ವಂದೇ ಭಾರತ್ ರೈಲು ಡಿಕ್ಕಿ ಹೊಡೆದು ತಾಯಿ ಹಾಗೂ ಇಬ್ಬರು ಹೆಣ್ಣುಮಕ್ಕಳು ಸಾವು

|

Updated on: Oct 30, 2023 | 8:30 AM

ಡೆಹ್ರಾಡೂನ್ ಕಡೆಗೆ ಹೋಗುತ್ತಿದ್ದ ವಂದೇ ಭಾರತ್‌ ರೈಲು ರಿಕ್ಷಾಗೆ ಡಿಕ್ಕಿ ಹೊಡೆದು ಮಹಿಳೆ ಮತ್ತು ಅವರ ಇಬ್ಬರು ಪುತ್ರಿಯರು ಸಾವನ್ನಪ್ಪಿರುವ ಘಟನೆ ಮೀರತ್‌ನ ಕಂಕರ್‌ಖೇಡಾ ಪ್ರದೇಶದ ಕಾಸಿಂಪುರ ಗೇಟ್‌ನಲ್ಲಿ ಭಾನುವಾರ ಸಂಜೆ ನಡೆದಿದೆ. ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ವಂದೇ ಭಾರತ್ ರೈಲು ಡಿಕ್ಕಿ ಹೊಡೆದು ತಾಯಿ ಹಾಗೂ ಇಬ್ಬರು ಹೆಣ್ಣುಮಕ್ಕಳು ಸಾವು
ರೈಲು
Image Credit source: Amarujala.com
Follow us on

ಡೆಹ್ರಾಡೂನ್ ಕಡೆಗೆ ಹೋಗುತ್ತಿದ್ದ ವಂದೇ ಭಾರತ್‌ ರೈಲು ರಿಕ್ಷಾಗೆ ಡಿಕ್ಕಿ ಹೊಡೆದು ಮಹಿಳೆ ಮತ್ತು ಅವರ ಇಬ್ಬರು ಪುತ್ರಿಯರು ಸಾವನ್ನಪ್ಪಿರುವ ಘಟನೆ ಮೀರತ್‌ನ ಕಂಕರ್‌ಖೇಡಾ ಪ್ರದೇಶದ ಕಾಸಿಂಪುರ ಗೇಟ್‌ನಲ್ಲಿ ಭಾನುವಾರ ಸಂಜೆ ನಡೆದಿದೆ. ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಕಂಕರಖೇಡದ ಅಶೋಕಪುರಿ ನಿವಾಸಿ ನರೇಶ್ ಅವರು ಪತ್ನಿ ಲಕ್ಷ್ಮಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಮನೆಗೆ ಮರಳುತ್ತಿದ್ದರು. ಮಹಿಳೆಯ ಪತಿ ರಮೇಶ್​ ಆಟೋ ಓಡಿಸುತ್ತಿದ್ದು, ಹೆಂಡತಿ ಹಾಗೂ ಪುತ್ರಿಯರು ಹಿಂದೆ ಕುಳಿತಿದ್ದರು.

ಕಾಸಿಂಪುರ ಗೇಟ್ ಮುಚ್ಚಿದಾಗ, ಅವರು ಕೆಳಗಿನಿಂದ ಬೀದಿ ವ್ಯಾಪಾರಿಗಳನ್ನು ಹೊರಗೆ ಕರೆದೊಯ್ಯಲು ಯತ್ನಿಸಿದಾಗ ವಂದೇ ಭಾರತ್ ರೈಲು ಬಂದು ರಿಕ್ಷಾದ ಹಿಂಬದಿ ಡಿಕ್ಕಿ ಹೊಡೆದಿದೆ. ಇದರಿಂದ ಲಕ್ಷ್ಮಿ ಹಾಗೂ ಇಬ್ಬರು ಪುತ್ರಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರೈಲು ಸ್ವಲ್ಪ ಸಮಯ ಸ್ಥಳದಲ್ಲಿ ನಿಲ್ಲಿಸಿ ನಂತರ ಡೆಹ್ರಾಡೂನ್ ಕಡೆಗೆ ಹೊರಟಿತು. ಪೊಲೀಸರು ಮತ್ತು ಜಿಆರ್‌ಪಿ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು. ಮೂವರ ಮೃತ ದೇಹಗಳನ್ನು ನೋಡಿದ ರಮೇಶ್​ಪ್ರಜ್ಞೆ ತಪ್ಪಿದ್ದಾರೆ, ಮಾಹಿತಿ ಮೇರೆಗೆ ಸದರ್ ಪೊಲೀಸ್ ಠಾಣೆ, ಕಂಕರಖೇಡ, ಜಿಆರ್‌ಪಿ ಮತ್ತು ಆರ್‌ಪಿಎಫ್ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಕಾಸಂಪುರ ಗೇಟ್ ಬಳಿ ಅಪಘಾತದ ಬಗ್ಗೆ ಮಾಹಿತಿ ಪಡೆದ ಜನರು ಕೂಡ ಸ್ಥಳಕ್ಕೆ ಧಾವಿಸಿದರು. ಮೂವರ ಮೃತದೇಹ ಸುಮಾರು 2 ಗಂಟೆಗಳ ಕಾಲ ಹಳಿಯ ಮೇಲೆಯೇ ಇತ್ತು.

ಮತ್ತಷ್ಟು ಓದಿ: ಆಂಧ್ರಪ್ರದೇಶ ರೈಲು ಅಪಘಾತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ, ಹಲವು ರೈಲುಗಳ ಮಾರ್ಗ ಬದಲಾವಣೆ

ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಕ್ ಮೀನಾ, ಎಸ್‌ಎಸ್‌ಪಿ ರೋಹಿತ್ ಸಿಂಗ್ ಸಜ್ವಾನ್ ಮತ್ತು ಎಸ್‌ಪಿ ಸಿಟಿ ಪಿಯೂಷ್ ಸಿಂಗ್ ಘಟನಾ ಸ್ಥಳಕ್ಕೆ ತಲುಪಿದ್ದರು. ಈ ಕುರಿತು ತನಿಖೆ ನಡೆಸಲು ತಂಡವನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಕ್ ಮೀನಾ ತಿಳಿಸಿದ್ದಾರೆ. ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ