AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿಯನ್ನು ಕಚ್ಚಿ, ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಮಹಿಳೆಯನ್ನು ವಿಮಾನದಿಂದ ಕೆಳಗಿಳಿಸಿದ ಅಧಿಕಾರಿಗಳು

ವಿಮಾನದಲ್ಲಿ ಸಹ ಪ್ರಯಾಣಿಕರಿಗೆ ತೊಂದರೆ ಕೊಟ್ಟು, ಸಿಬ್ಬಂದಿಯನ್ನು ಕಚ್ಚಿದ್ದ ಮಹಿಳೆಯನ್ನು ಅಧಿಕಾರಿಗಳು ವಿಮಾನದಿಂದ ಕೆಳಗಿಳಿಸಿದ್ದಾರೆ. ಪುಣೆಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ತಮ್ಮ ಪತಿ ಜತೆ ಬಂದು ಇಬ್ಬರು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಸಿಬ್ಬಂದಿಯ ಕೈಯನ್ನು ಕಚ್ಚಿದ್ದರು, ನಂತರ ಅವರನ್ನು ವಿಮಾನದಿಂದ ಕೆಳಗಿಳಿಸಿ ಪೊಲೀಸರಿಗೆ ಒಪ್ಪಿಸಲಾಯಿತು.

ಸಿಬ್ಬಂದಿಯನ್ನು ಕಚ್ಚಿ, ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಮಹಿಳೆಯನ್ನು ವಿಮಾನದಿಂದ ಕೆಳಗಿಳಿಸಿದ ಅಧಿಕಾರಿಗಳು
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on: Aug 20, 2024 | 10:32 AM

Share

ಸಿಬ್ಬಂದಿಯನ್ನು ಕಚ್ಚಿ, ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಮಹಿಳೆಯನ್ನು ಅಧಿಕಾರಿಗಳು ವಿಮಾನದಿಂದ ಕೆಳಗಿಳಿಸಿರುವ ಘಟನೆ ಪುಣೆಯ ಲೋಹ್​ಗಾಂವ್ ಏರ್​ಪೋರ್ಟ್​ನಲ್ಲಿ ನಡೆದಿದೆ. ಆಕೆ ಇಬ್ಬರು ಸಹ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದರು, ಜತೆಗೆ ಭದ್ರತಾ ಅಧಿಕಾರಿಗೆ ಕಪಾಳಮೋಕ್ಷ ಮಾಡಿ, ಕೈ ಕಚ್ಚಿದ್ದರು.

ಇಂಡಿಗೋ ಏರ್‌ಲೈನ್‌ನ ಪುಣೆ-ದೆಹಲಿ ವಿಮಾನ (6E 5261) ಗೆ ಬೋರ್ಡಿಂಗ್ ನಡೆಯುತ್ತಿದ್ದಾಗ ಆಗಸ್ಟ್ 17 ರ ಶನಿವಾರ ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆರಂಭದಲ್ಲಿ, ಮಹಿಳೆ ತಮಗೆ ನಿಗದಿಪಡಿಸಿದ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಸಹ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ, ಸಿಬ್ಬಂದಿ ಮಧ್ಯೆ ಪ್ರವೇಶಿಸಿದ್ದರು. ಒಬ್ಬರು ಸಿಐಎಸ್‌ಎಫ್ ಕಾನ್‌ಸ್ಟೆಬಲ್‌ಗಳಾದ ಪ್ರಿಯಾಂಕಾ ರೆಡ್ಡಿ ಮತ್ತು ಸೋನಿಕಾ ಪಾಲ್ ಅವರನ್ನು ಸಹ ಪರಿಸ್ಥಿತಿಯನ್ನು ನಿಯಂತ್ರಿಸಲು ಕರೆಸಲಾಯಿತು.

ವಾಗ್ವಾದದ ವೇಳೆ ಮಹಿಳೆ ಕಾನ್‌ಸ್ಟೆಬಲ್ ರೆಡ್ಡಿಗೆ ಕಪಾಳಮೋಕ್ಷ ಮಾಡಿ ಕೈ ಕಚ್ಚಿದ್ದಾಳೆ. ಆದರೆ, ಸಿಐಎಸ್‌ಎಫ್ ಸಿಬ್ಬಂದಿ ಮಹಿಳೆಯನ್ನು ಯಶಸ್ವಿಯಾಗಿ ನಿಯಂತ್ರಿಸಿ, ಆಕೆ ಮತ್ತು ಆಕೆಯ ಜತೆಗಿದ್ದ ಪತಿಯನ್ನು ವಿಮಾನದಿಂದ ಕೆಳಗಿಳಿಸಿದ್ದಾರೆ. ನಂತರ ದಂಪತಿಯನ್ನು ವಿಮಾನ ನಿಲ್ದಾಣ ಪೊಲೀಸರಿಗೆ ಒಪ್ಪಿಸಲಾಯಿತು.

ಮತ್ತಷ್ಟು ಓದಿ: ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಈ ಹಿಂದೆ ಇದೇ ರೀತಿಯ ಘಟನೆಯಲ್ಲಿ, ಸಿಬ್ಬಂದಿ ಮತ್ತು ಇತರ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಮಹಿಳೆಯನ್ನು ಲಕ್ನೋದಿಂದ ಮುಂಬೈಗೆ ಹೊರಟಿದ್ದ ಆಕಾಶ ಏರ್ ವಿಮಾನದಿಂದ ಕೆಳಗಿಳಿಸಲಾಗಿತ್ತು.

ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 504 ರ ಅಡಿಯಲ್ಲಿ (ಉದ್ದೇಶಪೂರ್ವಕವಾಗಿ ಅವಮಾನಿಸುವುದು ಅಥವಾ ಶಾಂತಿ ಮತ್ತು ಸಾರ್ವಜನಿಕ ನೆಮ್ಮದಿಗೆ ಭಂಗವನ್ನು ಉಂಟುಮಾಡಲು ಪ್ರಚೋದಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?