AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಂಚಿಯಲ್ಲಿ ಪ್ರಧಾನಿ ಮೋದಿ ಬೆಂಗಾವಲು ವಾಹನದ ಮುಂದೆ ಹಠಾತ್ತನೆ ಜಿಗಿದ ಮಹಿಳೆ

ರಾಂಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಭಾರಿ ಲೋಪವಾಗಿದೆ. ಇದ್ದಕ್ಕಿದ್ದಂತೆ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ವಾಹನದ ಮುಂದೆ ಹಾರಿದ್ದಾರೆ. ಚಾಲಕ ಏಕಾಏಕಿ ಬ್ರೇಕ್​ ಹಾಕಿ ಅಪಘಾತವನ್ನು ತಪ್ಪಿಸಿದ್ದಾರೆ, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ರಾಂಚಿಯಲ್ಲಿ ಪ್ರಧಾನಿ ಮೋದಿ ಬೆಂಗಾವಲು ವಾಹನದ ಮುಂದೆ ಹಠಾತ್ತನೆ ಜಿಗಿದ ಮಹಿಳೆ
ಮೋದಿ ಬೆಂಗಾವಲು ವಾಹನImage Credit source: India Today
ನಯನಾ ರಾಜೀವ್
|

Updated on: Nov 16, 2023 | 10:17 AM

Share

ರಾಂಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಯವರ ಭದ್ರತೆಯಲ್ಲಿ ಭಾರಿ ಲೋಪವಾಗಿದೆ. ಇದ್ದಕ್ಕಿದ್ದಂತೆ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ವಾಹನದ ಮುಂದೆ ಹಾರಿದ್ದಾರೆ. ಚಾಲಕ ಏಕಾಏಕಿ ಬ್ರೇಕ್​ ಹಾಕಿ ಅಪಘಾತವನ್ನು ತಪ್ಪಿಸಿದ್ದಾರೆ, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪ್ರಧಾನಿ ಮೋದಿ ಬುಧವಾರ ರಾಂಚಿಯಲ್ಲಿ ಬಿರ್ಸಾಮುಂಡ ಸ್ಮಾರಕಕ್ಕೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿದೆ. ಈ ಪ್ರದೇಶವು ಕೊತ್ವಾಲಿ ಪೊಲೀಸ್​ ಠಾಣೆ ಮತ್ತು ಲಾಲ್ಪುರ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಗೆ ಕೌಟುಂಬಿಕ ಸಮಸ್ಯೆಗಳಿವೆ ಎನ್ನಲಾಗುತ್ತಿದೆ, ಅವರು ತಮ್ಮ ಕಷ್ಟವನ್ನು ಪ್ರಧಾನಿ ಮೋದಿಗೆ ಹೇಳಲು ಬಯಸಿದ್ದರು.

ರಸ್ತೆಬದಿಯಲ್ಲಿ ಪ್ರಧಾನಿ ಬರುವುದನ್ನೇ ಕಾಯುತ್ತಾ ನಿಂತಿದ್ದ ಮಹಿಳೆ ಕಾರು ಕಂಡಾಕ್ಷಣ ಎದುರು ಜಿಗಿದಿದ್ದಾರೆ. ತಕ್ಷಣ ಭದ್ರತಾ ಸಿಬ್ಬಂದಿ ಆಕೆಯನ್ನು ತಡೆದಿದ್ದಾರೆ. ಬಳಿಕ ಪ್ರಧಾನಿ ಮೋದಿ ಬೆಂಗಾವಲು ವಾಹನ ಮುಂದೆ ಚಲಿಸಿತು.

ಮತ್ತಷ್ಟು ಓದಿ: Tribal Pride Day: ಬಿರ್ಸಾ ಮುಂಡಾ ಜನ್ಮದಿನ, ಬುಡಕಟ್ಟು ಜನಾಂಗದ ಐಕಾನ್​​ನ ಪ್ರತಿಮೆಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ, ಕಮಾಂಡೊಗಳು ಮಹಿಳೆಯನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ, ಖಾಲಿ ರಸ್ತೆಯಲ್ಲಿ ಮೋದಿ ಬೆಂಗಾವಲು ವಾಹನ ತುಂಬಾ ವೇಗವಾಗಿ ಹೋಗುತ್ತಿರುವುದನ್ನು ಕಾಣಬಹುದು.

ಅಷ್ಟರಲ್ಲಿ ವಾಹನದ ಮುಂದೆ ಕೆಂಪು ಬಟ್ಟೆ ತೊಟ್ಟ ಮಹಿಳೆ ಓಡಿ ಬಂದಿದ್ದಾರೆ, ಎಲ್ಲಾ ವಾಹನಗಳು ತುರ್ತು ಬ್ರೇಕ್ ಹಾಕಬೇಕಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು