23 PM

Share

ಲಖನೌ: 2.5 ಕಿಮೀ ಉದ್ದದ ಚತುಷ್ಪಥ ಕಾಂಕ್ರೀಟ್​ ರಸ್ತೆಯನ್ನು ಕೇವಲ 24 ಗಂಟೆಯಲ್ಲಿ ನಿರ್ಮಿಸಿ ವಿಶ್ವ ದಾಖಲೆ ನಿರ್ಮಿಸಿದ್ದೇವೆ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, ಸೋಲಾಪುರ- ಬಿಜಾಪುರ ಮಧ್ಯ 25 ಕಿಮೀ ದೂರದ ಡಾಂಬರು ರಸ್ತೆಯನ್ನು ಸಹ 24 ಗಂಟೆಯಲ್ಲಿ ನಿರ್ಮಿಸಲಾಗಿದ್ದು, ಇದೂ ಕೂಡ ವಿಶ್ವದಾಖಲೆ ಹೌದು ಎಂದು ಹೇಳಿದ್ದಾರೆ.

ಲಖನೌನ ಖುರಾಮ್ ನಗರ ಮೇಲ್ಸೇತುವೆ ನಿರ್ಮಾಣಕ್ಕೆ ಅಡಿಗಲ್ಲು ಸ್ಥಾಪನೆ ಮಾಡಿ, ತೆಧಿ ಪುಲಿಯಾ ಫ್ಲೈಓವರ್ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ನಿತಿನ್​ ಗಡ್ಕರಿ, ರಸ್ತೆ ನಿರ್ಮಾಣದಲ್ಲಿ ಭಾರತ ಇದೀಗ ವಿಶ್ವದಾಖಲೆ ಬರೆದಿದೆ. 24 ಗಂಟೆಯಲ್ಲಿ 2.5 ಕಿಮೀ ದೂರದ ಚತುಷ್ಪಥ ರಸ್ತೆ ಹಾಗೂ 25 ಕಿಮೀ ದೂರದ ಏಕಪಥ ರಸ್ತೆ ನಿರ್ಮಿಸಿ ಗಿನ್ನೀಸ್ ದಾಖಲೆ ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.

21ನೇ ಶತಮಾನದ ರಾಜಕೀಯ ಅಭಿವೃದ್ಧಿ ಪರ ರಾಜಕೀಯ. ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರ ಭಾರತದ ನಿರ್ಣಯ ಕೈಗೊಂಡಿದ್ದಾರೆ. ಭಾರತ 5 ಟ್ರಿಲಿಯನ್​ ಆರ್ಥಿಕತೆಯ ಗುರು ತಲುಪುವ ಮಹದೋದ್ದೇಶವನ್ನು ಹೊಂದಲಾಗಿದೆ. ಮುಂದಿನ 5 ವರ್ಷಗಳಲ್ಲಿ 111 ಲಕ್ಷ ಕೋಟಿ ರೂ. ವೆಚ್ಚದ ಮೂಲಸೌಕರ್ಯಗಳನ್ನು ನಿರ್ಮಿಸಬೇಕಾಗಿದ್ದು, ಅದರಲ್ಲಿ ರಸ್ತೆ ವಲಯದ ಜವಾಬ್ದಾರಿ ನನ್ನದು ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ನಮ್ಮ ದೇಶ ಅಭೂತಪೂರ್ವವಾಗಿ ಪ್ರಗತಿ ಸಾಧಿಸುತ್ತಿದೆ. 2020-21ರ ವರ್ಷದಲ್ಲಿ ಒಂದು ದಿನಕ್ಕೆ 37 ಕಿ.ಮೀ.ಹೆದ್ದಾರಿ ನಿರ್ಮಿಸಲಾಗುತ್ತಿದೆ ಎಂದು ಸ್ವಲ್ಪ ದಿನಗಳ ಹಿಂದೆ ಕೇಂದ್ರ ಸಾರಿಗೆ ಸಚಿವಾಲಯ ಹೇಳಿತ್ತು. ಅಲ್ಲದೆ, 2014ರ ಏಪ್ರಿಲ್​ನಲ್ಲಿ 91,287 ಕಿ.ಮೀ ಇದ್ದ ರಾಷ್ಟ್ರೀಯ ಹೆದ್ದಾರಿಗಳ ಉದ್ದ, 2021ರ ಮಾರ್ಚ್​ 20ರಂದು 1,37,625 ಕಿಮೀಗೆ ಏರಿಕೆಯಾಗಿದೆ. ಅಂದರೆ ಶೇ.50 ರಷ್ಟು ಹೆಚ್ಚಾಗಿದೆ. ಇದೆಲ್ ಸಾಧ್ಯವಾಗಿದ್ದು ಇಡೀ ಇಲಾಖೆಯ, ಅಧಿಕಾರಿಗಳ ತಂಡದ ಶ್ರಮದಿಂದ ಎಂದೂ ಹೇಳಿದೆ.

With the construction of a 2 and Half km 4 lane road India holds world record

ಇದನ್ನೂ ಓದಿ:ಹಾರೆ ಹಿಡಿದು ಮಣ್ಣು ಅಗೆದ ಶಾಸಕ ಎಂ.ಪಿ. ರೇಣುಕಾಚಾರ್ಯಗೆ ಕೂಲಿ ಕಾರ್ಮಿಕರಿಂದ ಹೂ ಹಾರ -ಹೂ ಮಳೆ

IPL 2021: ಐಪಿಎಲ್​ನಲ್ಲಿ ಕೊಹ್ಲಿಗೆ ಕಂಟಕವಾಗಲಿದ್ದಾನೆ ಆರ್​ಸಿಬಿಯ ಈ ಮಾಜಿ ಆಟಗಾರ! ಅಂಕಿ- ಅಂಶವೂ ಅದನ್ನೇ ಹೇಳುತ್ತಿದೆ

Published On - 2:15 pm, Sat, 3 April 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ