AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಪತ್ನಿಯನ್ನು ಉಕ್ರೇನ್​​ನಲ್ಲಿ ಬಿಟ್ಟು ಬರಲಾರೆ: ಭಾರತಕ್ಕೆ ಮರಳಲು ನಿರಾಕರಿಸಿದ ವ್ಯಕ್ತಿ

ಭಾರತೀಯಳಲ್ಲದ ನನ್ನ ಗರ್ಭಿಣಿ ಹೆಂಡತಿಯನ್ನು ಯುದ್ಧ ಪೀಡಿತ ದೇಶದಿಂದ ಸ್ಥಳಾಂತರಿಸಲಾಗುವುದಿಲ್ಲ. ಹಾಗಾಗಿ ನಾನು ಭಾರತಕ್ಕೆ ಮರಳುವುದಿಲ್ಲ ಎಂದು ಗಗನ್ ಎಂಬ ವ್ಯಕ್ತಿ ಹೇಳಿದ್ದಾರೆ.

ಗರ್ಭಿಣಿ ಪತ್ನಿಯನ್ನು ಉಕ್ರೇನ್​​ನಲ್ಲಿ ಬಿಟ್ಟು ಬರಲಾರೆ: ಭಾರತಕ್ಕೆ ಮರಳಲು ನಿರಾಕರಿಸಿದ ವ್ಯಕ್ತಿ
ಗಗನ್
TV9 Web
| Edited By: |

Updated on: Mar 06, 2022 | 10:11 PM

Share

ಉಕ್ರೇನ್‌ನಲ್ಲಿರುವ (Ukraine) ಭಾರತೀಯ ವ್ಯಕ್ತಿಯೊಬ್ಬರು ಆಪರೇಷನ್ ಗಂಗಾ (Operation Ganga) ಅಡಿಯಲ್ಲಿ ತಾಯ್ನಾಡಿಗೆ ಮರಳಲು ನಿರಾಕರಿಸಿದ್ದಾರೆ. ಭಾರತೀಯಳಲ್ಲದ ನನ್ನ ಗರ್ಭಿಣಿ ಹೆಂಡತಿಯನ್ನು ಯುದ್ಧ ಪೀಡಿತ ದೇಶದಿಂದ ಸ್ಥಳಾಂತರಿಸಲಾಗುವುದಿಲ್ಲ. ಹಾಗಾಗಿ ನಾನು ಭಾರತಕ್ಕೆ ಮರಳುವುದಿಲ್ಲ ಎಂದು ಗಗನ್ ಎಂಬ ವ್ಯಕ್ತಿ ಹೇಳಿದ್ದಾರೆ. ಉಕ್ರೇನ್ ರಾಜಧಾನಿ ಕೀವ್​​ನಿಂದ ಪಲಾಯನ ಮಾಡಿರುವ ಗಗನ್, ತನ್ನ ಕುಟುಂಬ ಮತ್ತು ಎಂಟು ತಿಂಗಳ ಗರ್ಭಿಣಿಯಾಗಿರುವ ಪತ್ನಿಯನ್ನು ಉಕ್ರೇನ್‌ನಲ್ಲಿ ಬಿಡಲು ಸಾಧ್ಯವಿಲ್ಲ. “ನಾವು ಪೋಲೆಂಡ್‌ಗೆ ಹೋಗುತ್ತೇವೆ. ನಾವು ಪ್ರಸ್ತುತ ಲಿವಿವ್​​​ನಲ್ಲಿರುವ ಸ್ನೇಹಿತರ ಸ್ಥಳದಲ್ಲಿ ಇದ್ದೇವೆ ಎಂದು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.  ಫೆಬ್ರವರಿ 26 ರಂದು ಭಾರತವು ಆಪರೇಷನ್ ಗಂಗಾವನ್ನು ಪ್ರಾರಂಭಿಸಿತು. ಉಕ್ರೇನಿಯನ್ ಸರ್ಕಾರವು ನಾಗರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದ ನಂತರ ಭಾರತೀಯರನ್ನು ಅಲ್ಲಿಂದ ನೇರ ಸ್ಥಳಾಂತರಿಸುವುದು ಅಸಾಧ್ಯವಾಯಿತು ಭಾರತೀಯರು ಭೂ ಮಾರ್ಗಗಳ ಮೂಲಕ ಪೋಲೆಂಡ್, ರೊಮೇನಿಯಾ, ಸ್ಲೋವಾಕಿಯಾ, ಹಂಗೇರಿ ಮತ್ತು ಮೊಲ್ಡೊವಾ ದೇಶಗಳಿಗೆ ಪ್ರಯಾಣಿಸುವಂತೆ ಹೇಳಿದ್ದು ಅಲ್ಲಿಂದ ಭಾರತಕ್ಕೆ ಕರೆ ತರಲಾಗಿದೆ.  ಈ ದೇಶಗಳು ಮತ್ತು ಇತರ ಹತ್ತಿರದ ದೇಶಗಳಲ್ಲಿನ ಭಾರತೀಯ ರಾಯಭಾರ ಕಚೇರಿಗಳು ಯುಕ್ರೇನ್‌ನ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿವೆ, ಇದು ಯುದ್ಧದ ಹಿಡಿತದ ದೇಶದಿಂದ ಪ್ರಜೆಗಳಿಗೆ ದಾಟಲು ಅನುಕೂಲವಾಗುತ್ತದೆ.

ಏರ್ ಇಂಡಿಯಾ ಮತ್ತು ಭಾರತೀಯ ವಾಯುಪಡೆ ವಿಮಾನಗಳು ಭಾರತೀಯರನ್ನು ತಾಯ್ನಾಡಿಗೆ ಕರೆ ತರುತ್ತಿವೆ ಭಾರತವು 76 ವಿಮಾನಗಳಲ್ಲಿ 15,920 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಯಶಸ್ವಿಯಾಗಿ ಸ್ಥಳಾಂತರಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಭಾನುವಾರ ಟ್ವೀಟ್ ಮಾಡಿದ್ದಾರೆ. ಇವುಗಳಲ್ಲಿ, 31 ವಿಮಾನಗಳಲ್ಲಿ 6,680 ರೊಮೇನಿಯಾದಿಂದ, 5,300 ಹಂಗೇರಿಯಿಂದ 26 ವಿಮಾನಗಳಲ್ಲಿ, 2,822 ಪೋಲೆಂಡ್‌ನಿಂದ 13 ವಿಮಾನಗಳಲ್ಲಿ ಮತ್ತು 1,118 ಮಂದಿ ಸ್ಲೋವಾಕಿಯಾದಿಂದ ಆರು ವಿಮಾನಗಳಲ್ಲಿ ಬಂದಿದ್ದಾರೆ.

ಇದನ್ನೂ ಓದಿ: ಬುಡಾಪೆಸ್ಟ್ ಹೋಟೆಲ್‌ನಿಂದ 30 ಮಂದಿಯ ತಂಡ ಆಪರೇಷನ್ ಗಂಗಾಗೆ ಸಹಕರಿಸುತ್ತಿರುವುದು ಹೇಗೆ? ಇಲ್ಲಿದೆ ಮಾಹಿತಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ