AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಂತ ಬಿಸ್ವ ಶರ್ಮಾಗೆ ಬೀಫ್ ಉಡುಗೊರೆ ನೀಡುವುದಾಗಿ ವಾಟ್ಸ್ಆಪ್ ಸ್ಟೇಟಸ್ ಅಪ್​​ಡೇಟ್ ಮಾಡಿದ ಮಹಿಳೆ ಬಂಧನ

Himanta Biswa Sarma:ಮಹಿಳೆ ಬುಧವಾರ ತನ್ನ ಹಸುವಿನ ಕಳೇಬರ ಫೋಟೋವನ್ನು ತನ್ನ ವಾಟ್ಸ್ಆಪ್ ಸ್ಟೇಟಸ್​​ನಲ್ಲಿ ಅಪ್‌ಲೋಡ್ ಮಾಡಿದ್ದಳು ಮತ್ತು ಎರಡನೇ ಚಿತ್ರದಲ್ಲಿ ಮುಖ್ಯಮಂತ್ರಿಗೆ ಪ್ರಾಣಿಗಳ ಮಾಂಸವನ್ನು ನೀಡುವುದಾಗಿ ಹೇಳಿದ್ದಳು.

ಹಿಮಂತ ಬಿಸ್ವ ಶರ್ಮಾಗೆ ಬೀಫ್ ಉಡುಗೊರೆ ನೀಡುವುದಾಗಿ ವಾಟ್ಸ್ಆಪ್ ಸ್ಟೇಟಸ್ ಅಪ್​​ಡೇಟ್ ಮಾಡಿದ ಮಹಿಳೆ ಬಂಧನ
ಹಿಮಂತ ಬಿಸ್ವ ಶರ್ಮಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 22, 2021 | 7:45 PM

ಗುವಾಹಟಿ: ಅಸ್ಸಾಂನ ನಲ್ಬಾರಿ ಜಿಲ್ಲೆಯ ಹಳ್ಳಿಯ ಮಹಿಳೆಯೊಬ್ಬರನ್ನು “ಆಕ್ಷೇಪಾರ್ಹ ಪೋಸ್ಟ್” ಅಪ್​​ಡೇಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರಿಗೆ ಗೋಮಾಂಸವನ್ನು “ಉಡುಗೊರೆಯಾಗಿ” ನೀಡುತ್ತೇವೆ ಎಂದು ಮಹಿಳೆ ಪೋಸ್ಟ್ ಮಾಡಿದ್ದರು.

“ನಿನ್ನೆ ಮಹಿಳೆಯೊಬ್ಬರು ತನ್ನ ವಾಟ್ಸ್ಆಪ್ ಸ್ಟೇಟಸ್ ನಲ್ಲಿ ‘ಆಕ್ಷೇಪಾರ್ಹ ಪೋಸ್ಟ್’ ಅನ್ನು ಅಪ್‌ಲೋಡ್ ಮಾಡಿದ್ದಾಳೆ. ನಾವು ಪ್ರಕರಣ ದಾಖಲಿಸಿ ಬಂಧಿಸಿದ್ದೇವೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು, ಏಕೆಂದರೆ ಇದು ಜಾಮೀನು ನೀಡಬಹುದಾದ ಅಪರಾಧವಾಗಿದೆ” ಎಂದು ಪೊಲೀಸ್ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ದನಗಳ ಅಕ್ರಮ ಸಾಗಣೆ ಮತ್ತು ಗೋಮಾಂಸ ಮಾರಾಟವನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು 2021 ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯನ್ನು ಮಂಡಿಸಿದ ನಂತರ ಮೊದಲ ಬಾರಿ ಈ ರೀತಿ ಬಂಧನ ನಡೆದಿದೆ. ಹಿಂದೂ, ಜೈನ, ಸಿಖ್ ಮತ್ತು ಇತರ ಗೋಮಾಂಸ ಸೇವಿಸದ ಸಮುದಾಯಗಳು ಹೆಚ್ಚಾಗಿ ವಾಸಿಸುವ ಸ್ಥಳಗಳಲ್ಲಿ ಅಥವಾ ಯಾವುದೇ ದೇವಾಲಯದ 5 ಕಿ.ಮೀ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ ಮತ್ತು ಖರೀದಿಯನ್ನು ನಿಷೇಧಿಸಲು ಮಸೂದೆಯು ಪ್ರಸ್ತಾಪಿಸಿದೆ.

ಮಹಿಳೆ ಬುಧವಾರ ತನ್ನ ಹಸುವಿನ ಕಳೇಬರ ಫೋಟೋವನ್ನು ತನ್ನ ವಾಟ್ಸ್ಆಪ್ ಸ್ಟೇಟಸ್​​ನಲ್ಲಿ ಅಪ್‌ಲೋಡ್ ಮಾಡಿದ್ದಳು ಮತ್ತು ಎರಡನೇ ಚಿತ್ರದಲ್ಲಿ ಮುಖ್ಯಮಂತ್ರಿಗೆ ಪ್ರಾಣಿಗಳ ಮಾಂಸವನ್ನು ನೀಡುವುದಾಗಿ ಹೇಳಿದ್ದಳು. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರಿಗೆ ಗೋಮಾಂಸದ ತುಂಡನ್ನು ಉಡುಗೊರೆಯಾಗಿ ನೀಡುವಂತೆ ಹುಡುಗಿ ತನ್ನ ವಾಟ್ಸ್ಆಪ್ ಸ್ಟೇಟಸ್​​ನಲ್ಲಿ ಉಲ್ಲೇಖಿಸಿದ್ದಾಳೆ. ಬುಧವಾರ, ಮುಸ್ಲಿಂ ಸಮುದಾಯವು ಈದ್ ಉಲ್ ಅಧಾವನ್ನು ಪ್ರಪಂಚದಾದ್ಯಂತ ಆಚರಿಸಿತು. ಸಚಿವ ಹಿಮಂತ ಬಿಸ್ವಾ ಶರ್ಮಾ ಬಗ್ಗೆ ಈ ರೀತಿಯ ‘ಆಕ್ಷೇಪಾರ್ಹ ಪೋಸ್ಟ್’ ಎರಡು ಸಮುದಾಯಗಳಲ್ಲಿ ಸೌಹಾರ್ದತೆ ಕೆದಡಲು ಕಾರಣವಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಮಾಜಿ ಸ್ಥಳೀಯ ಬಿಜೆಪಿ ಮುಖಂಡರ ಮಗಳು. ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ನಲ್ಬಾರಿ ಘಟಕವು ಎರಡು ಸಮುದಾಯಗಳ ನಡುವೆ ಕೋಮು ಅಸಮಾನತೆಯನ್ನು ಸೃಷ್ಟಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿತು.

“ಇಂತಹ ವಿವಾದಾತ್ಮಕ ಪೋಸ್ಟ್ ಹಿಂದೂ ಸಂಸ್ಕೃತಿಗೆ ಮಾಡಿದ ಅವಮಾನ. ನಮ್ಮ ಸಂಸ್ಕೃತಿಯನ್ನು ಅವಮಾನಿಸುವ ಇಂತಹ ಪ್ರಯತ್ನಗಳನ್ನು ನಾವು ಸಹಿಸಲಾರೆವು. ಹಿಂದೂಗಳು ಹಸುವನ್ನು ಪವಿತ್ರವೆಂದು ಪರಿಗಣಿಸುತ್ತಾರೆ, ಆಗ ಆಕೆ ತನ್ನ ವಾಟ್ಸ್​​ಆಪ್ ಸ್ಟೇಟಸ್​​ನಲ್ಲಿ ‘ಆಕ್ಷೇಪಾರ್ಹ ಪೋಸ್ಟ್’ ಅನ್ನು ಹೇಗೆ ಪೋಸ್ಟ್ ಮಾಡುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ ಸದಸ್ಯರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಸಂಸ್ಥೆಗಳು ಅವುಗಳ ಕೆಲಸ ಮಾಡುತ್ತಿವೆ, ನಮ್ಮ ಹಸ್ತಕ್ಷೇಪ ಇಲ್ಲ: ಮಾಧ್ಯಮಗಳ ವಿರುದ್ಧ ಐಟಿ ದಾಳಿ ಬಗ್ಗೆ ಕೇಂದ್ರ ಪ್ರತಿಕ್ರಿಯೆ

(Woman arrested for Allegedly uploading an objectionable post To Gift Beef To Assam CM Himanta Biswa Sarma)

Published On - 7:45 pm, Thu, 22 July 21

ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ