AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಳಿ ತಲಾಖ್​ ಮೂಲಕ ವಿಚ್ಛೇದನ ಕೊಟ್ಟು, ಪತ್ನಿಯ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ ಪತಿ

ನಾಲ್ಕು ವರ್ಷಗಳ ಹಿಂದೆ ಇವರಿಬ್ಬರಿಗೂ ಮದುವೆಯಾಗಿದ್ದ ಈ ಜೋಡಿ ಇದೀಗ ಬೇರಾಗಿದ್ದಷ್ಟೇ ಅಲ್ಲ, ಮಹಿಳೆ ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ. ಘಟನೆಯ ಸಂಪೂರ್ಣ ವಿವರವನ್ನು ಠಾಣಾಧಿಕಾರಿ ದೀಪಕ್​ ಚತುರ್ವೇದಿ ಬಿಚ್ಚಿಟ್ಟಿದ್ದಾರೆ.

ತ್ರಿವಳಿ ತಲಾಖ್​ ಮೂಲಕ ವಿಚ್ಛೇದನ ಕೊಟ್ಟು, ಪತ್ನಿಯ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ ಪತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 29, 2021 | 12:55 PM

Share

ತ್ರಿವಳಿ ತಲಾಖ್​ ಮೂಲಕ ಪತ್ನಿಗೆ ವಿಚ್ಛೇದನ(Triple Talaq) ನೀಡಿದ್ದ ವ್ಯಕ್ತಿಯೊಬ್ಬ..ನಂತರವೂ ಆಕೆಗೆ ಹಿಂಸೆ ನೀಡಿದ ಪರಿಣಾಮ ಆ ಮಹಿಳೆ ಇದೀಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಕಿಶನ್​ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೂ, ಆರೋಪಿಯನ್ನು ಬಂಧಿಸಲು ಸಾಧ್ಯವಾಗಿಲ್ಲ.

ಸ್ಥಳೀಯ ಠಾಣಾಧಿಕಾರಿ ದೀಪಕ್​ ಚತುರ್ವೇದಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಇವರಿಬ್ಬರಿಗೂ ಮದುವೆಯಾಗಿತ್ತು. ದಂಪತಿಗೆ 18ತಿಂಗಳ ಗಂಡುಮಗು ಕೂಡ ಇದೆ. ಆದರೆ ಮೂರು ತಿಂಗಳ ಹಿಂದೆ ಆ ವ್ಯಕ್ತಿ ತ್ರಿವಳಿ ತಲಾಕ್​ ಮೂಲಕ ಪತ್ನಿಗೆ ಡಿವೋರ್ಸ್​ ನೀಡಿದ್ದ. ಅದಾದ ನಂತರ ಆಕೆ ಕಿಶನ್​ಪುರದಲ್ಲಿರುವ ತನ್ನ ತವರುಮನೆಗೆ ಹೋಗಿದ್ದಳು.

ಅದಾದ ಬಳಿಕ ಆಗಸ್ಟ್ 18ರಂದು ಆಕೆ ಪೊಲೀಸರಿಗೆ ದೂರು ನೀಡಿದ್ದಳು. ಪತಿ ತ್ರಿವಳಿ ತಲಾಕ್​ ಮೂಲಕ ವಿಚ್ಛೇದನ ನೀಡಿದ್ದಾನೆ. ಅಷ್ಟೇ ಅಲ್ಲ, ಈಗ ನನ್ನ ಮಗುವನ್ನು ಬಲವಂತವಾಗಿ ನನ್ನಿಂದ ಎಳೆದುಕೊಂಡು ಹೋಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಳು. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಪ್ರಾರಂಭಿಸಿದ್ದರು. ಆದರೆ ಆ ಮಹಿಳೆಯರ ಪತಿ ಇಷ್ಟಕ್ಕೇ ಸುಮ್ಮನಿರದೆ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ಅಶ್ಲೀಲ ವಿಡಿಯೋವೊಂದನ್ನು ವೈರಲ್ ಮಾಡಿದ್ದ. ಅದನ್ನು ನೋಡಿ ಮನನೊಂದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಅಧಿಕಾರಿ ದೀಪಕ್ ಹೇಳಿದ್ದಾರೆ.

ಇದನ್ನೂ ಓದಿ: ಬಾಲಿವುಡ್ ಅಥವಾ ಹಾಲಿವುಡ್- ನಿಮ್ಮ ಆಯ್ಕೆ ಯಾವುದು ಎಂಬ ಪ್ರಶ್ನೆಗೆ ಮುಖ ತಿರುಗಿಸಿಕೊಂಡು ನಡೆದ ಪ್ರಿಯಾಂಕ

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ರೈತರ ಮನೆ ಬಾಗಿಲಿಗೆ ಬರುತ್ತೆ ಪಶು ಸಂಜೀವಿನಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ