Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಹಸ್ತಿಯಲ್ಲಿ‌ ಕೊರೊನಾ ಮಹಿಳಾ ವಾರಿಯರ್​ ಮನೆಗೆ ಬೀಗ ಹಾಕಿದ ಮಾಲೀಕ!

ಹೈದರಾಬಾದ್: ಕೊರೊನಾ‌ ಸೋಂಕು ವಿರುದ್ಧದ ಸಮರ ಕಾಲದಲ್ಲಿ ತುರ್ತು ಕಾರ್ಯಗಳಲ್ಲಿ‌ ತೊಡಗಿಸಿಕೊಂಡಿರೋ ಕಂದಾಯ ಇಲಾಖೆಯ ಮಹಿಳಾ ಉದ್ಯೋಗಿಯೊಬ್ಬರು ಬಾಡಿಗೆ ಮನೆಯಲ್ಲಿದ್ದರು. ಆದ್ರೆ ಆ ಮನೆಯ ಮಾಲೀಕ ತಾನು ಬಾಡಿಗೆಗೆ ನೀಡಿದ್ದ ಮನೆಗೆ ಬೀಗ ಹಾಕಿಕೊಂಡು ಹೋಗಿರೋ ಘಟನೆ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಜರುಗಿದೆ. ಚಿತ್ತೂರು ಜಿಲ್ಲಾ ಕಾಳಹಸ್ತಿಯಲ್ಲಿ‌ ಈ ಘಟನೆ ನಡೆದಿದ್ದು, ಮನೆಯ‌ ಮಾಲೀಕನ ಈ ಕೃತ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ತುರ್ತು ಕಾರ್ಯಗಳಿಂದಾಗಿ ಮನೆಯಿಂದ ಹೊರಗಡೆ ಕೆಲಸಕ್ಕೆ ಹೋಗಿದ್ದರು. ಇದರಿಂದಾಗಿ ಮಹಿಳೆಗೆ ಕೊರೊನಾ ಸೋಂಕು […]

ಕಾಳಹಸ್ತಿಯಲ್ಲಿ‌ ಕೊರೊನಾ ಮಹಿಳಾ ವಾರಿಯರ್​ ಮನೆಗೆ ಬೀಗ ಹಾಕಿದ ಮಾಲೀಕ!
Follow us
ಸಾಧು ಶ್ರೀನಾಥ್​
|

Updated on: May 06, 2020 | 4:17 PM

ಹೈದರಾಬಾದ್: ಕೊರೊನಾ‌ ಸೋಂಕು ವಿರುದ್ಧದ ಸಮರ ಕಾಲದಲ್ಲಿ ತುರ್ತು ಕಾರ್ಯಗಳಲ್ಲಿ‌ ತೊಡಗಿಸಿಕೊಂಡಿರೋ ಕಂದಾಯ ಇಲಾಖೆಯ ಮಹಿಳಾ ಉದ್ಯೋಗಿಯೊಬ್ಬರು ಬಾಡಿಗೆ ಮನೆಯಲ್ಲಿದ್ದರು. ಆದ್ರೆ ಆ ಮನೆಯ ಮಾಲೀಕ ತಾನು ಬಾಡಿಗೆಗೆ ನೀಡಿದ್ದ ಮನೆಗೆ ಬೀಗ ಹಾಕಿಕೊಂಡು ಹೋಗಿರೋ ಘಟನೆ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಜರುಗಿದೆ.

ಚಿತ್ತೂರು ಜಿಲ್ಲಾ ಕಾಳಹಸ್ತಿಯಲ್ಲಿ‌ ಈ ಘಟನೆ ನಡೆದಿದ್ದು, ಮನೆಯ‌ ಮಾಲೀಕನ ಈ ಕೃತ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ತುರ್ತು ಕಾರ್ಯಗಳಿಂದಾಗಿ ಮನೆಯಿಂದ ಹೊರಗಡೆ ಕೆಲಸಕ್ಕೆ ಹೋಗಿದ್ದರು. ಇದರಿಂದಾಗಿ ಮಹಿಳೆಗೆ ಕೊರೊನಾ ಸೋಂಕು ತಗುಲಿತ್ತು. ನಂತರ ಐಸೋಲೇಷನ್ ವಾರ್ಡನಲ್ಲಿದ್ದು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಐಸೋಲೇಷನ್ ಅವಧಿ ಮುಗಿದ ನಂತರ ಮನೆಗೆ ಹೋದಾಗ ಮನೆಯ ಮಾಲೀಕ ಮನೆಗೆ ಬೀಗ ಹಾಕಿರುವುದು ಕಂಡು ಬಂದಿದೆ. ಈ ಬಗ್ಗೆ ಕೇಳಿದಾಗ ಮನೆಯ ಮಾಲೀಕ ಮನೆಯನ್ನು ಖಾಲಿ ಮಾಡುವಂತೆ ಒತ್ತಾಯಿಸಿದ್ದಾನೆ. ಮನೆಯೊಳಕ್ಕೆ‌ ಕಾಲಿಡದಂತೆ ಎಚ್ಚರಿಸಿದ್ದಾನೆ. ಮನೆಗೆ ಹೋಗದಂತೆ ತಡೆದಿದ್ದಾನೆ.

ಮನೆ ಮಾಲೀಕನ‌ ಈ ವರ್ತನೆಯಿಂದ‌ ತಹಶೀಲ್ದಾರ್ ಕಚೇರಿ ಉದ್ಯೋಗಿಯಾದ ಸದರಿ ಮಹಿಳೆ ಕಣ್ಣೀರು ಹಾಕಿದ್ದಾರೆ. ತಮ್ಮ ಉದ್ಯೋಗಿಗೆ ಪರಿಸ್ಥಿತಿ ಗಮನಿಸಿದ ಶ್ರೀಕಾಕುಳಂ ತಹಶೀಲ್ದಾರ್ ಅವರಿಗೆ ಸದ್ಯಕ್ಕೆ ಬೇರೆ ಕಡೆ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದಾರೆ. ಆದ್ರೆ, ಕೊರೊನಾ ನಿವಾರಣೆಗಾಗಿ ಜನರ ಸೇವೆ ಮಾಡುತ್ತಿರುವವರಿಗೆ ಕೆಲವರು ಈ ರೀತಿಯಾಗಿ ವರ್ತಿಸಿರೋದು ಎಷ್ಟು ಸರಿ ಅನ್ನೋದನ್ನ ಯೋಚಿಸಬೇಕಿದೆ.

ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?