AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಹಸ್ತಿಯಲ್ಲಿ‌ ಕೊರೊನಾ ಮಹಿಳಾ ವಾರಿಯರ್​ ಮನೆಗೆ ಬೀಗ ಹಾಕಿದ ಮಾಲೀಕ!

ಹೈದರಾಬಾದ್: ಕೊರೊನಾ‌ ಸೋಂಕು ವಿರುದ್ಧದ ಸಮರ ಕಾಲದಲ್ಲಿ ತುರ್ತು ಕಾರ್ಯಗಳಲ್ಲಿ‌ ತೊಡಗಿಸಿಕೊಂಡಿರೋ ಕಂದಾಯ ಇಲಾಖೆಯ ಮಹಿಳಾ ಉದ್ಯೋಗಿಯೊಬ್ಬರು ಬಾಡಿಗೆ ಮನೆಯಲ್ಲಿದ್ದರು. ಆದ್ರೆ ಆ ಮನೆಯ ಮಾಲೀಕ ತಾನು ಬಾಡಿಗೆಗೆ ನೀಡಿದ್ದ ಮನೆಗೆ ಬೀಗ ಹಾಕಿಕೊಂಡು ಹೋಗಿರೋ ಘಟನೆ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಜರುಗಿದೆ. ಚಿತ್ತೂರು ಜಿಲ್ಲಾ ಕಾಳಹಸ್ತಿಯಲ್ಲಿ‌ ಈ ಘಟನೆ ನಡೆದಿದ್ದು, ಮನೆಯ‌ ಮಾಲೀಕನ ಈ ಕೃತ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ತುರ್ತು ಕಾರ್ಯಗಳಿಂದಾಗಿ ಮನೆಯಿಂದ ಹೊರಗಡೆ ಕೆಲಸಕ್ಕೆ ಹೋಗಿದ್ದರು. ಇದರಿಂದಾಗಿ ಮಹಿಳೆಗೆ ಕೊರೊನಾ ಸೋಂಕು […]

ಕಾಳಹಸ್ತಿಯಲ್ಲಿ‌ ಕೊರೊನಾ ಮಹಿಳಾ ವಾರಿಯರ್​ ಮನೆಗೆ ಬೀಗ ಹಾಕಿದ ಮಾಲೀಕ!
ಸಾಧು ಶ್ರೀನಾಥ್​
|

Updated on: May 06, 2020 | 4:17 PM

Share

ಹೈದರಾಬಾದ್: ಕೊರೊನಾ‌ ಸೋಂಕು ವಿರುದ್ಧದ ಸಮರ ಕಾಲದಲ್ಲಿ ತುರ್ತು ಕಾರ್ಯಗಳಲ್ಲಿ‌ ತೊಡಗಿಸಿಕೊಂಡಿರೋ ಕಂದಾಯ ಇಲಾಖೆಯ ಮಹಿಳಾ ಉದ್ಯೋಗಿಯೊಬ್ಬರು ಬಾಡಿಗೆ ಮನೆಯಲ್ಲಿದ್ದರು. ಆದ್ರೆ ಆ ಮನೆಯ ಮಾಲೀಕ ತಾನು ಬಾಡಿಗೆಗೆ ನೀಡಿದ್ದ ಮನೆಗೆ ಬೀಗ ಹಾಕಿಕೊಂಡು ಹೋಗಿರೋ ಘಟನೆ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಜರುಗಿದೆ.

ಚಿತ್ತೂರು ಜಿಲ್ಲಾ ಕಾಳಹಸ್ತಿಯಲ್ಲಿ‌ ಈ ಘಟನೆ ನಡೆದಿದ್ದು, ಮನೆಯ‌ ಮಾಲೀಕನ ಈ ಕೃತ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ತುರ್ತು ಕಾರ್ಯಗಳಿಂದಾಗಿ ಮನೆಯಿಂದ ಹೊರಗಡೆ ಕೆಲಸಕ್ಕೆ ಹೋಗಿದ್ದರು. ಇದರಿಂದಾಗಿ ಮಹಿಳೆಗೆ ಕೊರೊನಾ ಸೋಂಕು ತಗುಲಿತ್ತು. ನಂತರ ಐಸೋಲೇಷನ್ ವಾರ್ಡನಲ್ಲಿದ್ದು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಐಸೋಲೇಷನ್ ಅವಧಿ ಮುಗಿದ ನಂತರ ಮನೆಗೆ ಹೋದಾಗ ಮನೆಯ ಮಾಲೀಕ ಮನೆಗೆ ಬೀಗ ಹಾಕಿರುವುದು ಕಂಡು ಬಂದಿದೆ. ಈ ಬಗ್ಗೆ ಕೇಳಿದಾಗ ಮನೆಯ ಮಾಲೀಕ ಮನೆಯನ್ನು ಖಾಲಿ ಮಾಡುವಂತೆ ಒತ್ತಾಯಿಸಿದ್ದಾನೆ. ಮನೆಯೊಳಕ್ಕೆ‌ ಕಾಲಿಡದಂತೆ ಎಚ್ಚರಿಸಿದ್ದಾನೆ. ಮನೆಗೆ ಹೋಗದಂತೆ ತಡೆದಿದ್ದಾನೆ.

ಮನೆ ಮಾಲೀಕನ‌ ಈ ವರ್ತನೆಯಿಂದ‌ ತಹಶೀಲ್ದಾರ್ ಕಚೇರಿ ಉದ್ಯೋಗಿಯಾದ ಸದರಿ ಮಹಿಳೆ ಕಣ್ಣೀರು ಹಾಕಿದ್ದಾರೆ. ತಮ್ಮ ಉದ್ಯೋಗಿಗೆ ಪರಿಸ್ಥಿತಿ ಗಮನಿಸಿದ ಶ್ರೀಕಾಕುಳಂ ತಹಶೀಲ್ದಾರ್ ಅವರಿಗೆ ಸದ್ಯಕ್ಕೆ ಬೇರೆ ಕಡೆ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದಾರೆ. ಆದ್ರೆ, ಕೊರೊನಾ ನಿವಾರಣೆಗಾಗಿ ಜನರ ಸೇವೆ ಮಾಡುತ್ತಿರುವವರಿಗೆ ಕೆಲವರು ಈ ರೀತಿಯಾಗಿ ವರ್ತಿಸಿರೋದು ಎಷ್ಟು ಸರಿ ಅನ್ನೋದನ್ನ ಯೋಚಿಸಬೇಕಿದೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!