WITT TV9 Global Summit 2024: ನನ್ನ ಮದೀನಾ ಭೇಟಿ ಇಸ್ಲಾಮಿಕ್ ದೇಶಗಳಲ್ಲಿ ಪ್ರಧಾನಿ ಮೋದಿಯ ಸ್ವೀಕಾರಕ್ಕೆ ಸಾಕ್ಷಿ: ಸ್ಮೃತಿ ಇರಾನಿ

ಜಾಗತಿಕ ಶೃಂಗಸಭೆಯ ವೇದಿಕೆಯಲ್ಲಿ ಸ್ಮೃತಿ ಇರಾನಿ ಅವರು ಇಂದು ಪ್ರಧಾನಿ ಮೋದಿಯನ್ನು ಪ್ರಪಂಚದಾದ್ಯಂತ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. ಇಂದು ದೇಶದ ಜನರು ಯಾವಾಗ ಬೇಕಾದರೂ ಜಗತ್ತಿನ ಯಾವುದೇ ಭಾಗಕ್ಕೆ ಹೋಗಬಹುದು. ಮೋದಿ ಇದ್ದರೆ ಅದು ಸಾಧ್ಯ, ಎಲ್ಲಿಯಾದರೂ ಸಿಕ್ಕಿಹಾಕಿಕೊಂಡರೆ ಮತ್ತೆ ಬರುತ್ತೇವೆ ಎನ್ನುವ ನಂಬಿಕೆ ಇದೆ. ತಮ್ಮ ಮದೀನಾ ಭೇಟಿಯ ಬಗ್ಗೆಯೂ ಮುಕ್ತವಾಗಿ ಮಾತನಾಡಿದ್ದಾರೆ.

WITT TV9 Global Summit 2024: ನನ್ನ ಮದೀನಾ ಭೇಟಿ ಇಸ್ಲಾಮಿಕ್ ದೇಶಗಳಲ್ಲಿ ಪ್ರಧಾನಿ ಮೋದಿಯ ಸ್ವೀಕಾರಕ್ಕೆ ಸಾಕ್ಷಿ: ಸ್ಮೃತಿ ಇರಾನಿ
ಸ್ಮೃತಿ ಇರಾನಿ

Updated on: Feb 26, 2024 | 1:06 PM

ನನ್ನ ಮದೀನಾ ಭೇಟಿಯು ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಯನ್ನು ಸ್ವೀಕರಿಸಿದ್ದಾರೆ ಎನ್ನುವುದಕ್ಕೆ ಸಾಕ್ಷಿ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ ಆಯೋಜಿಸಿದ್ದ ‘ವಾಟ್ ಇಂಡಿಯಾ ಥಿಂಕ್ಸ್​ ಟುಡೇ’ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪ್ರಪಂಚದಾದ್ಯಂತ ಪ್ರಧಾನಿ ಮೋದಿಯನ್ನು ಒಪ್ಪಿಕೊಂಡಿದ್ದಾರೆ ಅದಕ್ಕೆ ನನ್ನ ಮದೀನಾ ಭೇಟಿಯೇ ಸಾಕ್ಷಿ. ಈಗ ಜಗತ್ತಿನ ಯಾವ ಭಾಗಕ್ಕೆ ಹೋದರೂ ಯಾವುದೇ ತೊಂದರೆಯಿಲ್ಲದೆ ವಾಪಸಾಗುತ್ತೇವೆ ಎನ್ನುವ ಭರವಸೆಯನ್ನು ಮೋದಿ ತುಂಬಿದ್ದಾರೆ ಎಂದರು.

ಒಟ್ಟು 4300 ಮಹಿಳೆಯರು ಏಕಾಂಗಿಯಾಗಿ ಹಜ್ ಯಾತ್ರೆಗೆ ತೆರಳಿದ್ದರು. ಅವರು ಅಲ್ಲಿಗೆ ಹೋಗುವುದು ಇಂದು ಜಗತ್ತಿನಲ್ಲಿ ಎಲ್ಲೇ ಇದ್ದರೂ ಭಯಪಡಬೇಕಾಗಿಲ್ಲ ಎಂಬುದನ್ನು ತೋರಿಸುತ್ತದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ, ‘ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿ ಮತ್ತು ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವುದನ್ನು ನೋಡುವ ಸೌಭಾಗ್ಯ ನನಗೆ ಸಿಕ್ಕಿದೆ.

ಅವರು ಮಹಿಳೆಯರನ್ನು ಆರ್ಥಿಕತೆಯಲ್ಲಿ ಸಮಾನ ಪಾಲುದಾರರನ್ನಾಗಿ ಮಾಡಿದರು. ಶೃಂಗಸಭೆಯ ಎರಡನೇ ದಿನದ ‘ನಾರಿ ಶಕ್ತಿ ವಿಕಾಸ ಭಾರತ್’ ಅಧಿವೇಶನದಲ್ಲಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ಮು ಖ್ಯಮಂತ್ರಿಯಾಗಿದ್ದಾಗಲೂ ಮಹಿಳೆಯರ ಪ್ರಗತಿ ಮತ್ತು ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಆಸ್ಪತ್ರೆಗಳಲ್ಲಿಯೇ ಹೆರಿಗೆಯಾಗುವಂತೆ ಮಾಡಿದ ಮುಖ್ಯಮಂತ್ರಿ ಅವರು. ಇಲ್ಲದಿದ್ದರೆ, ಅದಕ್ಕೂ ಮೊದಲು ಮಹಿಳೆಯರು ಹೆರಿಗೆಗಾಗಿ ಆಸ್ಪತ್ರೆಗೆ ತಲುಪಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಮತ್ತಷ್ಟು ಓದಿ: WITT TV9 Global Summit 2024: ಸಂದೇಶ್​ಖಾಲಿಯಲ್ಲಿ ನಡೆದಿದ್ದು ಮನುಷ್ಯನ ಕಲ್ಪನೆಗೂ ಮೀರಿದ್ದು: ಸ್ಮೃತಿ ಇರಾನಿ

ಮಹಿಳೆಯರಿಗೆ ಮಾತ್ರ ಈ ಪ್ರಶ್ನೆ ಏಕೆ? ನೀವು ಮನೆ ಮತ್ತು ಕಚೇರಿಯನ್ನು ಹೇಗೆ ನಿರ್ವಹಿಸುತ್ತೀರಿ? ಎನ್ನುವ ಪ್ರಶ್ನೆಗೆ ಉತ್ತರಿಸಿದ ಸ್ಮೃತಿ ಇರಾನಿ, ಮಹಿಳೆಯರಿಗೆ ಮಾತ್ರ ಏಕೆ ಈ ಪ್ರಶ್ನೆ ಕೇಳುತ್ತಾರೆ. ಈ ಮೊದಲು ರಜನೀಶ್ ಕುಮಾರ್ ಇಲ್ಲಿದ್ದರು, ಅವರನ್ನು ಏಕೆ ಪ್ರಶ್ನಿಸಿಲ್ಲ ಎಂದರು.

ವಾಟ್​ ಇಂಡಿಯಾ ಥಿಂಕ್ಸ್ ಟುಡೇ ಜಾಗತಿಕ ಶೃಂಗಸಭೆಯು ಫೆಬ್ರವರಿ 27 ರವರೆಗೆ ಮುಂದುವರಿಯುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಲ್ಲದೆ ಹಲವು ಗಣ್ಯರು ಭಾಗವಹಿಸುತ್ತಿದ್ದಾರೆ. ಇದರಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಬಾಲಿವುಡ್ ತಾರೆ ಆಯುಷ್ಮಾನ್ ಖುರಾನಾ ಮತ್ತು ಕಂಗನಾ ರನೌತ್ ಸೇರಿದ್ದಾರೆ. ಅದೇ ಸಮಯದಲ್ಲಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:06 pm, Mon, 26 February 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us