AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಂಚಿಯಲ್ಲಿ ಪ್ರಧಾನಿ ಮೋದಿ ಬೆಂಗಾವಲು ವಾಹನದ ಮುಂದೆ ಹಠಾತ್ತನೆ ಜಿಗಿದ ಮಹಿಳೆ

ರಾಂಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಭಾರಿ ಲೋಪವಾಗಿದೆ. ಇದ್ದಕ್ಕಿದ್ದಂತೆ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ವಾಹನದ ಮುಂದೆ ಹಾರಿದ್ದಾರೆ. ಚಾಲಕ ಏಕಾಏಕಿ ಬ್ರೇಕ್​ ಹಾಕಿ ಅಪಘಾತವನ್ನು ತಪ್ಪಿಸಿದ್ದಾರೆ, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ರಾಂಚಿಯಲ್ಲಿ ಪ್ರಧಾನಿ ಮೋದಿ ಬೆಂಗಾವಲು ವಾಹನದ ಮುಂದೆ ಹಠಾತ್ತನೆ ಜಿಗಿದ ಮಹಿಳೆ
ಮೋದಿ ಬೆಂಗಾವಲು ವಾಹನImage Credit source: India Today
ನಯನಾ ರಾಜೀವ್
|

Updated on: Nov 16, 2023 | 10:17 AM

Share

ರಾಂಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಯವರ ಭದ್ರತೆಯಲ್ಲಿ ಭಾರಿ ಲೋಪವಾಗಿದೆ. ಇದ್ದಕ್ಕಿದ್ದಂತೆ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ವಾಹನದ ಮುಂದೆ ಹಾರಿದ್ದಾರೆ. ಚಾಲಕ ಏಕಾಏಕಿ ಬ್ರೇಕ್​ ಹಾಕಿ ಅಪಘಾತವನ್ನು ತಪ್ಪಿಸಿದ್ದಾರೆ, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪ್ರಧಾನಿ ಮೋದಿ ಬುಧವಾರ ರಾಂಚಿಯಲ್ಲಿ ಬಿರ್ಸಾಮುಂಡ ಸ್ಮಾರಕಕ್ಕೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿದೆ. ಈ ಪ್ರದೇಶವು ಕೊತ್ವಾಲಿ ಪೊಲೀಸ್​ ಠಾಣೆ ಮತ್ತು ಲಾಲ್ಪುರ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಗೆ ಕೌಟುಂಬಿಕ ಸಮಸ್ಯೆಗಳಿವೆ ಎನ್ನಲಾಗುತ್ತಿದೆ, ಅವರು ತಮ್ಮ ಕಷ್ಟವನ್ನು ಪ್ರಧಾನಿ ಮೋದಿಗೆ ಹೇಳಲು ಬಯಸಿದ್ದರು.

ರಸ್ತೆಬದಿಯಲ್ಲಿ ಪ್ರಧಾನಿ ಬರುವುದನ್ನೇ ಕಾಯುತ್ತಾ ನಿಂತಿದ್ದ ಮಹಿಳೆ ಕಾರು ಕಂಡಾಕ್ಷಣ ಎದುರು ಜಿಗಿದಿದ್ದಾರೆ. ತಕ್ಷಣ ಭದ್ರತಾ ಸಿಬ್ಬಂದಿ ಆಕೆಯನ್ನು ತಡೆದಿದ್ದಾರೆ. ಬಳಿಕ ಪ್ರಧಾನಿ ಮೋದಿ ಬೆಂಗಾವಲು ವಾಹನ ಮುಂದೆ ಚಲಿಸಿತು.

ಮತ್ತಷ್ಟು ಓದಿ: Tribal Pride Day: ಬಿರ್ಸಾ ಮುಂಡಾ ಜನ್ಮದಿನ, ಬುಡಕಟ್ಟು ಜನಾಂಗದ ಐಕಾನ್​​ನ ಪ್ರತಿಮೆಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ, ಕಮಾಂಡೊಗಳು ಮಹಿಳೆಯನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ, ಖಾಲಿ ರಸ್ತೆಯಲ್ಲಿ ಮೋದಿ ಬೆಂಗಾವಲು ವಾಹನ ತುಂಬಾ ವೇಗವಾಗಿ ಹೋಗುತ್ತಿರುವುದನ್ನು ಕಾಣಬಹುದು.

ಅಷ್ಟರಲ್ಲಿ ವಾಹನದ ಮುಂದೆ ಕೆಂಪು ಬಟ್ಟೆ ತೊಟ್ಟ ಮಹಿಳೆ ಓಡಿ ಬಂದಿದ್ದಾರೆ, ಎಲ್ಲಾ ವಾಹನಗಳು ತುರ್ತು ಬ್ರೇಕ್ ಹಾಕಬೇಕಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ