AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WITT Summit 2026- ಜಗತ್ತಿಗೆ ಪ್ರತಿಭೆಗಳ ಪೂರೈಕೆಗೆ ಭಾರತ ಸಿದ್ಧ: ಡಬ್ಲ್ಯುಐಟಿಟಿ ಸಮಿಟ್​ನಲ್ಲಿ ಜೂಪಲ್ಲಿ ರಾಮು ರಾವ್ ಹೇಳಿಕೆ

My Home Group Executive Vice Chairman Jupally Ramu Rao speech at WITT Summit 2026: ಟಿವಿ9 ನೆಟ್ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯ 2026ರ ಆವೃತ್ತಿಗೆ ಇಂದು ಸೋಮವಾರ ಚಾಲನೆ ಸಿಕ್ಕಿದೆ. ಮೈ ಹೋಮ್ ಗ್ರೂಪ್​ನ ವೈಸ್ ಛೇರ್ಮನ್ ಜೂಪಲ್ಲಿ ರಾಮು ರಾವ್ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತ ಮಾಡಿದರು. ಜೂಪಲ್ಲಿ ಅವರು ಮಾಡಿದ ಭಾಷಣದ ಕೆಲ ಮುಖ್ಯಾಂಶಗಳು ಇಲ್ಲಿವೆ.

WITT Summit 2026- ಜಗತ್ತಿಗೆ ಪ್ರತಿಭೆಗಳ ಪೂರೈಕೆಗೆ ಭಾರತ ಸಿದ್ಧ: ಡಬ್ಲ್ಯುಐಟಿಟಿ ಸಮಿಟ್​ನಲ್ಲಿ ಜೂಪಲ್ಲಿ ರಾಮು ರಾವ್ ಹೇಳಿಕೆ
ಜೂಪಲ್ಲಿ ರಾಮು ರಾವ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 23, 2026 | 9:27 PM

Share

ನವದೆಹಲಿ, ಮಾರ್ಚ್ 23: ಗುಣಮಟ್ಟದ ಪ್ರತಿಭೆಗಳಿಗೆ ಇರವ ಬೇಡಿಕೆ ಸಾರ್ವತ್ರಿಕವಾದುದು. ಈ ಬೇಡಿಕೆ ಪೂರೈಸಲು ಶಕ್ತವಾಗಿರುವ ಏಕೈಕ ರಾಷ್ಟ್ರ ಭಾರತ ಎಂದು ಮೈ ಹೋಮ್ ಗ್ರೂಪ್​ನ ಎಕ್ಸಿಕ್ಯೂಟಿವ್ ವೈಸ್ ಛೇರ್ಮನ್ ಜೂಪಲ್ಲಿ ರಾಮು ರಾವ್ (Jupally Ramu Rao) ಹೇಳಿದರು. ಟಿವಿ9 ನೆಟ್ವರ್ಕ್ ಆಯೋಜಿಸಿರುವ 2026ರ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ (What India Thinks Today – WITT Summit 2026) ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ ರಾಮು ರಾವ್ ಅವರು ಮಾತನಾಡುತ್ತಿದ್ದರು.

ಟಿವಿ9 ನೆಟ್ವರ್ಕ್​ನ ಈ ವಾರ್ಷಿಕ ಸಮಿಟ್​ನ ಈ ಆವೃತ್ತಿಯ ಥೀಮ್ ‘ಭಾರತ ಹಾಗೂ ವಿಶ್ವ’ ಎಂದಿದೆ. ಹಿಂದಿನ ಆವೃತ್ತಿಗಳಂತೆ ಈ ಬಾರಿಯೂ ಟಿವಿ9ನ ಈ ಡಬ್ಲ್ಯುಐಟಿಟಿ ಸಮಿಟ್​ನಲ್ಲಿ ಉದ್ಯಮ ಮುಖಂಡರು, ನೀತಿ ರೂಪಕರು, ಜಾಗತಿಕ ಚಿಂತಕರು ಸೇರಿ ಭಾರತದ ಜಾಗತಿಕ ಪ್ರಭಾವ ಹಾಗೂ ಬೆಳವಣಿಗೆ ಕುರಿತು ವಿಚಾರ ವಿನಿಮಯ ಮಾಡಲಿದ್ದಾರೆ.

ಇದನ್ನೂ ಓದಿ: WITT Summit 2026: ತೈಲ ಬಿಕ್ಕಟ್ಟು – ಭಾರತ ಏನು ಯೋಚಿಸುತ್ತಿದೆ ಎಂಬುದು ಜಗತ್ತಿಗೆ ಮುಖ್ಯ ಎಂದ ಟಿವಿ9 ನೆಟ್ವರ್ಕ್ ಸಿಇಒ ಬರುಣ್ ದಾಸ್

ಸದ್ಯ ಜಾಗತಿಕವಾಗಿ ಬಹು ಬಿಕ್ಕಟ್ಟುಗಳು ಎಲ್ಲೆಡೆ ಆರ್ಥಿಕತೆಗಳಿಗೆ ಹೊಡೆತ ಕೊಡುತ್ತಿವೆ. ಇವುಗಳ ಮಧ್ಯೆ ಭಾರತವು ಕ್ಷಮತೆ, ಪ್ರತಿರೋಧ ಶಕ್ತಿಯಾಗಿ ತೋರ್ಪಡಿಸುತ್ತಿದೆ. ಡೆಮಾಕ್ರಸಿ, ಡೆಮಾಗ್ರಫಿ ಮತ್ತು ಡೈವರ್ಸಿಟಿ ಹೊಂದಿರುವ ಭಾರತದ ಬಗ್ಗೆ ವಿಶ್ವಕ್ಕೆ ವಿಶ್ವಾಸ ಮೂಡಿದೆ. ಭಾರತದ ಯುವ ಸಮುದಾಯದ ಬಗ್ಗೆ ವಿಶ್ವವು ಭರವಸೆ ಮತ್ತು ವಿಶ್ವಾಸ ಕಣ್ಣುಗಳಿಂದ ನೋಡುತ್ತಿದೆ ಎಂದು ಮೈ ಹೋಮ್ ಗ್ರೂಪ್​ನ ವೈಸ್ ಛೇರ್ಮನ್ ಹೇಳಿದರು.

ದೊಡ್ಡ ಆರ್ಥಿಕತೆಯ ದೇಶಗಳು ನಿಧಾನ ಬೆಳವಣಿಗೆ ಹೊಂದುತ್ತಿರುವ ಹೊತ್ತಲ್ಲಿ ಭಾರತ ಸ್ಥಿರ ಬೆಳವಣಿಗೆ ಸಾಧಿಸುತ್ತಿದೆ. ವಾರ್ಷಿಕವಾಗಿ ಶೇ. 7ರಷ್ಟು ಬೆಳವಣಿಗೆ ಹೊಂದುತ್ತಿದೆ. ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ದೇಶವೆನಿಸುವ ನಿಟ್ಟಿನಲ್ಲಿ ಭಾರತ ಸಾಗುತ್ತಿದೆ ಎಂದು ಹೇಳಿದ ರಾಮು ರಾವ್ ಜೂಪಲ್ಲಿ, ಸರ್ಕಾರದಿಂದ ಪೂರಕವಾದ ನೀತಿಗಳು ಜಾರಿಯಾಗುತ್ತಿರುವುದನ್ನು ಉಲ್ಲೇಖಿಸಿದರು.

ಇದನ್ನೂ ಓದಿ: PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ಭಾರತದ ಬಳಿ ಪ್ರತಿಭೆಗಳ ಕಣಜ

ಭಾರತವು ಜಾಗತಿಕ ಪ್ರತಿಭಾ ಕೇಂದ್ರವಾಗಿ ಬೆಳೆಯುತ್ತಿದೆ. ಜರ್ಮನಿಯಿಂದ ಕೆನಡಾವರೆಗೆ ವಿವಿಧ ದೇಶಗಳು ಹಾಗೂ ಗಲ್ಫ್​ನ ದೇಶಗಳು ಕೌಶಲ್ಯವಂತ ಮಾನವ ಸಂಪನ್ಮೂಲಗಳ ಕೊರತೆ ಎದುರಿಸುತ್ತಿವೆ. ಇದನ್ನು ಭಾರತ ನೀಗಬಲ್ಲುದು. ಗುಣಮಟ್ಟದ ಪ್ರತಿಭೆಯನ್ನು ದೊಡ್ಡ ಮಟ್ಟದಲ್ಲಿ ನಿರ್ಮಿಸಲು ಸಮರ್ಥವಾಗಿರುವ ಏಕೈಕ ದೇಶ ಭಾರತವಾಗಿದೆ ಎಂದು ಜೂಪಲ್ಲಿ ರಾಮು ರಾವ್ ಈ ಸಂದರ್ಭದಲ್ಲಿ ತಿಳಿಸಿದರು.

ಜೂಪಲ್ಲಿ ರಾಮು ರಾವ್ ಸ್ವಾಗತ ಭಾಷಣದ ಬಳಿಕ ಟಿವಿ9 ನೆಟ್ವರ್ಕ್​ನ ಎಂಡಿ ಮತ್ತು ಸಿಇಒ ಬರುಣ್ ದಾಸ್ ಅವರು ಮಾತನಾಡಿದರು. ಆ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಿಗಳು ಹಿಂದಿನ ಎರಡು ಶೃಂಗಸಭೆಗಳಲ್ಲೂ ಭಾಗವಹಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು