AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳದಲ್ಲಿ ನಡು ರಸ್ತೆಯಲ್ಲೇ ಮಹಿಳೆಗೆ ಕೋಲಿನಿಂದ ಥಳಿಸಿದ ಜನ; ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಹಗಲು ಹೊತ್ತಿನಲ್ಲಿ ಮಹಿಳೆಯನ್ನು ಕೋಲುಗಳಿಂದ ಹೊಡೆದಿದ್ದಾರೆ. ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ದೂರಿದ್ದಾರೆ.

ಬಂಗಾಳದಲ್ಲಿ ನಡು ರಸ್ತೆಯಲ್ಲೇ ಮಹಿಳೆಗೆ ಕೋಲಿನಿಂದ ಥಳಿಸಿದ ಜನ; ಮಮತಾ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ಬಂಗಾಳದಲ್ಲಿ ನಡು ರಸ್ತೆಯಲ್ಲೇ ಮಹಿಳೆಗೆ ಕೋಲಿನಿಂದ ಹೊಡೆದ ಜನ
ಸುಷ್ಮಾ ಚಕ್ರೆ
|

Updated on: Sep 18, 2024 | 10:19 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಪುರುಷರ ಗುಂಪೊಂದು ಮಹಿಳೆಯನ್ನು ಅಮಾನುಷವಾಗಿ ಕೋಲಿನಿಂದ ಹೊಡೆಯುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಮೋತಾಬರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರ್‌ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಆಕ್ರೋಶದ ನಡುವೆ, ಮಾಲ್ಡಾದಲ್ಲಿ ಪುರುಷರ ಗುಂಪೊಂದು ಮಹಿಳೆಯ ಮೇಲೆ ಅಮಾನುಷವಾಗಿ ಕೋಲುಗಳಿಂದ ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.

ಈ ವೈರಲ್ ವಿಡಿಯೋದಲ್ಲಿ ಪುರುಷರು ಮಹಿಳೆಯನ್ನು ರಸ್ತೆಗೆ ಎಳೆದು ದೊಣ್ಣೆಯಿಂದ ಥಳಿಸಿದ್ದಾರೆ. ಈ ಘಟನೆಯನ್ನು ವೀಕ್ಷಿಸುತ್ತಿದ್ದ ಗ್ರಾಮಸ್ಥರು ಸುತ್ತಲೂ ನೆರೆದಿದ್ದರೂ ಯಾರೂ ಸಹಾಯಕ್ಕೆ ಮುಂದಾಗಲಿಲ್ಲ. ಈ ಮಹಿಳೆಯ 16 ವರ್ಷದ ಮಗಳು ಕೂಡ ತನ್ನ ತಾಯಿಯನ್ನು ಉಳಿಸಲು ಪ್ರಯತ್ನ ಮಾಡುತ್ತಿದ್ದಾರೆ.

ಗ್ರಾಮಸ್ಥರ ಪ್ರಕಾರ, ಆ ಮಹಿಳೆಯ ಕುಟುಂಬ ಮತ್ತು ಅವರ ನೆರೆಹೊರೆಯವರ ನಡುವಿನ ದೀರ್ಘಕಾಲದ ಜಮೀನು ವಿವಾದದಿಂದ ಈ ಹಲ್ಲೆ ನಡೆದಿದೆ. ಸಂತ್ರಸ್ತೆ ಮೋತಾಬರಿ ಪೊಲೀಸ್ ಠಾಣೆಯಲ್ಲಿ 6 ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಸೆಪ್ಟೆಂಬರ್ 21ರಂದು ದೆಹಲಿ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಪೊಲೀಸರು, “ಈ ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಲಿಖಿತ ದೂರುಗಳನ್ನು ದಾಖಲಿಸಿದ್ದಾರೆ. ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಈ ಹಿಂದೆ ಗ್ರಾಮದಲ್ಲಿ ಪಂಚಾಯಿತಿ ಸಭೆ ನಡೆಸಿ ವಿವಾದ ಬಗೆಹರಿಸುವ ಪ್ರಯತ್ನ ವಿಫಲವಾಗಿದ್ದು, ಪದೇ ಪದೇ ವಾಗ್ವಾದಕ್ಕೆ ಕಾರಣವಾಗಿತ್ತು. ಸೋಮವಾರ ಮಹಿಳೆಯ ಪತಿ ಪೊಲೀಸರಿಗೆ ಔಪಚಾರಿಕ ದೂರು ನೀಡಿದ್ದಾರೆ. ಈ ವಿಷಯ ತಿಳಿದ ನೆರೆಹೊರೆಯವರು ಮರುದಿನ ಪತಿಯನ್ನು ಹೆದರಿಸಿ, ಹಗಲು ಹೊತ್ತಿನಲ್ಲಿ ಪತಿಯನ್ನು ಅಮಾನುಷವಾಗಿ ಥಳಿಸಿದ್ದಾರೆ.

ಇದನ್ನೂ ಓದಿ: ಪತ್ನಿಯ ಕೊಂದು ಆಕೆಯ ರುಂಡವನ್ನು ಕೈಯಲ್ಲಿ ಹಿಡಿದು ಊರೂರು ಸುತ್ತುತ್ತಿದ್ದ ವ್ಯಕ್ತಿಯ ಬಂಧನ

ಈ ವೇಳೆ ಮಹಿಳೆ ತನ್ನ ಪತಿಯನ್ನು ರಕ್ಷಿಸಲು ಮಧ್ಯ ಪ್ರವೇಶಿಸಿದಾಗ, ಜನರ ಗುಂಪು ಆಕೆಯ ಮೇಲೆ ತಿರುಗಿ, ಆಕೆಯನ್ನು ನೆಲಕ್ಕೆ ಎಸೆದು ಮತ್ತು ದೊಣ್ಣೆ ಮತ್ತು ಬಿದಿರುಗಳಿಂದ ಥಳಿಸಿದ್ದಾರೆ. ದಾಳಿಯ ವೇಳೆ ಆಕೆಯ ಬಟ್ಟೆ ಹರಿದಿತ್ತು. ಆ ಮಹಿಳೆಯ ಮಗಳು ಸಹಾಯಕ್ಕೆ ಧಾವಿಸಿದಾಗ, ದಾಳಿಕೋರರು ಆಕೆಯನ್ನೂ ಥಳಿಸಿದ್ದಾರೆ. ಕೊನೆಗೆ ಮಹಿಳೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.

ಈ ಘಟನೆ ರಾಜಕೀಯ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ. ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಈ ಹಲ್ಲೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. “ಈ ದೃಶ್ಯವು ಅಫ್ಘಾನಿಸ್ತಾನ, ಪಾಕಿಸ್ತಾನ ಅಥವಾ ಬಾಂಗ್ಲಾದೇಶದಿಂದ ಬಂದಿದೆ ಎಂದು ಭಾವಿಸಬೇಡಿ. ಈ ಘಟನೆಯು ಮಮತಾ ಬ್ಯಾನರ್ಜಿ ಸರ್ಕಾರ ಅಧಿಕಾರದಲ್ಲಿರುವ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಮೋತಬರಿಯಲ್ಲಿ ನಡೆದಿದೆ” ಎಂದು ಬರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್