AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WITT 2024: ದೇಶದ ಪ್ರಗತಿಗೆ ಮುಂಬರುವ ಮೂರನೇ ಅವಧಿ ನಿರ್ಣಾಯಕ: ಪ್ರಧಾನಿ ಮೋದಿ

ಟಿವಿ9 ನೆಟ್‌ವರ್ಕ್‌ನ 'ವಾಟ್ ಇಂಡಿಯಾ ಟುಡೇ ಥಿಂಕ್ಸ್' ಜಾಗತಿಕ ಶೃಂಗಸಭೆಯಲ್ಲಿ ಭಾರತದ ಭವಿಷ್ಯದ ಬಗ್ಗೆ ತಮ್ಮ ದೃಷ್ಟಿಕೋನವನ್ನು ವಿವರಿಸಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ಮೂರನೇ ಅವಧಿಯು ದೇಶದ ಪ್ರಗತಿಗೆ ನಿರ್ಣಾಯಕ ಕ್ಷಣವಾಗಿದೆ ಎಂದರು. ಮುಂದಿನ ಐದು ವರ್ಷಗಳಲ್ಲಿ ಭಾರತದ ಸಾಮರ್ಥ್ಯಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಬದ್ಧತೆಯನ್ನು ವ್ಯಕ್ತಪಡಿಸಿದರು.

WITT 2024: ದೇಶದ ಪ್ರಗತಿಗೆ ಮುಂಬರುವ ಮೂರನೇ ಅವಧಿ ನಿರ್ಣಾಯಕ: ಪ್ರಧಾನಿ ಮೋದಿ
ದೇಶದ ಪ್ರಗತಿಗೆ ಮುಂಬರುವ ಮೂರನೇ ಅವಧಿ ನಿರ್ಣಾಯಕ ಎಂದ ಪ್ರಧಾನಿ ಮೋದಿ
Rakesh Nayak Manchi
|

Updated on:Feb 26, 2024 | 11:04 PM

Share

ನವದೆಹಲಿ, ಫೆ.26: ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಟುಡೇ ಥಿಂಕ್ಸ್’ ಜಾಗತಿಕ ಶೃಂಗಸಭೆಯಲ್ಲಿ ಭಾರತದ ಭವಿಷ್ಯದ ಬಗ್ಗೆ ತಮ್ಮ ದೃಷ್ಟಿಕೋನವನ್ನು ವಿವರಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಮುಂದಿನ 5 ವರ್ಷಗಳು ಬಹಳ ಮಹತ್ವದ್ದಾಗಿದೆ. ಮುಂಬರುವ ಮೂರನೇ ಅವಧಿಯು ದೇಶದ ಪ್ರಗತಿಗೆ ನಿರ್ಣಾಯಕ ಕ್ಷಣವಾಗಿದೆ ಎಂದರು. ಅಲ್ಲದೆ, ಹಿಂದಿನ ಸರ್ಕಾರಗಳ ದೃಷ್ಟಿಕೋನದ ಕೊರತೆಯನ್ನು ಟೀಕಿಸಿದ ಅವರು, ಮುಂದಿನ ಐದು ವರ್ಷಗಳಲ್ಲಿ ಭಾರತದ ಸಾಮರ್ಥ್ಯಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಬದ್ಧತೆಯನ್ನು ವ್ಯಕ್ತಪಡಿಸಿದರು.

ನಮ್ಮ 3ನೇ ಅವಧಿಯಲ್ಲಿ, ನಾವು ಭಾರತದ ಸಾಮರ್ಥ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬೇಕು. ಭಾರತವೇ ಭವಿಷ್ಯ ಎಂದು ಎಲ್ಲರೂ ಹೇಳುತ್ತಿದ್ದಾರೆ. ಮುಂಬರುವ ಐದು ವರ್ಷಗಳು ಭಾರತದ ವಿಕ್ಷಿತ್ ಭಾರತ್ ಪಯಣಕ್ಕೆ ಬಹಳ ನಿರ್ಣಾಯಕವಾಗಿದೆ ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದರು.

ಪ್ರತಿಯೊಬ್ಬ ಭಾರತೀಯನಿಗೂ ದೇಶವು ಮುಂದೆ ಸಾಗುತ್ತಿದೆ ಎಂಬ ನಂಬಿಕೆಯಿದೆ. ಇಂದು ಭಾರತೀಯರು ದೇಶದ ಮೇಲೆ ಹೊಂದಿರುವ ಈ ನಂಬಿಕೆ, ಅವರು ತಮ್ಮ ಆತ್ಮದಲ್ಲಿಯೂ ಹೊಂದಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: Modi in WITT 2024: ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ದೇಶವನ್ನು ಮುನ್ನಡೆಸಬೇಕಿದೆ: ಪ್ರಧಾನಿ ಮೋದಿ

ಕಳೆದ 10 ವರ್ಷಗಳಿಂದ ಇದೇ ನಮ್ಮ ಮಂತ್ರ, ಇದೇ ನಮ್ಮ ಚಿಂತನೆ. ಇದು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಎಂದು ಹೇಳಿದ ಪ್ರಧಾನಿ ಮೋದಿ, ಹಿಂದಿನ ಸರ್ಕಾರ ರಿವರ್ಸ್​ ಗೇರ್​ನಲ್ಲಿತ್ತು. ಆದರೆ ಈಗ ಗೇರ್ ಬದಲಾಯಿಸಿ ಭಾರತದ ಅಭಿವೃದ್ಧಿ ಪಥವನ್ನು ವೇಗಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಭಾರತೀಯರ ಕೆಲಸದ ನೀತಿಯ ಬಗ್ಗೆ ಮಾಡಿದ ಟೀಕೆಗಳನ್ನು ಉಲ್ಲೇಖಿಸಿದ ಮೋದಿ, ಹಿಂದಿನ ಸರ್ಕಾರಗಳು ದೇಶ ಮತ್ತು ಜನರ ಸಾಮರ್ಥ್ಯದ ಬಗ್ಗೆ ನಂಬಿಕೆ ಹೊಂದಿರಲಿಲ್ಲ. ಆದರೆ, ಕಳೆದ 10 ವರ್ಷಗಳಲ್ಲಿ ಬದಲಾದ ಭಾರತದಲ್ಲಿ ಜನರು ಸರ್ಕಾರದ ವ್ಯವಸ್ಥೆ ಮೇಲೆ ನಂಬಿಕೆ ಹೊಂದಿದ್ದಾರೆ. ಮಾತ್ರವಲ್ಲದೆ, ನಾನು ಏನು ಬೇಕಾದರೂ ಮಾಡಬಲ್ಲೆ, ನನಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಪ್ರತಿಯೊಬ್ಬ ಭಾರತೀಯ ಯೋಚಿಸಲು ಆರಂಭಿಸಿದ್ದಾನೆ ಎಂದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 pm, Mon, 26 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ