AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಆರ್​ಎಸ್​ ಅಧಿಕಾರಿ ಎಂದು ನಂಬಿ ಮದುವೆಯಾಗಿ ಮೋಸ ಹೋದ ಮಹಿಳಾ ಪೊಲೀಸ್​ ಅಧಿಕಾರಿ

ಉತ್ತರ ಪ್ರದೇಶದ ಮಹಿಳಾ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ)ಯೊಬ್ಬರು ಐಆರ್‌ಎಸ್ ಅಧಿಕಾರಿ ಎಂದುಕೊಂಡು ಮದುವೆಯಾಗುವುದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆತ ಓರ್ವ ಫ್ರಾಡ್ ಆಗಿದ್ದು, ಶ್ರೇಷ್ಠಾ ಸೇರಿದಂತೆ ಹಲವರ ಬಳಿ ದುಡ್ಡು ವಸೂಲಿ ಮಾಡುವುದೇ ಕಾಯಕವಾಗಿದೆ. ಈ ಕುರಿತು ಘಾಜಿಯಾಬಾದ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐಆರ್​ಎಸ್​ ಅಧಿಕಾರಿ ಎಂದು ನಂಬಿ ಮದುವೆಯಾಗಿ ಮೋಸ ಹೋದ ಮಹಿಳಾ ಪೊಲೀಸ್​ ಅಧಿಕಾರಿ
ಶ್ರೇಷ್ಠಾImage Credit source: India Today
ನಯನಾ ರಾಜೀವ್
|

Updated on: Feb 12, 2024 | 8:10 AM

Share

ಶ್ರೇಷ್ಠಾ ಠಾಕೂರ್​ ಉತ್ತರ ಪ್ರದೇಶ(Uttar Pradesh)ದಲ್ಲಿ ಲೇಡಿ ಸಿಂಗಂ ಎಂದೇ ಪ್ರಖ್ಯಾತರಾಗಿರುವ ಡಿಎಸ್​ಪಿ ಆಗಿದ್ದಾರೆ. ಅವರ ಕೆಲಸಗಳು ಜನರಿಗೆ ನಡುಕ ಹುಟ್ಟಿಸುವಂತಿರುತ್ತಿತ್ತು. ಆದರೆ ಅವರ ವೈಯಕ್ತಿಕ ಜೀವನದಲ್ಲಿ ಎಡವಿದ್ದಾರೆ. ಐಆರ್​ಎಸ್​ ಅಧಿಕಾರಿ ಎಂದು ಮದುವೆಯಾಗಿದ್ದ ಅವರು ಆತ ಓರ್ವ ಫ್ರಾಡ್​ ಎಂಬುದು ಮದುವೆಯ ಬಳಿಕ ಗೊತ್ತಾಗಿತ್ತು.

ಯಾರನ್ನೂ ಕೂಡ ಕಣ್ಣುಮುಚ್ಚಿ ನಂಬುವಂತಿಲ್ಲ, ಜೀವನದಲ್ಲಿ ಎಂಥಾ ನಿರ್ಧಾರ ತೆಗೆದುಕೊಳ್ಳಬೇಕಿದ್ದರೂ ಹತ್ತು ಬಾರಿ ಆಲೋಚನೆ ಮಾಡುವುದರ ಜತೆಗೆ ಮದುವೆಯಂತಹ ಸಂದರ್ಭದಲ್ಲಿ ಹಿನ್ನೆಲೆಯನ್ನು ಪರಿಶೀಲನೆ ಮಾಡುವುದು ಅಷ್ಟೇ ಮುಖ್ಯ. ಇತ್ತೀಚಿನ ದಿನಗಳಲ್ಲಿ ಸುಳ್ಳು ಹೇಳಿಕೊಂಡು ಮದುವೆಯಾಗಿ ಆಭರಣ, ಹಣವನ್ನೆಲ್ಲಾ ದೋಚಿ ಪರಾರಿಯಾಗುವ ಎಷ್ಟೇ ನಿದರ್ಶನಗಳು ನಮ್ಮ ಕಣ್ಣ ಮುಂದಿವೆ.

2012ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಶ್ರೇಷ್ಠಾ ಠಾಕೂರ್ ಅವರು 2018 ರಲ್ಲಿ ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಭೇಟಿಯಾದ ರೋಹಿತ್ ರಾಜ್ ಎಂಬ ವ್ಯಕ್ತಿಯನ್ನು ವಿವಾಹವಾದರು. ಶ್ರೇಷ್ಠಾ ಅವರಿಗೆ ರೋಹಿತ್ ರಾಜ್ ರಾಂಚಿಯಲ್ಲಿ ಡೆಪ್ಯುಟಿ ಕಮಿಷನರ್ ಆಗಿ ಪೋಸ್ಟ್ ಮಾಡಲಾದ 2008-ಬ್ಯಾಚ್ IRS ಅಧಿಕಾರಿ ಎಂದು ಸುಳ್ಳು ಹೇಳಿದ್ದ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ವರರಿಲ್ಲದೆ ನಡೆಯಿತು ಸುಳ್ಳು ಸಾಮೂಹಿಕ ವಿವಾಹ, ನಟಿಸಿದವರಿಗೆ ಸಿಕ್ಕಿತ್ತು 

ಮದುವೆಯ ಬಳಿಕ ವಿಷಯಗಳು ತಿರುವು ಪಡೆದಿತ್ತು, ತನ್ನ ಪತಿ ಐಆರ್​ಎಸ್​ ಅಧಿಕಾರಿಯಲ್ಲ ಎಂಬುದು ಗೊತ್ತಾಗಿತ್ತು. ವಿಷಯದ ಗಂಭೀರತೆಯನ್ನು ಅರ್ಥಮಾಡಿಕೊಂಡ ಮಹಿಳಾ ಡಿಎಸ್ಪಿ ತನ್ನ ದಾಂಪತ್ಯವನ್ನು ಉಳಿಸಿಕೊಳ್ಳುವ ಸಲುವಾಗಿ ಸುಮ್ಮನಿದ್ದರು.

ಆದರೆ ಕೊನೆಗೆ ಆತ ಹೆಂಡತಿಯ ಹೆಸರಿನಲ್ಲಿ ವಂಚನೆ ಮಾಡಲು ಶುರು ಮಾಡಿದ್ದ, ಇದರಿಂದ ಬೇಸತ್ತು ಶ್ರೇಷ್ಠಾ ಠಾಕೂರ್ ಮದುವೆಯಾಗಿ ಎರಡು ವರ್ಷಗಳ ಬಳಿಕ ರೋಹಿತ್ ರಾಜ್​ಗೆ ವಿಚ್ಛೇದನ ನೀಡಿದ್ದರು.

ಆದರೂ ಸಮಸ್ಯೆ ಬಗೆಹರಿದಿರಲಿಲ್ಲ, ಆತ ವಂಚನೆಯನ್ನು ಮುಂದುವರೆಸಿದ್ದ ಹೀಗಾಗಿ ಅನಿವಾರ್ಯವಾಗಿ ಅವರು ಘಾಜಿಯಾಬಾದ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ. ರೋಹಿತ್ ಆಕೆಗೂ ಕೂಡ ಲಕ್ಷಾಂತರ ರೂಪಾಯಿ ಹಣವನ್ನು ವಂಚಿಸಿದ್ದ ಎಂಬುದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!