AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಡಿಎಂಕೆ ಗೆದ್ದಿದ್ದಕ್ಕೆ ನಾಲಿಗೆ ಕತ್ತರಿಸಿ ಹರಕೆ ತೀರಿಸಿದ ಮಹಿಳೆ; ದೇಗುಲದ ಗೇಟ್​ ಬಳಿಯೇ ಕುಸಿದು ಬಿದ್ದರು

ತಮಿಳುನಾಡಿನಲ್ಲಿ ದಶಕಗಳ ನಂತರ ಒಂದು ಹೊಸ ಆಡಳಿತ ಶುರುವಾಗುತ್ತಿದೆ. ಇಷ್ಟು ದಿನ ವಿರೋಧ ಪಕ್ಷವಾಗಿದ್ದ ಡಿಎಂಕೆ ಇನ್ನು ಮುಂದೆ ಆಡಳಿತ ಪಕ್ಷವಾಗಲಿದೆ.

ತಮಿಳುನಾಡಿನಲ್ಲಿ ಡಿಎಂಕೆ ಗೆದ್ದಿದ್ದಕ್ಕೆ ನಾಲಿಗೆ ಕತ್ತರಿಸಿ ಹರಕೆ ತೀರಿಸಿದ ಮಹಿಳೆ; ದೇಗುಲದ ಗೇಟ್​ ಬಳಿಯೇ ಕುಸಿದು ಬಿದ್ದರು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 03, 2021 | 2:54 PM

Share

ನಮ್ಮ ಯಾವ್ಯಾವುದೋ ಕೆಲಸವಾಗಲಿ ಎಂದು ವಿವಿಧ ರೂಪದ ಹರಕೆಗಳನ್ನು ಹೊತ್ತು, ಅದನ್ನು ತೀರಿಸುತ್ತೇವೆ. ಹಾಗೇ ಈ ಮಹಿಳೆ ಕೂಡ ತಮಿಳುನಾಡಿನಲ್ಲಿ ಎಂ.ಕೆ.ಸ್ಟಾಲಿನ್​ ನೇತೃತ್ವದ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷ ಈ ಬಾರಿ ಅಧಿಕಾರಕ್ಕೆ ಬಂದರೆ ನಾಲಿಗೆಯನ್ನು ಕತ್ತರಿಸಿಕೊಳ್ಳುತ್ತೇನೆ ಎಂದು ಹರಕೆ ಹೊತ್ತಿದ್ದರು. ಇದೀಗ ಡಿಎಂಕೆ ಪಕ್ಷವೇ ಗೆದ್ದ ಕಾರಣ ತಮ್ಮ ನಾಲಿಗೆಯನ್ನು ಕತ್ತರಿಸಿ, ದೇವರಿಗೆ ಅರ್ಪಿಸಿದ್ದಾರೆ.

ಹೀಗೊಂದು ಕಷ್ಟಕರವಾದ ಹರಕೆ ಹೊತ್ತಿದ್ದಲ್ಲದೆ, ಅದನ್ನು ತೀರಿಸಿದ ಮಹಿಳೆಯ ಹೆಸರು ವನಿತಾ. ಇವರಿಗೆ 32 ವರ್ಷ. 2021ರ ವಿಧಾನಸಭಾ ಚುನಾವಣೆಯ ಫಲಿತಾಂಶ ನಿನ್ನೆಯಷ್ಟೇ ಹೊರಬಿದ್ದಿದ್ದು, ಅದರಲ್ಲಿ ಡಿಎಂಕೆಗೆ ಬಹುಮತ ಬಂದಿದೆ. ಹೀಗಾಗಿ ಫಲಿತಾಂಶ ಹೊರಬರುತ್ತಿದ್ದಂತೆ ವನಿತಾ ತಮ್ಮ ಹರಕೆ ಸಲ್ಲಿಸಿದ್ದಾರೆ. ಜನಾದೇಶ ಡಿಎಂಕೆ ಪರವಾಗಿ ಹೊರಬೀಳುತ್ತಿದ್ದಂತೆ ವನಿತಾ ಮುಥಾಲಮ್ಮನ ದೇವಾಲಯಕ್ಕೆ ಹೋಗಿ ತಮ್ಮ ನಾಲಿಗೆ ಕತ್ತರಿಸಿಕೊಂಡಿದ್ದಾರೆ. ಅದನ್ನು ಆ ದೇವರಿಗೆ ಅರ್ಪಿಸಲು ಪ್ರಯತ್ನಿಸಿದ್ದಾಳೆ. ಆದರೆ ಕೊವಿಡ್​ 19 ಇರುವ ಕಾರಣಕ್ಕೆ ಅಲ್ಲಿ ಯಾವುದೇ ಪೂಜೆ, ಹರಕೆ ಸಲ್ಲಿಸಲು ಅವಕಾಶ ಇಲ್ಲ. ಹಾಗಾಗಿ ನಾಲಿಗೆಯನ್ನು ದೇಗುಲದ ಬಾಗಿಲನಲ್ಲಿರುವ ಗೇಟ್​ ಬಳಿ ಇಟ್ಟಿದ್ದರು. ಅಷ್ಟರಲ್ಲಿ ಆಕೆಯೂ ಸಹ ಎಚ್ಚರವಿಲ್ಲದೆ ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ಅದನ್ನು ನೋಡಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದರು.

ತಮಿಳುನಾಡಿನಲ್ಲಿ ದಶಕಗಳ ನಂತರ ಒಂದು ಹೊಸ ಆಡಳಿತ ಶುರುವಾಗುತ್ತಿದೆ. ಇಷ್ಟು ದಿನ ವಿರೋಧ ಪಕ್ಷವಾಗಿದ್ದ ಡಿಎಂಕೆ ಇನ್ನು ಮುಂದೆ ಆಡಳಿತ ಪಕ್ಷವಾಗಲಿದೆ. ಜಯಲಲತಾ ಅವರ ಎಐಡಿಎಂಕೆ ಪಕ್ಷದ ಆಡಳಿತ ನಿನ್ನೆಗೆ ಕೊನೆಗೊಂಡಿದೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ: ಐಎಎಸ್​ ಅಧಿಕಾರಿ ಶಿವಯೋಗಿ ಕಳಸದ್​ ಮೂಲಕ ತನಿಖೆಗೆ ಸರಕಾರ ಆದೇಶ

10,000 ರೂಪಾಯಿ ಹೂಡಿದವರಿಗೆ 20 ವರ್ಷದಲ್ಲಿ 2 ಕೋಟಿ ಮಾಡಿಕೊಟ್ಟ ಕಂಪೆನಿಯ ಕಥೆಯಿದು

Woman cuts off her tongue for offer temple to keep promise as DMK Victory in Tamil Nadu

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ