AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿಯನ್ನು ಕಚ್ಚಿ, ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಮಹಿಳೆಯನ್ನು ವಿಮಾನದಿಂದ ಕೆಳಗಿಳಿಸಿದ ಅಧಿಕಾರಿಗಳು

ವಿಮಾನದಲ್ಲಿ ಸಹ ಪ್ರಯಾಣಿಕರಿಗೆ ತೊಂದರೆ ಕೊಟ್ಟು, ಸಿಬ್ಬಂದಿಯನ್ನು ಕಚ್ಚಿದ್ದ ಮಹಿಳೆಯನ್ನು ಅಧಿಕಾರಿಗಳು ವಿಮಾನದಿಂದ ಕೆಳಗಿಳಿಸಿದ್ದಾರೆ. ಪುಣೆಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ತಮ್ಮ ಪತಿ ಜತೆ ಬಂದು ಇಬ್ಬರು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಸಿಬ್ಬಂದಿಯ ಕೈಯನ್ನು ಕಚ್ಚಿದ್ದರು, ನಂತರ ಅವರನ್ನು ವಿಮಾನದಿಂದ ಕೆಳಗಿಳಿಸಿ ಪೊಲೀಸರಿಗೆ ಒಪ್ಪಿಸಲಾಯಿತು.

ಸಿಬ್ಬಂದಿಯನ್ನು ಕಚ್ಚಿ, ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಮಹಿಳೆಯನ್ನು ವಿಮಾನದಿಂದ ಕೆಳಗಿಳಿಸಿದ ಅಧಿಕಾರಿಗಳು
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on: Aug 20, 2024 | 10:32 AM

Share

ಸಿಬ್ಬಂದಿಯನ್ನು ಕಚ್ಚಿ, ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಮಹಿಳೆಯನ್ನು ಅಧಿಕಾರಿಗಳು ವಿಮಾನದಿಂದ ಕೆಳಗಿಳಿಸಿರುವ ಘಟನೆ ಪುಣೆಯ ಲೋಹ್​ಗಾಂವ್ ಏರ್​ಪೋರ್ಟ್​ನಲ್ಲಿ ನಡೆದಿದೆ. ಆಕೆ ಇಬ್ಬರು ಸಹ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದರು, ಜತೆಗೆ ಭದ್ರತಾ ಅಧಿಕಾರಿಗೆ ಕಪಾಳಮೋಕ್ಷ ಮಾಡಿ, ಕೈ ಕಚ್ಚಿದ್ದರು.

ಇಂಡಿಗೋ ಏರ್‌ಲೈನ್‌ನ ಪುಣೆ-ದೆಹಲಿ ವಿಮಾನ (6E 5261) ಗೆ ಬೋರ್ಡಿಂಗ್ ನಡೆಯುತ್ತಿದ್ದಾಗ ಆಗಸ್ಟ್ 17 ರ ಶನಿವಾರ ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆರಂಭದಲ್ಲಿ, ಮಹಿಳೆ ತಮಗೆ ನಿಗದಿಪಡಿಸಿದ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಸಹ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ, ಸಿಬ್ಬಂದಿ ಮಧ್ಯೆ ಪ್ರವೇಶಿಸಿದ್ದರು. ಒಬ್ಬರು ಸಿಐಎಸ್‌ಎಫ್ ಕಾನ್‌ಸ್ಟೆಬಲ್‌ಗಳಾದ ಪ್ರಿಯಾಂಕಾ ರೆಡ್ಡಿ ಮತ್ತು ಸೋನಿಕಾ ಪಾಲ್ ಅವರನ್ನು ಸಹ ಪರಿಸ್ಥಿತಿಯನ್ನು ನಿಯಂತ್ರಿಸಲು ಕರೆಸಲಾಯಿತು.

ವಾಗ್ವಾದದ ವೇಳೆ ಮಹಿಳೆ ಕಾನ್‌ಸ್ಟೆಬಲ್ ರೆಡ್ಡಿಗೆ ಕಪಾಳಮೋಕ್ಷ ಮಾಡಿ ಕೈ ಕಚ್ಚಿದ್ದಾಳೆ. ಆದರೆ, ಸಿಐಎಸ್‌ಎಫ್ ಸಿಬ್ಬಂದಿ ಮಹಿಳೆಯನ್ನು ಯಶಸ್ವಿಯಾಗಿ ನಿಯಂತ್ರಿಸಿ, ಆಕೆ ಮತ್ತು ಆಕೆಯ ಜತೆಗಿದ್ದ ಪತಿಯನ್ನು ವಿಮಾನದಿಂದ ಕೆಳಗಿಳಿಸಿದ್ದಾರೆ. ನಂತರ ದಂಪತಿಯನ್ನು ವಿಮಾನ ನಿಲ್ದಾಣ ಪೊಲೀಸರಿಗೆ ಒಪ್ಪಿಸಲಾಯಿತು.

ಮತ್ತಷ್ಟು ಓದಿ: ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಈ ಹಿಂದೆ ಇದೇ ರೀತಿಯ ಘಟನೆಯಲ್ಲಿ, ಸಿಬ್ಬಂದಿ ಮತ್ತು ಇತರ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಮಹಿಳೆಯನ್ನು ಲಕ್ನೋದಿಂದ ಮುಂಬೈಗೆ ಹೊರಟಿದ್ದ ಆಕಾಶ ಏರ್ ವಿಮಾನದಿಂದ ಕೆಳಗಿಳಿಸಲಾಗಿತ್ತು.

ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 504 ರ ಅಡಿಯಲ್ಲಿ (ಉದ್ದೇಶಪೂರ್ವಕವಾಗಿ ಅವಮಾನಿಸುವುದು ಅಥವಾ ಶಾಂತಿ ಮತ್ತು ಸಾರ್ವಜನಿಕ ನೆಮ್ಮದಿಗೆ ಭಂಗವನ್ನು ಉಂಟುಮಾಡಲು ಪ್ರಚೋದಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ