Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಚಂದ್ರಾಪುರ ಜಿಲ್ಲೆಯಲ್ಲಿ ಹುಲಿ ದಾಳಿಗೆ 60 ವರ್ಷದ ಮಹಿಳೆ ಸಾವು

ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಬ್ರಹ್ಮಪುರಿ ಅರಣ್ಯದಲ್ಲಿ ಹುಲಿ ದಾಳಿಗೆ 60 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಬ್ರಹ್ಮಪುರಿ ಅರಣ್ಯ ವಿಭಾಗದ ದಕ್ಷಿಣ ಅರಣ್ಯ ವ್ಯಾಪ್ತಿಗೆ ಒಳಪಡುವ ಹಲ್ದಾ ಗ್ರಾಮದಲ್ಲಿ ಮಧ್ಯಾಹ್ನ ಈ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಮೃತರನ್ನು ಸಾವಿತ್ರಿಬಾಯಿ ಕಾಂಬಳೆ ಎಂದು ಗುರುತಿಸಲಾಗಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ: ಚಂದ್ರಾಪುರ ಜಿಲ್ಲೆಯಲ್ಲಿ ಹುಲಿ ದಾಳಿಗೆ 60 ವರ್ಷದ ಮಹಿಳೆ ಸಾವು
ಹುಲಿImage Credit source: BBC
Follow us
ನಯನಾ ರಾಜೀವ್
|

Updated on: Nov 02, 2023 | 9:52 AM

ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಬ್ರಹ್ಮಪುರಿ ಅರಣ್ಯದಲ್ಲಿ ಹುಲಿ ದಾಳಿ(Tiger Attack)ಗೆ 60 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಬ್ರಹ್ಮಪುರಿ ಅರಣ್ಯ ವಿಭಾಗದ ದಕ್ಷಿಣ ಅರಣ್ಯ ವ್ಯಾಪ್ತಿಗೆ ಒಳಪಡುವ ಹಲ್ದಾ ಗ್ರಾಮದಲ್ಲಿ ಮಧ್ಯಾಹ್ನ ಈ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಮೃತರನ್ನು ಸಾವಿತ್ರಿಬಾಯಿ ಕಾಂಬಳೆ ಎಂದು ಗುರುತಿಸಲಾಗಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆ ತನ್ನ ಜಮೀನಿಗೆ ಹೋಗಿದ್ದಾಗ ಪೊದೆಗಳಲ್ಲಿ ಅವಿತುಕೊಂಡಿದ್ದ ಹುಲಿ ಅವರ ಮೇಲೆ ದಾಳಿ ಮಾಡಿದೆ, ಸ್ಥಳದಲ್ಲೇ ಅವರನ್ನು ಕೊಂದು ಹಾಕಿತ್ತು, ಹುಲಿ ಮಹಿಳೆಯ ದೇಹವನ್ನು ಸುಮಾರು 100 ಮೀಟರ್ ಎಳೆದೊಯ್ದಿದೆ ಎಂದು ಅವರು ಹೇಳಿದರು.

ಸಮೀಪದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕೆಲವು ವ್ಯಕ್ತಿಗಳು ಕೂಗಲಾರಂಭಿಸಿದರು, ನಂತರ ಹುಲಿ ಮಹಿಳೆಯ ದೇಹವನ್ನು ಅಲ್ಲೇ ಬಿಟ್ಟು ಸ್ಥಳದಿಂದ ಓಡಿಹೋಗಿದೆ. ನಂತರ ಮೃತ ಮಹಿಳೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬ್ರಹ್ಮಪುರಿ ಗ್ರಾಮಾಂತರ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಮೈಸೂರು ಹುಲಿ ದಾಳಿ ಪ್ರಕರಣ: ಶೀಘ್ರದಲ್ಲೇ ಕೂಂಬಿಂಗ್ ಆಪರೇಷನ್ ಮಾಡಿಸುವುದಾಗಿ ಭರವಸೆ ಕೊಟ್ಟ ಶಾಸಕ ದರ್ಶನ್ ಧ್ರುವನಾರಾಯಣ್

2019 ಮತ್ತು 2021 ರ ನಡುವೆ ಹುಲಿ ದಾಳಿಯಿಂದ ದೇಶದಲ್ಲಿ ಒಟ್ಟು 108 ಜನರು ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಹುಲಿ ದಾಳಿಯಿಂದ ಮನುಷ್ಯರು ಸಾಯುವ ಪ್ರಮಾಣ ಕಡಿಮೆಯಾಗಿದೆ. 2021ರಲ್ಲಿ 14 ಮಂದಿ ಸಾವನ್ನಪ್ಪಿದ್ದರು, 2019ರಲ್ಲಿ 50 ಮಂದಿ ಹುಲಿ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದರು.

2019ರಿಂದ 2021ರ ನಡುವೆ ಮಹಾರಾಷ್ಟ್ರದಲ್ಲಿ ಹುಲಿ ದಾಳಿಯಿಂದ 56 ಮಂದಿ ಮೃತಪಟ್ಟಿದ್ದಾರೆ, 2019ರಲ್ಲಿ 26, 2020ರಲ್ಲಿ 25, 2021ರಲ್ಲಿ ಐವರು ಮೃತಪಟ್ಟಿದ್ದರು. ಉತ್ತರ ಪ್ರದೇಶದಲ್ಲಿ 2019ರಲ್ಲಿ 8, 2020ರಲ್ಲಿ ನಾಲ್ಕು ಹಾಗೂ 2021ರಲ್ಲಿ ಐದು , ಇತ್ತೀಚಿನ ವರ್ಷಗಳಲ್ಲಿ ಅಸ್ಸಾಂ, ಅರುಣಾಚಲ ಪ್ರದೇಶ ಹಾಗೂ ಆಂಧ್ರಪ್ರದೇಶದಲ್ಲಿ ಹುಲಿ ದಾಳಿಯಿಂದ ಯಾವುದೇ ಸಾವು ಸಂಭವಿಸಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ