AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಂಚಿಯಲ್ಲಿ ಪ್ರಧಾನಿ ಮೋದಿ ಬೆಂಗಾವಲು ವಾಹನದ ಮುಂದೆ ಹಠಾತ್ತನೆ ಜಿಗಿದ ಮಹಿಳೆ

ರಾಂಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಭಾರಿ ಲೋಪವಾಗಿದೆ. ಇದ್ದಕ್ಕಿದ್ದಂತೆ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ವಾಹನದ ಮುಂದೆ ಹಾರಿದ್ದಾರೆ. ಚಾಲಕ ಏಕಾಏಕಿ ಬ್ರೇಕ್​ ಹಾಕಿ ಅಪಘಾತವನ್ನು ತಪ್ಪಿಸಿದ್ದಾರೆ, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ರಾಂಚಿಯಲ್ಲಿ ಪ್ರಧಾನಿ ಮೋದಿ ಬೆಂಗಾವಲು ವಾಹನದ ಮುಂದೆ ಹಠಾತ್ತನೆ ಜಿಗಿದ ಮಹಿಳೆ
ಮೋದಿ ಬೆಂಗಾವಲು ವಾಹನImage Credit source: India Today
ನಯನಾ ರಾಜೀವ್
|

Updated on: Nov 16, 2023 | 10:17 AM

Share

ರಾಂಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಯವರ ಭದ್ರತೆಯಲ್ಲಿ ಭಾರಿ ಲೋಪವಾಗಿದೆ. ಇದ್ದಕ್ಕಿದ್ದಂತೆ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ವಾಹನದ ಮುಂದೆ ಹಾರಿದ್ದಾರೆ. ಚಾಲಕ ಏಕಾಏಕಿ ಬ್ರೇಕ್​ ಹಾಕಿ ಅಪಘಾತವನ್ನು ತಪ್ಪಿಸಿದ್ದಾರೆ, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪ್ರಧಾನಿ ಮೋದಿ ಬುಧವಾರ ರಾಂಚಿಯಲ್ಲಿ ಬಿರ್ಸಾಮುಂಡ ಸ್ಮಾರಕಕ್ಕೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿದೆ. ಈ ಪ್ರದೇಶವು ಕೊತ್ವಾಲಿ ಪೊಲೀಸ್​ ಠಾಣೆ ಮತ್ತು ಲಾಲ್ಪುರ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಗೆ ಕೌಟುಂಬಿಕ ಸಮಸ್ಯೆಗಳಿವೆ ಎನ್ನಲಾಗುತ್ತಿದೆ, ಅವರು ತಮ್ಮ ಕಷ್ಟವನ್ನು ಪ್ರಧಾನಿ ಮೋದಿಗೆ ಹೇಳಲು ಬಯಸಿದ್ದರು.

ರಸ್ತೆಬದಿಯಲ್ಲಿ ಪ್ರಧಾನಿ ಬರುವುದನ್ನೇ ಕಾಯುತ್ತಾ ನಿಂತಿದ್ದ ಮಹಿಳೆ ಕಾರು ಕಂಡಾಕ್ಷಣ ಎದುರು ಜಿಗಿದಿದ್ದಾರೆ. ತಕ್ಷಣ ಭದ್ರತಾ ಸಿಬ್ಬಂದಿ ಆಕೆಯನ್ನು ತಡೆದಿದ್ದಾರೆ. ಬಳಿಕ ಪ್ರಧಾನಿ ಮೋದಿ ಬೆಂಗಾವಲು ವಾಹನ ಮುಂದೆ ಚಲಿಸಿತು.

ಮತ್ತಷ್ಟು ಓದಿ: Tribal Pride Day: ಬಿರ್ಸಾ ಮುಂಡಾ ಜನ್ಮದಿನ, ಬುಡಕಟ್ಟು ಜನಾಂಗದ ಐಕಾನ್​​ನ ಪ್ರತಿಮೆಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ, ಕಮಾಂಡೊಗಳು ಮಹಿಳೆಯನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ, ಖಾಲಿ ರಸ್ತೆಯಲ್ಲಿ ಮೋದಿ ಬೆಂಗಾವಲು ವಾಹನ ತುಂಬಾ ವೇಗವಾಗಿ ಹೋಗುತ್ತಿರುವುದನ್ನು ಕಾಣಬಹುದು.

ಅಷ್ಟರಲ್ಲಿ ವಾಹನದ ಮುಂದೆ ಕೆಂಪು ಬಟ್ಟೆ ತೊಟ್ಟ ಮಹಿಳೆ ಓಡಿ ಬಂದಿದ್ದಾರೆ, ಎಲ್ಲಾ ವಾಹನಗಳು ತುರ್ತು ಬ್ರೇಕ್ ಹಾಕಬೇಕಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ