AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೋ ಕಚ್ಚಿದೆ ಎಂದು ಲಿವ್ ಇನ್ ಸಂಗಾತಿಯನ್ನು ಆಸ್ಪತ್ರೆಗೆ ದಾಖಲಿಸಿ ಪರಾರಿಯಾದ ಗೆಳೆಯ, ಆಕೆ ಸಾವು

ಲಿವ್ ಇನ್ ಸಂಗಾತಿಯನ್ನು ಆಸ್ಪತ್ರೆಗೆ ಎತ್ತಿಕೊಂಡು ಬಂದು, ಸುಳ್ಳು ಹೆಸರಿನಲ್ಲಿ ಅಡ್ಮಿಟ್ ಮಾಡಿ ಆಕೆಯನ್ನು ಅಲ್ಲಿಯೇ ಬಿಟ್ಟು ಗೆಳೆಯ ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿ ನಡೆದಿದೆ. ಆಕೆ ಸಾವನ್ನಪ್ಪಿದ್ದಾಳೆ. ಗ್ವಾಲಿಯರ್​ನ ಜಿಲ್ಲಾ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಆರೋಪಿ ಯುವಕನನ್ನು ಬಂಧಿಸಿದ್ದಾರೆ. ಚೇತನ್ ಕುಕ್ರೇಜಾ ಎಂಬ ಯುವಕ ಮತ್ತು ಬಿಹಾರ ಮೂಲದ ಯುವತಿ ಮಲನ್​ಪುರ ಪ್ರದೇಶದಲ್ಲಿ ಕಳೆದ ಮೂರು ವರ್ಷಗಳಿಂದ ಲಿವ್​-ಇನ್ ಸಂಬಂಧದಲ್ಲಿದ್ದರು. ಇಬ್ಬರೂ ಒಂದೇ ಕಡೆ ಕೆಲಸ ಮಾಡುತ್ತಿದ್ದರು.

ಏನೋ ಕಚ್ಚಿದೆ ಎಂದು ಲಿವ್ ಇನ್ ಸಂಗಾತಿಯನ್ನು ಆಸ್ಪತ್ರೆಗೆ ದಾಖಲಿಸಿ ಪರಾರಿಯಾದ ಗೆಳೆಯ, ಆಕೆ ಸಾವು
ಆಸ್ಪತ್ರೆಗೆ ಕರೆತರುತ್ತಿರುವ ಸಂದರ್ಭ
ನಯನಾ ರಾಜೀವ್
| Edited By: |

Updated on:Jul 16, 2025 | 10:20 AM

Share

ಗ್ವಾಲಿಯರ್, ಜುಲೈ 16: ಆಕೆಗೆ ಏನೋ ಕಚ್ಚಿದೆ ನೋಡಿ ಎಂದು ಹೇಳುತ್ತಾ ಆಸ್ಪತ್ರೆಯ ಬಾಗಿಲಿನವರೆಗೆ ಲಿವ್- ಇನ್ ಸಂಗಾತಿ (Live-in Partner)ಯನ್ನು ಎತ್ತಿಕೊಂಡು ಬಂದಿದ್ದ ಗೆಳೆಯ ಆಕೆಯನ್ನು ಅಲ್ಲಿಯೇ ಬಿಟ್ಟು ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ (Gwalior) ​​ನಲ್ಲಿ ನಡೆದಿದೆ. ಆಕೆ ಸಾವನ್ನಪ್ಪಿದ್ದಾಳೆ. ಗ್ವಾಲಿಯರ್​ನ ಜಿಲ್ಲಾ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಆರೋಪಿ ಯುವಕನನ್ನು ಬಂಧಿಸಿದ್ದಾರೆ. ಚೇತನ್ ಕುಕ್ರೇಜಾ ಎಂಬ ಯುವಕ ಮತ್ತು ಬಿಹಾರ ಮೂಲದ ಯುವತಿ ಮಲನ್​ಪುರ ಪ್ರದೇಶದಲ್ಲಿ ಕಳೆದ ಮೂರು ವರ್ಷಗಳಿಂದ ಲಿವ್​-ಇನ್ ಸಂಬಂಧದಲ್ಲಿದ್ದರು. ಇಬ್ಬರೂ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಚೇತನ್ ಆಕೆಯನ್ನು ಅಡ್ಮಿಟ್ ಮಾಡುವಾಗ ಸುಳ್ಳು ಹೆಸರು ಹೇಳಿದ್ದ ಎಂಬುದು ತಿಳಿದುಬಂದಿದೆ.

ತಡರಾತ್ರಿ ಆಕೆಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತ್ತು. ಚೇತನ್ ಪ್ರಕಾರ, ಆಕೆಗೆ ಯಾವುದೋ ವಿಷಕಾರಿ ಕೀಟ ಕಚ್ಚಿದೆ, ನಂತರ ಆಕೆಯ ಸ್ಥಿತಿ ಬಹುಬೇಗ ಹದಗೆಡಲು ಶುರುವಾಗಿತ್ತು.

ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಚೇತನ್ ಆಟೋ ರಿಕ್ಷಾದಲ್ಲಿ ಕೂರಿಸಿ ಮುರಾರ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಬಾಲಕಿಯ ಸ್ಥಿತಿ ಗಂಭೀರವಾಗಿತ್ತು ಆತ ಭಯಗೊಂಡು ಆಕೆಯನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದಾನೆ. ಆಕೆ ಪ್ರಜ್ಞಾಹೀನಳಾಗಿರುವುದನ್ನು ಆಸ್ಪತ್ರೆಯ ಸಿಬ್ಬಂದಿ ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಚಿಕಿತ್ಸೆ ಸಮಯದಲ್ಲಿ ಆಕೆ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಲಿವ್​-ಇನ್ ಸಂಗಾತಿಯನ್ನು ಕೊಂದು ಮಂಚದ ಬಾಕ್ಸ್​​ನಲ್ಲಿ ಶವ ಬಚ್ಚಿಟ್ಟಿದ್ದ ಸೇಲ್ಸ್​ಮೆನ್

ಮಾಹಿತಿ ಪಡೆದ ಮುರಾರ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತಲುಪಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ಪ್ರಾರಂಭಿಸಿದರು. ಅದರಲ್ಲಿ ಆರೋಪಿ ಯುವಕ ಕಾಣಿಸಿಕೊಂಡಿದ್ದಾನೆ. ಯುವಕನ ಗುರುತು ಪತ್ತೆಯಾಗದಿದ್ದಾಗ, ಪೊಲೀಸರು ಆಟೋ ಸಂಖ್ಯೆಯ ಮೂಲಕ ಆಟೋ ಚಾಲಕನನ್ನು ಹಿಡಿದು ನಂತರ ಆರೋಪಿ ಯುವಕನ ಮನೆಗೆ ತಲುಪಿದ್ದರು.

ಅಲ್ಲಿ ಪೊಲೀಸರು ಚೇತನ್ ಕುಕ್ರೇಜಾನನ್ನು ಬಂಧಿಸಿದರು. ಪೊಲೀಸರ ಪ್ರಕಾರ, ಚೇತನ್ ನನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:50 am, Wed, 16 July 25

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್