AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಟಲಿಗಳ ಬಳಸಿ ಟೈಂ ಬಾಂಬ್​ ತಯಾರಿಸಲು ವ್ಯಕ್ತಿಗೆ ಹಣ ನೀಡಿದ್ದ ಮಹಿಳೆಯ ಬಂಧನ

ಬಾಟಲಿಗಳನ್ನು ಬಳಸಿ ಟೈಂ ಬಾಂಬ್‌ಗಳನ್ನು ತಯಾರಿಸಲು ವ್ಯಕ್ತಿಗೆ ಹಣ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶದಲ್ಲಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಈ ಕಾರ್ಯಕ್ಕಾಗಿ ಆಕೆ ಹಣ ನೀಡಿದ ವ್ಯಕ್ತಿಯನ್ನೂ ವಿಶೇಷ ಕಾರ್ಯಪಡೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಾಟಲಿಗಳ ಬಳಸಿ ಟೈಂ ಬಾಂಬ್​ ತಯಾರಿಸಲು ವ್ಯಕ್ತಿಗೆ ಹಣ ನೀಡಿದ್ದ ಮಹಿಳೆಯ ಬಂಧನ
ಮಹಿಳೆ
ನಯನಾ ರಾಜೀವ್
|

Updated on: Feb 19, 2024 | 9:10 AM

Share

ಬಾಟಲಿಗಳನ್ನು ಬಳಸಿ ಟೈಂ ಬಾಂಬ್ ತಯಾರಿಸಲು ವ್ಯಕ್ತಿಗೆ ಹಣ ನೀಡಿದ್ದ ಮಹಿಳೆಯನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಬಂಧಿಸಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಎಸ್‌ಟಿಎಫ್ ಅಧಿಕಾರಿಗಳ ಪ್ರಕಾರ, ಜಾವೇದ್ ಎಂಬ ವ್ಯಕ್ತಿ ಬಂಧನದ ಸಮಯದಲ್ಲಿ ಮಹಿಳೆಗೆ ಬಾಂಬ್‌ಗಳನ್ನು ತಲುಪಿಸಲು ಹೋಗುತ್ತಿದ್ದ ಎನ್ನಲಾಗಿದೆ. ಈ ಕಾರ್ಯಕ್ಕಾಗಿ ಮಹಿಳೆಯಿಂದ 10,000 ರೂಪಾಯಿಗಳನ್ನು ಪಾವತಿಸಲಾಗಿದೆ ಎಂದು ಜಾವೇದ್ ಅಧಿಕಾರಿಗಳಿಗೆ ತಿಳಿಸಿದರು ಮತ್ತು ಅವರು ಬಾಂಬ್ಗಳನ್ನು ವಿತರಿಸಿದ ನಂತರ 40,000 ರೂಪಾಯಿಗಳನ್ನು ಪಾವತಿಸುವ ಭರವಸೆ ನೀಡಿದ್ದ.

ಈ ಸುಧಾರಿತ ಸ್ಫೋಟಕ ಸಾಧನಗಳನ್ನು (IEDs) ಗನ್‌ಪೌಡರ್, ಕಬ್ಬಿಣದ ಉಂಡೆಗಳು, ಹತ್ತಿ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್‌ನ ಮಾರಕ ಮಿಶ್ರಣದಿಂದ ತುಂಬಿದ ಗಾಜಿನ ಬಾಟಲಿಗಳಿಂದ ನಿರ್ಮಿಸಲಾಗಿದೆ. ಜಾವೇದ್ ವೈದ್ಯರು ಮತ್ತು ಸೈಕಲ್ ಅಂಗಡಿಗಳು ಸೇರಿದಂತೆ ಸ್ಥಳೀಯ ಮೂಲಗಳಿಂದ ಗ್ಲೂಕೋಸ್ ಬಾಟಲಿಗಳು ಮತ್ತು ಕಬ್ಬಿಣದ ಗುಳಿಗೆಗಳಂತಹ ವಸ್ತುಗಳನ್ನು ಸಂಗ್ರಹಿಸಿದರು ಮತ್ತು ಈ ಬಾಂಬ್‌ಗಳ ತಯಾರಿಕೆಯಲ್ಲಿ ವಾಚ್‌ಗಳನ್ನು ಸಹ ಬಳಸಿದ್ದರು.

ಪಟಾಕಿ ತಯಾರಕರಾದ ಅವರ ಚಿಕ್ಕಪ್ಪನಿಂದ ಕೆಲವು ಮಾರ್ಗದರ್ಶನ ಮತ್ತು ಯೂಟ್ಯೂಬ್ ಮತ್ತು ಇಂಟರ್ನೆಟ್ ಮೂಲಕ ಹೆಚ್ಚಿನ ಸಂಶೋಧನೆ ನಡೆಸಿ, ಮನೆಯಲ್ಲಿಯೇ ಬಾಂಬ್ ತಯಾರಿಸುವುದನ್ನು ಆತ ಕಲಿತಿದ್ದ. 2013ರಲ್ಲಿ ಮುಜಾಫರ್‌ನಗರದಲ್ಲಿ ನಡೆದ ಕೋಮುಗಲಭೆಯಲ್ಲಿ ತನ್ನ ಮನೆಗೆ ಹಾನಿಯಾಗಿದೆ ಎಂದಿದ್ದಾಳೆ. ಈ ಹಿಂದೆ ತನ್ನ ನಿವಾಸದಲ್ಲಿ ಇದೇ ರೀತಿಯ ಬಾಂಬ್‌ಗಳನ್ನು ಇಟ್ಟುಕೊಂಡಿದ್ದಾಗಿ ಅವಳು ಒಪ್ಪಿಕೊಂಡಿದ್ದಾಳೆ.

ಮತ್ತಷ್ಟು ಓದಿ: ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಮಾಹಿತಿ ನೀಡಲು ನಿರಾಕರಿಸಿದ ಜಿ-ಮೇಲ್ ಕಂಪನಿ

ಮತ್ತೊಂದು ಘಟನೆ ಮಹಾರಾಷ್ಟ್ರದ ಅಂಬೋಲಿ ಅರಣ್ಯದಲ್ಲಿ ಬಾಂಬ್​ ಸ್ಫೋಟ ಟ್ರಯಲ್ ನಡೆಸಲು ಸಿದ್ಧತೆ ಮಹಾರಾಷ್ಟ್ರದ ಅಂಬೋಲಿ ಅರಣ್ಯದಲ್ಲಿ ಬಾಂಬ್​ ಸ್ಫೋಟ ಟ್ರಯಲ್ ನಡೆಸಲು ಶಂಕಿತ ಉಗ್ರರು ಬಳಸಿದ್ದ ಬಾಂಬ್ ತಯಾರಿಸುವ ಎಲೆಕ್ಟ್ರಿಕ್ ವಸ್ತುಗಳನ್ನು ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಎಟಿಎಸ್ ಬಂಧಿಸಿರುವ ಶಂಕಿತ ಉಗ್ರರಿಗೆ ಆರ್ಥಿಕ ಸಹಾಯ ಮಾಡಿದ್ದ ರತ್ನಗಿರಿ ಜಿಲ್ಲೆಯ ಮೆಕ್ಯಾನಿಕಲ್ ಎಂಜಿನಿಯರ್ ಸಿಮಾಬ್ ನಸರುದ್ದೀನ್ ಖಾಜಿ ಸ್ವತಃ ಬಾಂಬ್ ತಯಾರಿಸುವ ಎಲೆಕ್ಟ್ರಾನಿ್ ಉಪಕರಣಗಳನ್ನು ಖರೀದಿಸಿದ್ದ, ಪ್ರಯೋಗ ಶಾಲೆಯಲ್ಲಿದ್ದ ಎಲ್ಲಾ ವಸ್ತುಗಳನ್ನು ಸಿಮಾಬ್ ಖಾಜಿಯೇ ಖರೀದಿಸಿ ಅಂಬೋಲಿಯಲ್ಲಿ ಬಾಂಬ್ ಸ್ಫೋಟ ಟ್ರಯಲ್ ನಡೆಸಿದ್ದ ಆಂಕಿತ ಉಗ್ರರು ಮಾಹಿತಿ ತಿಳಿಯದಿರಲಿ ಎಂದು ಹೋಟೆಲ್, ಲಾಡ್ಜ್​ಗಳಲ್ಲಿ ವಾಸ್ತವ್ಯ ಮಾಡುತ್ತಿರಲಿಲ್ಲ, ಟೆಂಟ್​ಗಳಲ್ಲಿಯೇ ಕಾಲ ಕಳೆಯುತ್ತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!