AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಾಗಿ ನಂಬಿಸಿ 50ಕ್ಕೂ ಹೆಚ್ಚು ಪುರುಷರಿಗೆ ಮೋಸ ಮಾಡಿದ್ದ ಮಹಿಳೆ ಅಂತೂ ಸಿಕ್ಕಿಬಿದ್ಲು

ಮದುವೆಯಾಗುವುದಾಗಿ ಪುರುಷರನ್ನು ನಂಬಿಸಿ ಮೋಸ ಮಾಡಿ ಹಣ, ಬಂಗಾರ ದೋಚಿ ಪರಾರಿಯಾಗುತ್ತಿದ್ದ ಮಹಿಳೆ ಅಂತೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಮದುವೆಯಾಗುವುದಾಗಿ ನಂಬಿಸಿ 50ಕ್ಕೂ ಹೆಚ್ಚು ಪುರುಷರಿಗೆ ಮೋಸ ಮಾಡಿದ್ದ ಮಹಿಳೆ ಅಂತೂ ಸಿಕ್ಕಿಬಿದ್ಲು
ಮಹಿಳೆ-ಸಾಂದರ್ಭಿಕ ಚಿತ್ರImage Credit source: Shutterstock
ನಯನಾ ರಾಜೀವ್
|

Updated on: Jul 11, 2024 | 11:38 AM

Share

ಮದುವೆಯಾಗುವುದಾಗಿ ನಂಬಿಸಿ ಐವತ್ತಕ್ಕೂ ಹೆಚ್ಚು ಪುರುಷರಿಗೆ ಮಹಿಳೆಯೊಬ್ಬರು ಮೋಸ ಮಾಡಿರುವ ಘಟನೆ ತಮಿಳುನಾಡಿನ ತಿರುಪ್ಪೂರ್​ನಲ್ಲಿ ನಡೆದಿದೆ. ಪುರುಷರನ್ನು ಮದುವೆಯಾಗಿ ಅಥವಾ ವಂಚಿಸಿ ಮನೆಯಿಂದ ಲಕ್ಷಗಟ್ಟಲೆ ನಗದು, ಚಿನ್ನಾಭರಣ ದೋಚಿ ಮಹಿಳೆ ಪರಾರಿಯಾಗುತ್ತಿದ್ದರು.

ಈ ಸಂಬಂಧ ತುರುಪುರದ ತಾರಾಪುರಂನಲ್ಲಿ ನೆಲೆಸಿರುವ ಮಹೇಶ್ ಅರವಿಂದ್ ಎಂಬುವವರು ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಬಳಿಕ ಪೊಲೀಸರು ಆರೋಪಿ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಮಹಿಳೆ ವಯಸ್ಸು 30 ವರ್ಷ, ಮೊಬೈಲ್ ಆಪ್ ಮೂಲಕ ಈರೋಡ್ ಜಿಲ್ಲೆಯ ಕೊಡುಮುಡಿ ನಿವಾಸಿ ಸಂಧ್ಯಾ ಅವರನ್ನು ಭೇಟಿಯಾಗಿದ್ದರು ಎನ್ನಲಾಗಿದೆ. ಆರಂಭದಲ್ಲಿ ಇಬ್ಬರೂ ಪರಸ್ಪರ ಮಾತನಾಡುತ್ತಿದ್ದರು, ಆದರೆ ಈ ಸಂಭಾಷಣೆ ಪ್ರೀತಿಗೆ ತಿರುಗಿ ಇಬ್ಬರೂ ಪಳನಿ ಬಳಿಯ ದೇವಸ್ಥಾನಕ್ಕೆ ಹೋಗಿ ಮದುವೆಯಾಗಿದ್ದಾರೆ.

ಮಹೇಶ್ ಅರವಿಂದ್ ಹೇಳುವಂತೆ ಸಂಧ್ಯಾಳನ್ನು ಮನೆಗೆ ಕರೆತಂದರು ಆದರೆ ಆಕೆಯ ನಡೆ ಆತನಿಗೆ ಅನುಮಾನ ಮೂಡಿಸಿತ್ತು. ಇದಾದ ಬಳಿಕ ಆಕೆಯ ಆಧಾರ್ ಕಾರ್ಡ್ ನೋಡಿದಾಗ ಸಂಧ್ಯಾ ಹೆಸರಿನ ಬದಲು ಚೆನ್ನೈ ಮೂಲದ ಮತ್ತೊಬ್ಬ ಮಹಿಳೆಯ ಹೆಸರು ಬರೆಯಲಾಗಿತ್ತು. ವಯಸ್ಸು ಕೂಡ ಹೆಚ್ಚಿತ್ತು. ಈ ವಿಚಾರ ಪ್ರಶ್ನಿಸಿದಾಗ ಆಕೆ ಮಹೇಶ್​ ಕುಟುಂಬದವರಿಗೆ ಬೆದರಿಕೆ ಹಾಕಿದ್ದಳು.

ಮತ್ತಷ್ಟು ಓದಿ: ಮದ್ವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಶಿವಮೊಗ್ಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್

ಕೂಡಲೇ ಮಹೇಶ್ ಅರವಿಂದ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮನೆಗೆ ಬರುವಷ್ಟರೊಳಗೆ ಸಂಧ್ಯಾ ಅಲ್ಲಿಂದ ಓಡಿ ಹೋಗಿದ್ದಳು. ಆರೋಪಿ ಮಹಿಳೆ ಸಂಧ್ಯಾ 10 ವರ್ಷಗಳ ಹಿಂದೆ ಚೆನ್ನೈನಲ್ಲಿ ನೆಲೆಸಿರುವ ಯುವಕನೊಂದಿಗೆ ವಿವಾಹವಾಗಿದ್ದಳು ಎಂದು ತಿಳಿದುಬಂದಿದೆ. ಅವಳಿಗೆ ಒಂದು ಮಗುವಿದೆ.

ಆರೋಪಿ ಸಂಧ್ಯಾ ವಯಸ್ಸಾದ ಅವಿವಾಹಿತ ಪುರುಷರನ್ನು ಹುಡುಕಿ ಅವರನ್ನು ಮದುವೆಯಾಗಿ ಅಥವಾ ನಂಬಿಸಿ ವಂಚನೆ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ. ಈ ರೀತಿ 50 ಪುರುಷರಿಗೆ ಮೋಸ ಮಾಡಿದ್ದಾಳೆ, ಸಾಕಷ್ಟು ಪ್ರಯತ್ನದ ಬಳಿಕ ಈ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಅಗತ್ಯ ವಿಚಾರಣೆ ಬಳಿಕ ಇದೀಗ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ