AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್​ನಲ್ಲಿ ವಿಡಿಯೋ ನೋಡಿ ಮನೆಯಲ್ಲಿಯೇ ಪತ್ನಿಗೆ ಹೆರಿಗೆ ಮಾಡಿಸಲು ಪತಿ ಯತ್ನ, ಮಹಿಳೆ ಸಾವು

ಕಳೆದ ಹಲವು ವರ್ಷಗಳಿಂದ ಯೂಟ್ಯೂಬ್ ಟ್ರೆಂಡ್ ಹೆಚ್ಚಾಗಿದೆ, ಅಡುಗೆಯ ರೆಸಿಪಿಯಿಂದ ಹಿಡಿದು ಯೋಗ, ವ್ಯಾಯಾಮದವರೆಗೂ ಯೂಟ್ಯೂಬ್​ನಲ್ಲಿ ನೋಡಿಕೊಂಡೇ ಮಾಡುವವರು ಹೆಚ್ಚು. ಇದೀಗ ವ್ಯಕ್ತಿಯೊಬ್ಬ ಯೂಟ್ಯೂಬ್ ವಿಡಿಯೋ ನೋಡಿ ಪತ್ನಿಗೆ ಹೆರಿಗೆ ಮಾಡಿಸಲು ಹೋಗಿ ಆಕೆ ಮನೆಯಲ್ಲಿಯೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಯೂಟ್ಯೂಬ್​ನಲ್ಲಿ ವಿಡಿಯೋ ನೋಡಿ ಮನೆಯಲ್ಲಿಯೇ ಪತ್ನಿಗೆ ಹೆರಿಗೆ ಮಾಡಿಸಲು ಪತಿ ಯತ್ನ, ಮಹಿಳೆ ಸಾವು
ಗರ್ಭಿಣಿImage Credit source: parents
ನಯನಾ ರಾಜೀವ್
|

Updated on: Aug 25, 2023 | 7:56 AM

Share

ಕಳೆದ ಹಲವು ವರ್ಷಗಳಿಂದ ಯೂಟ್ಯೂಬ್ ಟ್ರೆಂಡ್ ಹೆಚ್ಚಾಗಿದೆ, ಅಡುಗೆಯ ರೆಸಿಪಿಯಿಂದ ಹಿಡಿದು ಯೋಗ, ವ್ಯಾಯಾಮದವರೆಗೂ ಯೂಟ್ಯೂಬ್​ನಲ್ಲಿ ನೋಡಿಕೊಂಡೇ ಮಾಡುವವರು ಹೆಚ್ಚು. ಇದೀಗ ವ್ಯಕ್ತಿಯೊಬ್ಬ ಯೂಟ್ಯೂಬ್ ವಿಡಿಯೋ ನೋಡಿ ಪತ್ನಿಗೆ ಹೆರಿಗೆ ಮಾಡಿಸಲು ಹೋಗಿ ಆಕೆ ಮನೆಯಲ್ಲಿಯೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಗೂಗಲ್​ ಆಗಲಿ ಯೂಟ್ಯೂಬ್ ಆಗಲಿ ನಿಮ್ಮ ಮಾಹಿತಿಗಾಗಿಯೇ ಇರುವುದು ನಿಜ ಆದರೆ ಅದನ್ನು ನೋಡಿಕೊಂಡು ಯಾವುದೋ ಔಷಧಗಳನ್ನು ತೆಗೆದುಕೊಳ್ಳುವುದು, ಮಾತ್ರೆಗಳನ್ನು ತೆಗೆದುಕೊಳ್ಳುವ ಸಾಹಸಕ್ಕೆ ಕೈ ಹಾಕಬಾರದು.

ವ್ಯಕ್ತಿ ಮನೆಯಲ್ಲಿಯೇ ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸುತ್ತೀನಿ ಎಂದು ಹೋಗಿ ಪತ್ನಿಯನ್ನೇ ಕಳೆದುಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಕೃಷ್ಣಗಿರಿಯಲ್ಲಿ ವಾಸವಾಗಿರುವ ಮಾದೇಶ ಎಂಬುವವರ ಪತ್ನಿ ಲೋಕನಾಯಕಿ ಗರ್ಭಿಣಿಯಾಗಿದ್ದರು.

ಮಾಹಿತಿ ಪ್ರಕಾರ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು, ಆತ ಯೂಟ್ಯೂಬ್ ಮೂಲಕ ಮನೆಯಲ್ಲಿಯೇ ಹೆರಿಗೆ ಮಾಡಿಸಲು ಮುಂದಾಗಿದ್ದಾರೆ.

ಮತ್ತಷ್ಟು ಓದಿ: ಕೆಎಸ್​ಆರ್​​ಟಿಸಿ ಬಸ್​​ನಲ್ಲಿಯೇ ಹೆರಿಗೆ, ಮಹಿಳಾ ಕಂಡಕ್ಟರ್ ಸಮಯ ಪ್ರಜ್ಞೆಗೆ ಶ್ಲಾಘನೆ

ಹೆರಿಗೆಯೂ ಆಗಿದೆ ಆದರೆ ಹೊಕ್ಕುಳ ಬಳ್ಳಿಯನ್ನು ಸರಿಯಾಗಿ ಕತ್ತರಿಸಲು ಸಾಧ್ಯವಾಗಲಿಲ್ಲ, ರಕ್ತಸ್ರಾವ ಉಂಟಾಗಿ ಮಹಿಳೆ ಮೃತಪಟ್ಟಿದ್ದಾರೆ. ತಕ್ಷಣವೇ ಅವರನ್ನು ಹತ್ತಿರದ ಪಿಎಚ್​ಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಅಷ್ಟರಲ್ಲಾಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಥಿಕಾ ಪೊಲೀಸರಿಗೆ ದೂರು ನೀಡಿದ್ದಾರೆ. ಮಾದೇಶ್ ಅವರ ವಿರುದ್ಧ 174 ಸೆಕ್ಷನ್​ನಲ್ಲಿ ಪ್ರಕರಣ ದಾಖಲಿಸಲಾಗಿದೆ, ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ