ಅಕ್ರಮ ಸಂಬಂಧವಿದೆಯೆಂಬ ಶಂಕೆ, ಪತಿ ಮಲಗಿರುವಾಗ ಖಾಸಗಿ ಅಂಗ ಕತ್ತರಿಸಿದ ಪತ್ನಿ

ವಿವಾಹೇತರ ಸಂಬಂಧದ ಶಂಕೆಯಲ್ಲಿ ಪತ್ನಿಯೊಬ್ಬಳು ಗಾಢ ನಿದ್ದೆಯಲ್ಲಿದ್ದ ಪತಿ(husband)ಯ ಮೇಲೆ ಕತ್ತಿಯಿಂದ ಭೀಕರವಾಗಿ ಹಲ್ಲೆ ನಡೆಸಿ, ಅವರ ಖಾಸಗಿ ಅಂಗವನ್ನೇ ಕತ್ತರಿಸಿರುವ ಅತ್ಯಂತ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿರುವ ರಾಜೇಶ್ ಕೌಶಿಕ್ ಎಂಬುವವರೇ ಈ ಭೀಕರ ದಾಳಿಗೆ ಒಳಗಾದ ದುರ್ದೈವಿ.

ಅಕ್ರಮ ಸಂಬಂಧವಿದೆಯೆಂಬ ಶಂಕೆ, ಪತಿ ಮಲಗಿರುವಾಗ ಖಾಸಗಿ ಅಂಗ ಕತ್ತರಿಸಿದ ಪತ್ನಿ
ಆರೋಪಿ ಮಹಿಳೆ
Image Credit source: India Today

Updated on: May 26, 2026 | 10:38 AM

ಬಿಲಾಸ್‌ಪುರ, ಮೇ 26: ವಿವಾಹೇತರ ಸಂಬಂಧದ ಶಂಕೆಯಲ್ಲಿ ಪತ್ನಿಯೊಬ್ಬಳು ಗಾಢ ನಿದ್ದೆಯಲ್ಲಿದ್ದ ಪತಿ(husband)ಯ ಮೇಲೆ ಕತ್ತಿಯಿಂದ ಭೀಕರವಾಗಿ ಹಲ್ಲೆ ನಡೆಸಿ, ಅವರ ಖಾಸಗಿ ಅಂಗವನ್ನೇ ಕತ್ತರಿಸಿರುವ ಅತ್ಯಂತ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿರುವ ರಾಜೇಶ್ ಕೌಶಿಕ್ ಎಂಬುವವರೇ ಈ ಭೀಕರ ದಾಳಿಗೆ ಒಳಗಾದ ದುರ್ದೈವಿ. ಸದ್ಯ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಸ್ಥಳೀಯ ಸರ್ಕಾರಿ ಸಿಮ್ಸ್ (CIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾಜೇಶ್ ಕೌಶಿಕ್ ಮತ್ತು ಆತನ ಪತ್ನಿ ದ್ರೌಪದಿ ಬಾಯಿ ನಡುವೆ ದೀರ್ಘಕಾಲದಿಂದ ಕೌಟುಂಬಿಕ ಜಗಳಗಳು ನಡೆಯುತ್ತಿದ್ದವು. ರಾಜೇಶ್‌ಗೆ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿದೆ ಎಂದು ದ್ರೌಪದಿ ಅನುಮಾನಿಸುತ್ತಿದ್ದಳು. ಘಟನೆ ನಡೆದ ರಾತ್ರಿ ಕೂಡ ಇಬ್ಬರೂ ಒಟ್ಟಿಗೆ ಊಟ ಮಾಡಿ ಮಲಗಿದ್ದರು. ಆದರೆ, ತಡರಾತ್ರಿ ಪತಿ ರಾಜೇಶ್ ಗಾಢ ನಿದ್ದೆಯಲ್ಲಿದ್ದಾಗ, ದ್ರೌಪತಿ ಕತ್ತಿಯಿಂದ ಆತನ ಖಾಸಗಿ ಭಾಗಗಳನ್ನು ಕತ್ತರಿಸಿ ಕ್ರೂರತೆ ಮೆರೆದಿದ್ದಾಳೆ.

ಮತ್ತಷ್ಟು ಓದಿ: ಸಣ್ಣದೊಂದು ವಿವಾದ, ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪತಿ, ಆಕೆ ಸ್ಥಳದಲ್ಲೇ ಸಾವು

ದಾಳಿಯ ಭೀಕರತೆಗೆ ತತ್ತರಿಸಿದ ರಾಜೇಶ್ ತೀವ್ರ ರಕ್ತಸ್ರಾವದ ನಡುವೆಯೂ ಕಿರುಚುತ್ತಾ ಕೋಣೆಯಿಂದ ಹೊರಗೆ ಓಡಿಬಂದಿದ್ದಾರೆ. ತಂದೆಯ ಕಿರುಚಾಟ ಕೇಳಿ ಎಚ್ಚರಗೊಂಡ ಅಪ್ರಾಪ್ತ ಮಗ ತಕ್ಷಣವೇ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಕುಟುಂಬಸ್ಥರು ರಾಜೇಶ್ ಮತ್ತು ಆತನ ಕತ್ತರಿಸಿದ ದೇಹದ ಭಾಗವನ್ನು ಹಿಡಿದುಕೊಂಡು ತಕ್ಷಣವೇ ಆಸ್ಪತ್ರೆಗೆ ಧಾವಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಮಹಿಳೆ ದ್ರೌಪದಿ ಬಾಯಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ವಿಚಾರಣೆಯ ವೇಳೆ ಅನೈತಿಕ ಸಂಬಂಧದ ಅನುಮಾನ ಮತ್ತು ನಿರಂತರ ಕೌಟುಂಬಿಕ ಕಲಹವೇ ಈ ಘೋರ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ಪೊಲೀಸರು ಮಹಿಳೆಯ ವಿರುದ್ಧ ಕಠಿಣ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us