AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಬಾಯಿಗೆ ಮಲ ಹಾಕಿ ವ್ಯಕ್ತಿಯಿಂದ ಹಲ್ಲೆ

 ಯುವತಿಯ ಬಾಯಿಗೆ ವ್ಯಕ್ತಿಯೊಬ್ಬ ಮಲ ಹಾಕಿ ಹಲ್ಲೆ ನಡೆಸಿರುವ ಹೃದಯ ವಿದ್ರಾವಕ ಘಟನೆ ಒಡಿಶಾದ ಬೋಲಂಗಿರ್ ಜಿಲ್ಲೆಯಲ್ಲಿ ನಡೆದಿದೆ. ಯುವತಿ ತನ್ನ ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿರುವಾಗ ಅದೇ ಊರಿನ ವ್ಯಕ್ತಿಯೊಬ್ಬ ಟ್ರ್ಯಾಕ್ಟರ್ ಚಲಾಯಿಸಿ ಆಕೆಯ ಬೆಳೆ ನಾಶಪಡಿಸಿದ್ದಾನೆ.

ಯುವತಿ ಬಾಯಿಗೆ ಮಲ ಹಾಕಿ ವ್ಯಕ್ತಿಯಿಂದ ಹಲ್ಲೆ
ಪೊಲೀಸ್​ ಠಾಣೆ Image Credit source: Times Of India
ನಯನಾ ರಾಜೀವ್
|

Updated on: Nov 21, 2024 | 10:32 AM

Share

ಯುವತಿಯ ಬಾಯಿಗೆ ವ್ಯಕ್ತಿಯೊಬ್ಬ ಮಲ ಹಾಕಿ ಹಲ್ಲೆ ನಡೆಸಿರುವ ಹೃದಯ ವಿದ್ರಾವಕ ಘಟನೆ ಒಡಿಶಾದ ಬೋಲಂಗಿರ್ ಜಿಲ್ಲೆಯಲ್ಲಿ ನಡೆದಿದೆ. ಯುವತಿ ತನ್ನ ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿರುವಾಗ ಅದೇ ಊರಿನ ವ್ಯಕ್ತಿಯೊಬ್ಬ ಟ್ರ್ಯಾಕ್ಟರ್ ಚಲಾಯಿಸಿ ಆಕೆಯ ಬೆಳೆ ನಾಶಪಡಿಸಿದ್ದಾನೆ.

ದಾಖಲಾಗಿರುವ ಎಫ್​ಐಆರ್​ ಪ್ರಕಾರ ಆಕೆಯ ಬಾಯಿಗೆ ಬಲವಂತವಾಗಿ ಮಲವನ್ನು ತುರುಕಿದ್ದಾನೆ. ಮಧ್ಯಪ್ರವೇಶಿಸಿ ಆಕೆಯನ್ನು ರಕ್ಷಿಸಲು ಯತ್ನಿಸಿದ ಯುವತಿಯ ಚಿಕ್ಕಮ್ಮನ ಮೇಲೂ ಅದೇ ವ್ಯಕ್ತಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ವರದಿ ತಿಳಿಸಿದೆ.

ಪೊಲೀಸರು ಕ್ಷಿಪ್ರ ಕ್ರಮ ಕೈಗೊಳ್ಳದಿರುವುದು ಸ್ಥಳೀಯ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಬಿಜು ಜನತಾ ದಳ (ಬಿಜೆಡಿ) ಸಂಸದ ನಿರಂಜನ್ ಬಿಸಿ ಭುವನೇಶ್ವರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು. ಪೊಲೀಸರ ನಿಷ್ಕ್ರಿಯತೆಯನ್ನು ಖಂಡಿಸಿದ ಬಿಸಿ, ಸ್ಥಳೀಯ ಸಮುದಾಯದಲ್ಲಿ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ.

ಮತ್ತಷ್ಟು ಓದಿ: ಕೇರಳ: ನಾಪತ್ತೆಯಾಗಿ ಕೆಲವು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ದೇಹ ಪತ್ತೆ

ಆರೋಪಿಗಳ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ, ಇದು ಆದಿವಾಸಿಗಳನ್ನು ಕೆರಳಿಸಿದೆ. ಬಂಗಮುಂಡದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ರಾಜ್ಯ ಸರಕಾರವೇ ಹೊಣೆಯಾಗಬೇಕಾಗುತ್ತದೆ.

ಘಟನೆಯ ನಂತರ ಆರೋಪಿ ಪರಾರಿಯಾಗಿದ್ದಾನೆ ಎಂದು ಬೋಲಂಗಿರ್‌ನ ಪೊಲೀಸ್ ವರಿಷ್ಠಾಧಿಕಾರಿ ಖಿಲಾರಿ ರಿಷಿಕೇಶ್ ದ್ನ್ಯಾಂಡಿಯೊ ಖಚಿತಪಡಿಸಿದ್ದಾರೆ.

ಆತನನ್ನು ಬಂಧಿಸಲು ನಾವು ಎರಡು ವಿಶೇಷ ತಂಡಗಳನ್ನು ರಚಿಸಿದ್ದೇವೆ. ಆರೋಪಿಗಳ ಹುಡುಕಾಟಕ್ಕಾಗಿ ಪೊಲೀಸ್ ತಂಡಗಳನ್ನು ನೆರೆಯ ರಾಜ್ಯಗಳಿಗೆ ಕಳುಹಿಸಲಾಗಿದೆ ಎಂದು ಜ್ಞಾನಾಂಡಿಯೊ ಹೇಳಿದರು. ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್