Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟಿಯಲ್ಲಿ ಯುವತಿಯ ಕಣ್ಣಿಗೆ ಗುಂಡು ಹಾರಿಸಿ, ಆಸ್ಪತ್ರೆಯಲ್ಲಿ ಬಿಟ್ಟು ಆರೋಪಿಗಳು ಪರಾರಿ

ಮಧ್ಯಪ್ರದೇಶದ ಇಂದೋರ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಲಸುಡಿಯಾ ಪ್ರದೇಶದಲ್ಲಿ 24 ವರ್ಷದ ಯುವತಿಯ ಕಣ್ಣಿಗೆ ಪಾರ್ಟಿಯೊಂದರಲ್ಲಿ ಗುಂಡು ಹಾರಿಸಲಾಗಿದೆ. ಕೆಲವು ಯುವಕರು ಆಕೆಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಓಡಿಹೋಗಿರುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಮಹಾಲಕ್ಷ್ಮಿ ನಗರ ಪ್ರದೇಶದಲ್ಲಿ ನಡೆದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಪಾರ್ಟಿಯಲ್ಲಿ ಯುವತಿಯ ಕಣ್ಣಿಗೆ ಗುಂಡು ಹಾರಿಸಿ, ಆಸ್ಪತ್ರೆಯಲ್ಲಿ ಬಿಟ್ಟು ಆರೋಪಿಗಳು ಪರಾರಿ
ಭಾವನಾ ಸಿಂಗ್ Image Credit source: Naidunia
Follow us
ನಯನಾ ರಾಜೀವ್
|

Updated on: Mar 23, 2025 | 8:59 AM

ಇಂದೋರ್, ಮಾರ್ಚ್​ 23: ಮಧ್ಯಪ್ರದೇಶದ ಇಂದೋರ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಲಸುಡಿಯಾ ಪ್ರದೇಶದಲ್ಲಿ 24 ವರ್ಷದ ಯುವತಿಯ ಕಣ್ಣಿಗೆ ಪಾರ್ಟಿಯೊಂದರಲ್ಲಿ ಗುಂಡು ಹಾರಿಸಲಾಗಿದೆ. ಕೆಲವು ಯುವಕರು ಆಕೆಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಓಡಿಹೋಗಿರುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಮಹಾಲಕ್ಷ್ಮಿ ನಗರ ಪ್ರದೇಶದಲ್ಲಿ ನಡೆದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮೃತ ಯುವತಿಯನ್ನು ಗ್ವಾಲಿಯರ್ ನಿವಾಸಿ ಭಾವನಾ ಸಿಂಗ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನ 3.45 ರ ಸುಮಾರಿಗೆ ಕೆಲವು ಯುವಕರು ಆಕೆಯನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ವೈದ್ಯರು ಘಟನೆಯ ಬಗ್ಗೆ ಕೇಳಿದಾಗ, ಯುವಕನು ಒಂದು ನೆಪ ಹೇಳಿ ಓಡಿಹೋದನು.

ಮತ್ತಷ್ಟು ಓದಿ: ಹಸುವಿನ ಹಾಲು ಕುಡಿದು, ವಾಂತಿ ಮಾಡಿಕೊಂಡು ಮಹಿಳೆ ಸಾವು!

ಆಸ್ಪತ್ರೆ ಆಡಳಿತ ಮಂಡಳಿಯು ತಕ್ಷಣ ಲಸುಡಿಯಾ ಪೊಲೀಸರಿಗೆ ಮಾಹಿತಿ ನೀಡಿತು. ಪ್ರಾಥಮಿಕ ತನಿಖೆಯಲ್ಲಿ ಈ ಘಟನೆ ಮಹಾಲಕ್ಷ್ಮಿ ನಗರದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಹುಡುಗಿ ತನ್ನ ಸ್ನೇಹಿತರೊಂದಿಗೆ ಇದ್ದಳು. ಮಾಹಿತಿಯ ಪ್ರಕಾರ, ಮೂವರು ಯುವಕರು ಅಲ್ಲಿ ಮದ್ಯದ ಪಾರ್ಟಿ ಮಾಡುತ್ತಿದ್ದರು. ಈ ಸಮಯದಲ್ಲಿ ಗುಂಡು ಹಾರಿಸಲಾಯಿತು.

ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಆರೋಪಿ ಯುವಕ ತಡರಾತ್ರಿ ಕಟ್ಟಡದಿಂದ ಹೊರಬರುತ್ತಿರುವುದು ಕಂಡುಬಂದಿದೆ. ಕೊಠಡಿಯನ್ನು ಪರಿಶೀಲಿಸಿದಾಗ ಪೊಲೀಸರಿಗೆ ಮದ್ಯದ ಬಾಟಲಿಗಳು ಸಹ ಸಿಕ್ಕವು. ಇದು ಅಲ್ಲಿ ಒಂದು ಪಾರ್ಟಿ ನಡೆಯುತ್ತಿತ್ತು ಎಂಬುದು ದೃಢಪಟ್ಟಿದೆ. ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಓಡಿ ಹೋಗುವ ಭರದಲ್ಲಿ ಕೀಚೈನ್ ಬೀಳಿಸಿಕೊಂಡಿದ್ದರು. ಅದರ ಸಹಾಯದಿಂದ ಪತ್ತೆಮಾಡಿದ್ದಾರೆ. ಆಕೆಯನ್ನು ಕರೆ ತಂದ ಆರೋಪಿಗಳು ಆಕೆಯ ಕಣ್ಣಿಗೆ ಕಲ್ಲು ತಗುಲಿದೆ ಎಂದು ಹೇಳಿ ಬಿಟ್ಟು ಓಡಿಹೋಗಿದ್ದಾರೆ.

ವೈದ್ಯರು ಪರಿಶೀಲಿಸಿದಾಗ ಅದು ಕಲ್ಲಲ್ಲ, ಗುಂಡು ಎಂಬುದು ತಿಳಿದುಬಂದಿದೆ. ತಕ್ಷಣ ತೀವ್ರ ನಿಗಾ ಘಟಕಕ್ಕೆ ಕರೆದೊಯ್ಯಲಾಯಿತು ಮತ್ತು ವೆಂಟಿಲೇಟರ್‌ಗೆ ಒಳಪಡಿಸಲಾಯಿತು. ಪೊಲೀಸರ ಹೆಚ್ಚಿನ ತನಿಖೆಯಲ್ಲಿ ಆರೋಪಿಗಳು ಬಾಂಬೆ ಆಸ್ಪತ್ರೆಯಿಂದ ಸುಮಾರು 4 ಕಿ.ಮೀ ದೂರದಲ್ಲಿರುವ ನಿಪಾನಿಯಾದಲ್ಲಿ ಕಾರನ್ನು ಬಾಡಿಗೆಗೆ ಪಡೆದಿದ್ದರು ಎಂದು ತಿಳಿದುಬಂದಿದೆ.

ಕಾರಿನಲ್ಲಿಯೂ ರಕ್ತದ ಕಲೆಗಳು ಕಂಡುಬಂದಿದ್ದು, ಮಾಲೀಕರು ಅದನ್ನು ದಾಟಿಯಾ ನಿವಾಸಿ ಆಶು ಯಾದವ್ ಬಾಡಿಗೆಗೆ ಪಡೆದಿದ್ದರು ಎಂದು ದೃಢಪಡಿಸಿದ್ದಾರೆ. ಮೂವರು ಶಂಕಿತರನ್ನು ಪೊಲೀಸರು ಬಂಧಿಸಿದ್ದು, ಆಶು ಸೇರಿದಂತೆ ಇನ್ನಿಬ್ಬರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಭಾವನಾ ಮೇಕಪ್ ಆರ್ಟಿಸ್ಟ್ ಕೋರ್ಸ್‌ಗಾಗಿ ಇಂದೋರ್‌ಗೆ ಬಂದಿದ್ದರು ಮತ್ತು ಆಶು ಅವರ ಲಿವ್-ಇನ್ ಪಾರ್ಟ್‌ನರ್‌ನ ಸ್ನೇಹಿತರಾಗಿದ್ದರು. ಅವರು ತಮ್ಮ ಸ್ನೇಹಿತೆಯ ಆಹ್ವಾನದ ಮೇರೆಗೆ ಪಾರ್ಟಿಯಲ್ಲಿ ಭಾಗವಹಿಸಿದ್ದರು ಮತ್ತು ಪಾರ್ಟಿಯ ಮಧ್ಯದಲ್ಲಿ ಹೊರಡಲು ಮುಂದಾಗಿದ್ದಾಗ ಆಶು ಜೊತೆ ವಾಗ್ವಾದ ನಡೆಯಿತು. ಆಗ ಗುಂಡು ಹಾರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ